'ಮಾಯಾಂಗನೆ ಸುಮಲತಾ' ಟೀಕೆಗೆ ರಾಕಿಂಗ್ ಸ್ಟಾರ್ ಫುಲ್ ಗರಂ
Recommended Video

ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಗಿಂತ ಮಾಯಾಂಗನೆ ಎಂದು ಸಂಸದ ಶಿವರಾಮೇಗೌಡ ಟೀಕೆ ಮಾಡಿದ್ದರು. ಈ ಹೇಳಿಕೆಗೆ ಸುಮಲತಾ ಬೆಂಬಲಿಗರಿಂದ ಆಕ್ರೋಶ ವ್ಯಕ್ತವಾಗಿತ್ತು.
ನಟ ದರ್ಶನ್ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿ 'ಅವರು ಏನೇ ಹೇಳಿದ್ರು ನಾವು ರಿಯಾಕ್ಟ್ ಮಾಡಲ್ಲ' ಎಂದಿದ್ದರು. ಇದೀಗ, ಈ ಬಗ್ಗೆ ನಟ ಯಶ್ ಮಾತನಾಡಿ ಸಂಸದ ಶಿವರಾಮೇಗೌಡ ವಿರುದ್ಧ ಕಿಡಿಕಾರಿದ್ದಾರೆ.
'ಅಂಬರೀಶ್ ಅವರು ಇದ್ದಿದ್ರೆ ಬರಿ ಬೆರಳು ತೋರಿಸಲು ಯಾರಿಗಾದರೂ ತಾಕತ್ ಇತ್ತಾ? ಅವರಿಲ್ಲ ಎಂಬ ಕಾರಣಕ್ಕೆ ಈಗ ಏನೆಲ್ಲಾ ಮಾತಾಡ್ತಿದ್ದಾರೆ. ಈ ದುರಹಂಕಾರಕ್ಕೆ ಮಂಡ್ಯ ಜನರು ಪಾಠ ಕಲಿಸುತ್ತಾರೆ' ಎಂದು ಯಶ್ ತಿರುಗೇಟು ನೀಡಿದ್ದಾರೆ.

'ಹೆಣ್ಣುಮಕ್ಕಳ ವಿಚಾರಕ್ಕೆ ಬರಬಾರದು. ಅವರ ಮನೆಯಲ್ಲೂ ಹೆಣ್ಣು ಮಕ್ಕಳು ಇರ್ತಾರೆ. ಇವರ ಬಗ್ಗೆ ಮಾತನಾಡುವುದಕ್ಕೂ ಮುಂಚೆ ಅವರ ಹೆಣ್ಣು ಮಕ್ಕಳನ್ನ ನೆನಪು ಮಾಡಿಕೊಳ್ಳಲಿ. ಅವರ ಗಂಡ ಸ್ಪರ್ಧೆ ಮಾಡಿದ್ದ ಜಾಗದಲ್ಲಿ ಅವರು ಚುನಾವಣೆ ಸ್ಪರ್ಧಿಸಿದ್ದಾರೆ. ಅದರಲ್ಲಿ ಏನಿದು ತಪ್ಪು' ಎಂದು ಪ್ರಶ್ನಿಸಿದ್ದಾರೆ.
ಇಂದು ನಾಗಮಂಗಲದಲ್ಲಿ ಪ್ರಚಾರ ಮಾಡುತ್ತಿರುವ ಯಶ್, ಏಪ್ರಿಲ್ 14 ರಂದು ಕೆ ಆರ್ ಪೇಟೆ, ಏಪ್ರಿಲ್ 15 ರಂದು ಮಂಡ್ಯದಲ್ಲಿ ಪ್ರಚಾರ ಮಾಡಲಿದ್ದಾರೆ.


Click it and Unblock the Notifications











