Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಡಿಗೆ ಕಟ್ಟಿಲ್ಲ ಅಂತ ಪ್ರಮಾಣ ಮಾಡಿ ಹೇಳಲಿ: ಮನೆ ಮಾಲೀಕರಿಗೆ ಯಶ್ ಸವಾಲು.!
ರಾಕಿಂಗ್ ಸ್ಟಾರ್ ಯಶ್ ಇದೀಗ ಮತ್ತೆ ಬೇಡದ ವಿಷಯಕ್ಕೆ ಸದ್ದು ಮಾಡಿದ್ದಾರೆ. ಮೂರು ವರ್ಷಗಳ ಹಿಂದೆ ಸೌಂಡ್ ಮಾಡಿದ್ದ ಯಶ್ 'ಬಾಡಿಗೆ ಮನೆ ವಿವಾದ' ಇದೀಗ ಮತ್ತೆ ಬುಸುಗುಡುತ್ತಿದೆ.
ಬಾಕಿಯಿರುವ ಬಾಡಿಗೆ ಹಣ 9 ಲಕ್ಷದ 60 ಸಾವಿರ ಪಾವತಿಸಿ, ಮೂರು ತಿಂಗಳ ಒಳಗಾಗಿ ಮನೆ ಖಾಲಿ ಮಾಡಬೇಕು ಎಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಿನ್ನೆ ಆದೇಶ ನೀಡಿತು. ಇದರಿಂದಾಗಿ, ಯಶ್ 'ಬಾಡಿಗೆ ಮನೆ' ರಗಳೆ ಮತ್ತೆ ಮಾಧ್ಯಮಗಳಲ್ಲಿ 'ಬ್ರೇಕಿಂಗ್ ನ್ಯೂಸ್' ಆಯ್ತು.
ಇಷ್ಟು ದಿನ ಮನೆಗೆ ಬಾಡಿಗೆ ಕಟ್ಟದ ವಿಚಾರದ ಬಗ್ಗೆ ಎಲ್ಲೂ ತುಟಿಕ್ ಪಿಟಿಕ್ ಎನ್ನದ ರಾಕಿಂಗ್ ಸ್ಟಾರ್ ಯಶ್ ಇಂದು ಫೇಸ್ ಬುಕ್ ಲೈವ್ ನಲ್ಲಿ ಮನಬಿಚ್ಚಿ ಮಾತನಾಡಿದರು.
ಗಾದೆ : "ದಡ್ಡರು ಮನೆ ಕಟ್ತಾರೆ, ಬುದ್ಧಿವಂತರು ಅಲ್ಲಿ ವಾಸಿಸುತ್ತಾರೆ"
''ನಾನು ಪ್ರತಿ ತಿಂಗಳೂ ಬಾಡಿಗೆ ಕಟ್ಟಿದ್ದೇನೆ. ಆ ಮನೆ ನನಗೆ ಲಕ್ಕಿ ಅಂತ ಕೆಲವರು ಹೇಳ್ತಿದ್ದಾರೆ. ಅದು ಸುಳ್ಳು. ನನಗೆ ಅಂತಹ ಮೂಢನಂಬಿಕೆ ಇಲ್ಲ. ನಾನು ಬಾಡಿಗೆ ಕಟ್ಟಿಲ್ಲ ಅಂತ ಮನೆ ಮಾಲೀಕರು ಅವರ ಮಗಳ ಮೇಲೆ ಪ್ರಮಾಣ ಮಾಡಿ ಹೇಳಲಿ, ಆಗ ಅವರು ಹೇಳಿದ್ದನ್ನ ಕೊಡುತ್ತೇನೆ'' ಎಂದು ಫೇಸ್ ಬುಕ್ ಲೈವ್ ನಲ್ಲಿ ನಟ ಯಶ್ ಸವಾಲು ಹಾಕಿದ್ದಾರೆ.
'ಯಶ್ ಇಮೇಜ್ ಗೆ ಡ್ಯಾಮೇಜ್ ಮಾಡುವ ಕೆಲಸವಿದು!'
ಬಾಡಿಗೆ ಕಟ್ಟಿರುವ ಬಗ್ಗೆ ಫೇಸ್ ಬುಕ್ ಲೈವ್ ವೇಳೆಯಲ್ಲೂ ನಟ ಯಶ್ ದಾಖಲೆಗಳನ್ನ ಪ್ರಸ್ತುತ ಪಡಿಸಿದರು.
3 ತಿಂಗಳಲ್ಲಿ ಮನೆ ಖಾಲಿ ಮಾಡ್ಬೇಕು: ಯಶ್ ಗೆ ಸಿವಿಲ್ ಕೋರ್ಟ್ ಆದೇಶ
ಮನೆ ಖಾಲಿ ಮಾಡಿ, ಕೀ ಕೊಡುವ ಸಂದರ್ಭದಲ್ಲಿ ಮನೆ ಮಾಲೀಕರು ಹಾಗೂ ಯಶ್ ತಾಯಿ ಪುಷ್ಪ ನಡುವೆ ಸಣ್ಣ ಜಗಳ ಆಯಿತಂತೆ. ಆ ಜಗಳ ಹಾಗೂ ಮನೆ ಮಾಲೀಕರ ಅಹಂ ನಿಂದಾಗಿ ಇಷ್ಟೊಂದು ದೊಡ್ಡ ರಾದ್ಧಾಂತ ಆಗಿದೆ ಎಂದಿದ್ದಾರೆ ನಟ ಯಶ್.