Don't Miss!
- News ಬಂಡೀಪುರ: ಹುಲಿ ದಾಳಿಯಿಂದ ಮರಿಯಾನೆ ಸಾವು, ನಡುರಸ್ತೆಯಲ್ಲೇ ಮುಗಿಲು ಮುಟ್ಟಿದ ತಾಯಿಯ ಆಕ್ರಂದನ, ವಿಡಿಯೋ ವೈರಲ್
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೈರಲ್ ಆಯ್ತು ಯಶ್ ಕೆಜಿಎಫ್ ಚಿತ್ರದ ಖಡಕ್ ಡೈಲಾಗ್
Recommended Video
ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್' ಸಿನಿಮಾದ ಚಿತ್ರೀಕರಣ ಕೊನೆಯ ಹಂತಕ್ಕೆ ಬಂದು ತಲುಪಿದೆ. 'ಕೆಜಿಎಫ್' ಚಿತ್ರ ಯಾವಾಗ ಬಿಡುಗಡೆ ಆಗುತ್ತೆ ಎಂದು ಅಭಿಮಾನಿಗಳು ಕಾತುರದಿಂದ ಕಾದಿದ್ದಾರೆ. ಮೇಕಿಂಗ್ ಮತ್ತು ಪೋಸ್ಟರ್ ಗಳ ಮೂಲಕ ಚಿತ್ರದ ಬಗ್ಗೆ ದಿನೇ ದಿನೇ ಕುತೂಹಲ ಹೆಚ್ಚಾಗುತ್ತಿದೆ. ಇತ್ತೀಚಿಗಷ್ಟೆ ಯಶ್ ಖಾಸಗಿ ಕಾರ್ಯಕ್ರಮದ ವೇದಿಕೆ ಮೇಲೆ ಹೇಳಿದ 'ಕೆಜಿಎಫ್' ಚಿತ್ರದ ಮಾಸ್ ಡೈಲಾಗ್ ಸಖತ್ ವೈರಲ್ ಆಗಿದೆ.
ಈ ಹಿಂದೆಯೇ ರಾಕಿಂಗ್ ಸ್ಟಾರ್ ಯಶ್ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಕಾರ್ಯಕ್ರಮದಲ್ಲಿ ಕೆಜಿಎಫ್ ಸಿನಿಮಾದ ಡೈಲಾಗ್ ಹೇಳಿದ್ರು. ಆರಂಭದ ದಿನಗಳಲ್ಲಿ ಯಶ್ ಹೇಳಿದ್ದ ಆ ಡೈಲಾಗ್ ಸಖತ್ ವೈರಲ್ ಆಗಿತ್ತು. ಈಗ ಹೇಳಿರುವ ಡೈಲಾಗ್ ಎಲ್ಲರ ವಾಟ್ಸ್ ಆಪ್ ಗಳ ಸ್ಟೇಟಸ್ ಆಗಿ ಬದಲಾಗಿದೆ.
ಯಶ್ ಚಿತ್ರಕ್ಕಾಗಿ ಸಿದ್ದವಾಯ್ತು '80' ರ ದಶಕದ ಸೆಟ್
"ರಕ್ತದ ವಾಸನೆ ಕಂಡು ಬೇಜಾನ್ ಮೀನುಗಳು ಒಟ್ಟಿಗೆ ಬಂದ್ ಬಿಡ್ತವೆ, ಆದರೆ ಆ ಮೀನುಗಳಿಗೆ ಗೊತ್ತಿಲ್ಲ, ಆ ರಕ್ತ ಮೀನುಗಳನ್ನ ಬೇಟೆ ಆಡುವ ತಿಮಿಂಗಲದ್ದು ಅಂತ". ಈ ಮಾಸ್ ಡೈಲಾಗ್ 'ಕೆಜಿಎಫ್' ಸಿನಿಮಾದಲ್ಲಿದೆ ಎಂದು ಖುದ್ದು ಯಶ್ ಅವರೇ ಹೇಳಿದ್ದಾರೆ.
ಯಶ್ 'ಕೆಜಿಎಫ್' ಸಿನಿಮಾ ಬಗ್ಗೆ ಹೇಳುತ್ತಿರುವ ಎರಡನೇ ಡೈಲಾಗ್ ಇದಾಗಿದ್ದು ಇದರಿಂದಲೇ ಪ್ರೇಕ್ಷಕರು, ಅಭಿಮಾನಿಗಳು ಸಿನಿಮಾ ಎಷ್ಟರ ಮಟ್ಟಿಗೆ ಮಾಸ್ ಪೀಲ್ ಕೊಡುತ್ತೆ ಎನ್ನುವುದನ್ನ ಲೆಕ್ಕಾಚಾರ ಹಾಕಿದ್ದಾರೆ. ಸದ್ಯ ಕೊನೆಯ ಹಂತದಲ್ಲಿರುವ 'ಕೆಜಿಎಫ್' ಚಿತ್ರೀಕರಣ ಆದಷ್ಟು ಬೇಗ ಕಂಪ್ಲೀಟ್ ಆಗಲಿದೆ. ವರ್ಷದ ಅಂತ್ಯದೊಳಗೆ ಸಿನಿಮಾನೂ ಥಿಯೇಟರ್ ಅಂಗಳಕ್ಕೆ ಬರಲಿದೆ.