Don't Miss!
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಾಯಾಂಗನೆ ಸುಮಲತಾ' ಟೀಕೆಗೆ ರಾಕಿಂಗ್ ಸ್ಟಾರ್ ಫುಲ್ ಗರಂ
Recommended Video
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಗಿಂತ ಮಾಯಾಂಗನೆ ಎಂದು ಸಂಸದ ಶಿವರಾಮೇಗೌಡ ಟೀಕೆ ಮಾಡಿದ್ದರು. ಈ ಹೇಳಿಕೆಗೆ ಸುಮಲತಾ ಬೆಂಬಲಿಗರಿಂದ ಆಕ್ರೋಶ ವ್ಯಕ್ತವಾಗಿತ್ತು.
ನಟ ದರ್ಶನ್ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿ 'ಅವರು ಏನೇ ಹೇಳಿದ್ರು ನಾವು ರಿಯಾಕ್ಟ್ ಮಾಡಲ್ಲ' ಎಂದಿದ್ದರು. ಇದೀಗ, ಈ ಬಗ್ಗೆ ನಟ ಯಶ್ ಮಾತನಾಡಿ ಸಂಸದ ಶಿವರಾಮೇಗೌಡ ವಿರುದ್ಧ ಕಿಡಿಕಾರಿದ್ದಾರೆ.
'ಅಂಬರೀಶ್ ಅವರು ಇದ್ದಿದ್ರೆ ಬರಿ ಬೆರಳು ತೋರಿಸಲು ಯಾರಿಗಾದರೂ ತಾಕತ್ ಇತ್ತಾ? ಅವರಿಲ್ಲ ಎಂಬ ಕಾರಣಕ್ಕೆ ಈಗ ಏನೆಲ್ಲಾ ಮಾತಾಡ್ತಿದ್ದಾರೆ. ಈ ದುರಹಂಕಾರಕ್ಕೆ ಮಂಡ್ಯ ಜನರು ಪಾಠ ಕಲಿಸುತ್ತಾರೆ' ಎಂದು ಯಶ್ ತಿರುಗೇಟು ನೀಡಿದ್ದಾರೆ.
'ಮಾಯಾಂಗನೆ ಸುಮಲತಾ' ಟೀಕೆಗೆ ದರ್ಶನ್ ಹೇಳಿದ್ದು ಮತ್ತದೇ ಉತ್ತರ
'ಹೆಣ್ಣುಮಕ್ಕಳ ವಿಚಾರಕ್ಕೆ ಬರಬಾರದು. ಅವರ ಮನೆಯಲ್ಲೂ ಹೆಣ್ಣು ಮಕ್ಕಳು ಇರ್ತಾರೆ. ಇವರ ಬಗ್ಗೆ ಮಾತನಾಡುವುದಕ್ಕೂ ಮುಂಚೆ ಅವರ ಹೆಣ್ಣು ಮಕ್ಕಳನ್ನ ನೆನಪು ಮಾಡಿಕೊಳ್ಳಲಿ. ಅವರ ಗಂಡ ಸ್ಪರ್ಧೆ ಮಾಡಿದ್ದ ಜಾಗದಲ್ಲಿ ಅವರು ಚುನಾವಣೆ ಸ್ಪರ್ಧಿಸಿದ್ದಾರೆ. ಅದರಲ್ಲಿ ಏನಿದು ತಪ್ಪು' ಎಂದು ಪ್ರಶ್ನಿಸಿದ್ದಾರೆ.
ಮಂಡ್ಯ ಪ್ರಚಾರದ ವೇಳೆ ಡೈಲಾಗ್ ಅರ್ಧಕ್ಕೆ ನಿಲ್ಲಿಸಿದ ದರ್ಶನ್, ಕಾರಣವೇನು?
ಇಂದು ನಾಗಮಂಗಲದಲ್ಲಿ ಪ್ರಚಾರ ಮಾಡುತ್ತಿರುವ ಯಶ್, ಏಪ್ರಿಲ್ 14 ರಂದು ಕೆ ಆರ್ ಪೇಟೆ, ಏಪ್ರಿಲ್ 15 ರಂದು ಮಂಡ್ಯದಲ್ಲಿ ಪ್ರಚಾರ ಮಾಡಲಿದ್ದಾರೆ.