Don't Miss!
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- News Heavy Rain: ರಣಭೀಕರ ಮಳೆಗೆ ರಾಷ್ಟ್ರೀಯ ಹೆದ್ದಾರಿ ಇಬ್ಭಾಗ: ಭೂಕುಸಿತದಿಂದ ರಸ್ತೆ ಸಂಪರ್ಕ ಬಂದ್-ಎಲ್ಲಿ?
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನಮ್ಮನ್ನ ಟಾರ್ಗೆಟ್ ಮಾಡೋರು ಹುಷಾರಾಗಿರಿ': ಯಶ್ ಎಚ್ಚರಿಕೆ
Recommended Video
ಮಂಡ್ಯದಲ್ಲಿ ಮುಖ್ಯಮಂತ್ರಿ ಮಗ ನಿಖಿಲ್ ಕುಮಾರ್ ಅವರ ವಿರುದ್ಧವಾಗಿ ಪ್ರಚಾರ ಮಾಡಿದವರನ್ನ ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಇದೇ ವಿಚಾರದಲ್ಲಿ ನಟ ದರ್ಶನ್ ಮತ್ತು ಯಶ್ ಅವರನ್ನ ಕೂಡ ಟಾರ್ಗೆಟ್ ಮಾಡಲಾಗುತ್ತೆ ಎಂಬ ಮಾತಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ನಟ ಯಶ್ ''ನಮ್ಮನ್ನ ಯಾರೂ ಟಾರ್ಗೆಟ್ ಮಾಡಲು ಸಾಧ್ಯವಿಲ್ಲ. ನಾವು ಮನೆ ಮಕ್ಕಳಂತೆ ಕೆಲಸ ಮಾಡಿದ್ದೀವಿ. ನಮಗೆ ನೂರರಷ್ಟು ನಂಬಿಕೆ ವಿಶ್ವಾಸವಿದೆ. ಸ್ವಾಭಿಮಾನಕ್ಕಾಗಿ ಸುಮಲತಾ ಅವರಿಗೆ ಮತ ನೀಡಿದ್ದಾರೆ. ನಾವು ಗೆಲ್ಲುತ್ತೇವೆ'' ಎಂದು ಯಶ್ ತಿಳಿಸಿದ್ದಾರೆ.
ನಿಖಿಲ್ ಗೆದ್ದರೇ ದರ್ಶನ್-ಯಶ್ ಗೆ ಎದುರಾಗುವ ಸವಾಲುಗಳು ಸಾಮಾನ್ಯವಲ್ಲ.!
'ನಮ್ಮನ್ನ ಟಾರ್ಗೆಟ್ ಮಾಡೋರು ಹುಷಾರಾಗಿರಬೇಕು, ನಾವು ಜನಗಳ ಆಸ್ತಿ. ನಮ್ಮನ್ನ ಏನೂ ಮಾಡೋಕೆ ಆಗಲ್ಲ. ಯಾರಾದರೂ ನನ್ನ ವಿಷ್ಯಕ್ಕೆ ಬಂದ್ರೆ ನಾನಂತೂ ಸುಮ್ಮನೆ ಬಿಡಲ್ಲ'' ಎಂದು ರಾಕಿಂಗ್ ಸ್ಟಾರ್ ಯಶ್ ಎಚ್ಚರಿಕೆ ನೀಡಿದ್ದಾರೆ.
'ಮಂಡ್ಯ ಅಲ್ಲ, ಕರ್ನಾಟಕ ಬಿಟ್ಟು ಹೋಗ್ತೀನಿ': ಸಿಎಂಗೆ ಯಶ್ ಸವಾಲ್
ಇತ್ತೀಚಿಗಷ್ಟೆ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡಿದ ಅವರು ''ನನ್ನ ಪರವಾಗಿ ಬೆಂಬಲ ನೀಡಿದವರಿಗೆ, ಪ್ರಚಾರ ಮಾಡಿದವರಿಗೆ ತೊಂದರೆ ನೀಡಲಾಗುತ್ತಿದೆ. ಟಾರ್ಗೆಟ್ ಮಾಡುತ್ತಿದ್ದಾರೆ'' ಎಂದು ಆರೋಪಿಸಿದ್ದರು.