Don't Miss!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- News ಅರವಿಂದ್ ಕೇಜ್ರಿವಾಲ್ ಹತ್ಯೆ ಮಾಡಲು ಸಂಚು ನಡೆಯುತ್ತಿದೆ: ಎಎಪಿ ಗಂಭೀರ ಆರೋಪ
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫಿಲ್ಮ್ ಸಿಟಿ ಮೈಸೂರಿನಲ್ಲಿ ಆದರೆ ಒಳ್ಳೆಯದು: ನಟ ಯಶ್
ಸಿ ಎಂ ಯಡಿಯೂರಪ್ಪ ಬಜೆಟ್ ನಲ್ಲಿ ಚಿತ್ರರಂಗಕ್ಕೆ ಖುಷಿಯ ಸುದ್ದಿಯನ್ನು ನೀಡಿದ್ದಾರೆ. ಚಿತ್ರರಂಗದ ಬಹು ವರ್ಷದ ಕನಸಾಗಿದ್ದ ಫಿಲ್ಮ್ ಸಿಟಿಗೆ 500 ಕೋಟಿ ಅನುದಾನ ಘೋಷಿಸಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿಯೆ ಫಿಲ್ಮ್ ಸಿಟಿ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ.
Recommended Video
ಈ ಬಗ್ಗೆ ಮಾತನಾಡಿದ ರಾಕಿಂಗ್ ಸ್ಟಾರ್ ಚಿತ್ರರಂಗದ ಪರವಾಗಿ ಮುಖ್ಯಮಂತ್ರಿಗೆ ಧನ್ಯವಾದ ತಿಳಿಸಿದ್ದಾರೆ. ಸಿನಿಮಾ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಯಶ್ ಫಿಲ್ಮ್ ಸಿಟಿ ಮೈಸೂರಿನಲ್ಲಿ ಆದರೆ ಒಳ್ಳೆಯದು ಎಂದಿದ್ದಾರೆ. ಮುಂದೆ ಓದಿ..
ರಾಜ್ಯ ಬಜೆಟ್ ನಲ್ಲಿ ಚಿತ್ರರಂಗಕ್ಕೆ ಖುಷಿ ಸುದ್ದಿ ನೀಡಿದ ಯಡಿಯೂರಪ್ಪ
ಅವತ್ತೆ ಹೇಳಿದ್ದರು ಸಿಎಂ
ಅಂತರಾಷ್ಟ್ರೀಯ ನಲನಚಿತ್ರೋತ್ಸವದಲ್ಲಿ ಮಾತನಾಡಿದ್ದ ಯಶ್ ಫಿಲ್ಮ್ ಸಿಟಿ ನಿರ್ಮಾಣ ಮಾಡಿ ಎಂದು ಸಿ ಎಂ ಬಳಿ ಮನವಿ ಮಾಡಿಕೊಂಡಿದ್ದರು. ಈ ಬಗ್ಗೆ ಹೇಳಿದ ಯಶ್ "ತಕ್ಷಣ ಮಾಡುತ್ತೇನೆ ಎಂದು ಮೊನ್ನೆಯಷ್ಟೆ ಸಿಎಂ ಹೇಳಿದ್ದರು. ಈ ಬಾರಿಯ ಬಜೆಟ್ ನಲ್ಲಿಯೆ ಮಾಡುತ್ತೇನೆ ಎಂದಿದ್ದರು. ಹಾಗೆ ಮಾಡಿದ್ದಾರೆ" ಎಂದು ಹೇಳಿದ್ದಾರೆ.
ಸಿನಿಮಾ ಎಜುಕೇಶನ್ ಇರಬೇಕು
"ನಮ್ಮಲ್ಲಿ ವ್ಯವಸ್ಥೆ ಚೆನ್ನಾಗಿ ಇದ್ದಾರೆ ಸಿನಿಮಾ ಕಲಿಕೆಗೆ ಅವಕಾಶ ಸಿಗುತ್ತೆ. ದೊಡ್ಡದಾಗಿ ಯೋಚನೆ ಮಾಡಲು ಸಾಧ್ಯವಾಗುತ್ತೆ. ಇನ್ನು ಒಂದಿಷ್ಟು ವ್ಯವಸ್ತೆ ಆಗಬೇಕು. ಮುಖ್ಯವಾಗಿ ಸಿನಿಮಾ ಎಜುಕೇಶನ್ ತರ ಆಗಬೇಕು. ಕ್ರಿಯೆಟವ್ ಇರೋರಿಗೆ ಸಿನಿಮಾ ಒಳ್ಳೆಯ ಉದ್ಯಮ. ಎಲ್ಲಾ ಚೆನ್ನಾಗಿ ಆಗಬೇಕು ಎಂದರೆ ಸರ್ಕಾರ ಕೈ ಜೋಡಿಸಬೇಕು. ಆದಷ್ಟು ಬೇಗ ಫಿಲ್ಮ್ ಸಿಟಿ ಕಾರ್ಯರೂಪಕ್ಕೆ ಬರಲಿ". ಎಂದರು.
ಮೈಸೂರಲ್ಲ..ಬೆಂಗಳೂರಿನಲ್ಲೇ ಫಿಲ್ಮ್ ಸಿಟಿ ನಿರ್ಮಾಣ- ಅಶ್ವತ್ಥ್ ನಾರಾಯಣ್
ಮೈಸೂರಿನಲ್ಲಿ ಫಿಲ್ಮ್ ಸಿಟಿ ಆದರೆ ಒಳ್ಳೆಯದು
"ವೈಯಕ್ತಿಕವಾಗಿ ಹೇಳುವುದಾದರೆ ಮೈಸೂರಿನಲ್ಲಿ ಫಿಲ್ಮ್ ಸಿಟಿ ಆದರೆ ಒಳ್ಳೆಯದು. ಯಾಕಂದರೆ ಜನಸಂಖ್ಯೆ ಕಮ್ಮಿ ಇದೆ. ಟ್ರಾಫಿಕ್ ಕೂಡ ಇರಲ್ಲ. ಇನ್ನು ಮೈಸೂರು ಸಿನಿಮಾಗೆ ಪೂರಕವಾಗಿದೆ" ಎಂದರು. "ಎಲ್ಲಾದರು ಆಗಲಿ ಆದರೆ ರಾಜ್ಯಕ್ಕೆ ಫಿಲ್ಮ್ ಸಿಟಿ ಬೇಕು" ಎಂದು ಯಶ್ ಹೇಳಿದ್ದಾರೆ.
ಹೆಸರಘಟ್ಟದಲ್ಲಿ ಮಾಡುವುದಾಗಿ ಹೇಳಿದ್ದರು
ಬೆಂಗಳೂರಿನ ಹೊರವಲಯ ಹೆಸರಘಟ್ಟದಲ್ಲಿ ಫಿಲ್ಮ್ ಸಿಟಿ ಮಾಡುವ ಪ್ಲಾನ್ ಇದೆ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾಯಾರಣ್ ಹೇಳಿದ್ದರಂತೆ. ಈ ಬಗ್ಗೆ ಯಶ್ ಕೂಡ ಚರ್ಚೆ ಮಾಡಿರುವುದಾಗಿ ಹೇಳಿದ್ದಾರೆ. "ಹೆಸರಘಟ್ಟದಲ್ಲಿ ಆದರೆ ಟ್ರಾಫಿಕ್ ಸಮಸ್ಯೆ ಆಗುತ್ತೆ ಎಂದು ಹೇಳಿದ್ದೆ. ಹಾಗಾಗಿ ಹೆಸಘಟ್ಟಕ್ಕೆ ನೇರ ರಸ್ತೆ ಸಂಪರ್ಕ ಮಾಡುವುದಾಗಿ ಹೇಳಿದ್ದಾರೆ" ಎಂದಿದ್ದಾರೆ.
ಸಾಕಷ್ಟು ಮಂದೆ ಹಿರಿಯರಿದ್ದಾರೆ ಡಿಸೈಡ್ ಮಾಡುತ್ತಾರೆ
ಚಿತ್ರರಂಗದಲ್ಲಿ ಸಾಕಷ್ಟು ಮಂದಿ ಹಿರಿಯರಿದ್ದಾರೆ. ಎಲ್ಲರೂ ಡಿಸೈಡ್ ಮಾಡಿ ನಿರ್ಧಾರ ತೆಗೆದುಕೊಳ್ಳಲಿ. ಆದರೆ ಫಿಲ್ಮ್ ಸಿಟಿ ಮಾಡಿಕೊಟ್ಟಿದ್ದಾರೆ ಎಂದು ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.