Don't Miss!
- News ಚುನಾವಣೆ ಹೊತ್ತಲ್ಲೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ಗೆ ಕೋರ್ಟ್ ಸಮನ್ಸ್: ಯಾಕೆ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಜಿಎಫ್ ಸೆಟ್ನಿಂದ ದೊಡ್ಡ ಸಿಗ್ನಲ್ ಕೊಟ್ಟ ರಾಕಿ ಭಾಯ್
ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ಕೆಜಿಎಫ್ ಇಂದಿನಿಂದ ಮತ್ತೊಂದು ಹಂತದ ಚಿತ್ರೀಕರಣ ಆರಂಭಿಸಿದೆ. ಕೊರೊನಾ ವೈರಸ್ ಕಾರಣದಿಂದ ಶೂಟಿಂಗ್ಗೆ ಬ್ರೇಕ್ ಹಾಕಿದ್ದ ಚಿತ್ರತಂಡ ಕಳೆದ ತಿಂಗಳು ಬೆಂಗಳೂರಿನಲ್ಲಿ ಚಿತ್ರೀಕರಣ ಪುನರಾರಂಭಿಸಿತ್ತು.
ಇದೀಗ, ಬೆಂಗಳೂರಿನಿಂದ ಮಂಗಳೂರಿಗೆ ಶೂಟಿಂಗ್ ಸ್ಥಳಾಂತರ ಮಾಡಿದೆ. ವಿಶೇಷ ಅಂದ್ರೆ ಇಂದಿನಿಂದ ಚಿತ್ರೀಕರಣದಲ್ಲಿ ರಾಕಿ ಭಾಯ್ ಪಾಲ್ಗೊಂಡಿದ್ದಾರೆ. ಯಶ್ ಜೊತೆ ನಾಯಕಿ ಶ್ರಿನಿಧಿ ಶೆಟ್ಟಿ ಸಹ ಶೂಟಿಂಗ್ನಲ್ಲಿ ಭಾಗಿಯಾಗಿದ್ದಾರೆ.
'KGF-2' ಚಿತ್ರೀಕರಣಕ್ಕೆ ರಾಕಿ ಭಾಯ್-ರೀನಾ ಎಂಟ್ರಿ: ಎಲ್ಲಿ ನಡೆಯುತ್ತಿದೆ ಶೂಟಿಂಗ್?
ಯಶ್ ಚಿತ್ರೀಕರಣದಲ್ಲಿ ಭಾಗಿಯಾದ ನಂತರ ಫೇಸ್ಬುಕ್ನಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದು ದೊಡ್ಡ ಸಿಗ್ನಲ್ ಕೊಟ್ಟಿದ್ದಾರೆ. ''ಸಮುದ್ರದ ಅಲೆಗಳನ್ನು ನಿಲ್ಲಿಸಲಾಗುವುದಿಲ್ಲ ಆದರೆ ನೌಕಾಯಾನ ಮಾಡಲು ನೀವು ಕಲಿಯಬಹುದು .. ದೀರ್ಘ ವಿರಾಮದ ನಂತರ ರಾಕಿ ಇಂದಿನಿಂದ ನೌಕಾಯಾನ ಶುರು ಮಾಡಲಿದ್ದಾನೆ'' ಎಂದು ಕ್ಯಾಪ್ಷನ್ ಹಾಕಿದ್ದಾರೆ.
ಎಲ್ಲ ಅಂದುಕೊಂಡಂತೆ ಆಗಿದ್ದರೆ ಸಂಜಯ್ ದತ್ ಸಹ ಕೆಜಿಎಫ್ ಚಿತ್ರೀಕರಣದಲ್ಲಿ ತೊಡಗಿಸಿಕೊಳ್ಳಬೇಕಿತ್ತು. ಆದ್ರೆ, ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿರುವ ದತ್, ಶೂಟಿಂಗ್ ಮಾಡಲು ಸಾಧ್ಯವಾಗಲಿಲ್ಲ.
ಇದೀಗ, ಸಂಜಯ್ ದತ್ ಇಲ್ಲದೇ ಕೆಜಿಎಫ್ ಶೂಟಿಂಗ್ ಪ್ರಾರಂಭಿಸಿದೆ. ಸದ್ಯಕ್ಕೆ ದತ್ ಲಭ್ಯತೆ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಸಂಜು ಬಾಬು ಚೇತರಿಕೆ ಕಂಡ ಮೇಲೆ ಶೂಟಿಂಗ್ ಮಾಡಬಹುದು ಅಥವಾ ಮುಂದೆ ಏನು ಎನ್ನುವುದನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಬಹುದು.