Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಡಿಗೆ ಕಟ್ಟಿಲ್ಲ ಅಂತ ಪ್ರಮಾಣ ಮಾಡಿ ಹೇಳಲಿ: ಮನೆ ಮಾಲೀಕರಿಗೆ ಯಶ್ ಸವಾಲು.!
ರಾಕಿಂಗ್ ಸ್ಟಾರ್ ಯಶ್ ಇದೀಗ ಮತ್ತೆ ಬೇಡದ ವಿಷಯಕ್ಕೆ ಸದ್ದು ಮಾಡಿದ್ದಾರೆ. ಮೂರು ವರ್ಷಗಳ ಹಿಂದೆ ಸೌಂಡ್ ಮಾಡಿದ್ದ ಯಶ್ 'ಬಾಡಿಗೆ ಮನೆ ವಿವಾದ' ಇದೀಗ ಮತ್ತೆ ಬುಸುಗುಡುತ್ತಿದೆ.
ಬಾಕಿಯಿರುವ ಬಾಡಿಗೆ ಹಣ 9 ಲಕ್ಷದ 60 ಸಾವಿರ ಪಾವತಿಸಿ, ಮೂರು ತಿಂಗಳ ಒಳಗಾಗಿ ಮನೆ ಖಾಲಿ ಮಾಡಬೇಕು ಎಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಿನ್ನೆ ಆದೇಶ ನೀಡಿತು. ಇದರಿಂದಾಗಿ, ಯಶ್ 'ಬಾಡಿಗೆ ಮನೆ' ರಗಳೆ ಮತ್ತೆ ಮಾಧ್ಯಮಗಳಲ್ಲಿ 'ಬ್ರೇಕಿಂಗ್ ನ್ಯೂಸ್' ಆಯ್ತು.
ಇಷ್ಟು ದಿನ ಮನೆಗೆ ಬಾಡಿಗೆ ಕಟ್ಟದ ವಿಚಾರದ ಬಗ್ಗೆ ಎಲ್ಲೂ ತುಟಿಕ್ ಪಿಟಿಕ್ ಎನ್ನದ ರಾಕಿಂಗ್ ಸ್ಟಾರ್ ಯಶ್ ಇಂದು ಫೇಸ್ ಬುಕ್ ಲೈವ್ ನಲ್ಲಿ ಮನಬಿಚ್ಚಿ ಮಾತನಾಡಿದರು.
ಗಾದೆ : "ದಡ್ಡರು ಮನೆ ಕಟ್ತಾರೆ, ಬುದ್ಧಿವಂತರು ಅಲ್ಲಿ ವಾಸಿಸುತ್ತಾರೆ"
''ನಾನು ಪ್ರತಿ ತಿಂಗಳೂ ಬಾಡಿಗೆ ಕಟ್ಟಿದ್ದೇನೆ. ಆ ಮನೆ ನನಗೆ ಲಕ್ಕಿ ಅಂತ ಕೆಲವರು ಹೇಳ್ತಿದ್ದಾರೆ. ಅದು ಸುಳ್ಳು. ನನಗೆ ಅಂತಹ ಮೂಢನಂಬಿಕೆ ಇಲ್ಲ. ನಾನು ಬಾಡಿಗೆ ಕಟ್ಟಿಲ್ಲ ಅಂತ ಮನೆ ಮಾಲೀಕರು ಅವರ ಮಗಳ ಮೇಲೆ ಪ್ರಮಾಣ ಮಾಡಿ ಹೇಳಲಿ, ಆಗ ಅವರು ಹೇಳಿದ್ದನ್ನ ಕೊಡುತ್ತೇನೆ'' ಎಂದು ಫೇಸ್ ಬುಕ್ ಲೈವ್ ನಲ್ಲಿ ನಟ ಯಶ್ ಸವಾಲು ಹಾಕಿದ್ದಾರೆ.
'ಯಶ್ ಇಮೇಜ್ ಗೆ ಡ್ಯಾಮೇಜ್ ಮಾಡುವ ಕೆಲಸವಿದು!'
ಬಾಡಿಗೆ ಕಟ್ಟಿರುವ ಬಗ್ಗೆ ಫೇಸ್ ಬುಕ್ ಲೈವ್ ವೇಳೆಯಲ್ಲೂ ನಟ ಯಶ್ ದಾಖಲೆಗಳನ್ನ ಪ್ರಸ್ತುತ ಪಡಿಸಿದರು.
3 ತಿಂಗಳಲ್ಲಿ ಮನೆ ಖಾಲಿ ಮಾಡ್ಬೇಕು: ಯಶ್ ಗೆ ಸಿವಿಲ್ ಕೋರ್ಟ್ ಆದೇಶ
ಮನೆ ಖಾಲಿ ಮಾಡಿ, ಕೀ ಕೊಡುವ ಸಂದರ್ಭದಲ್ಲಿ ಮನೆ ಮಾಲೀಕರು ಹಾಗೂ ಯಶ್ ತಾಯಿ ಪುಷ್ಪ ನಡುವೆ ಸಣ್ಣ ಜಗಳ ಆಯಿತಂತೆ. ಆ ಜಗಳ ಹಾಗೂ ಮನೆ ಮಾಲೀಕರ ಅಹಂ ನಿಂದಾಗಿ ಇಷ್ಟೊಂದು ದೊಡ್ಡ ರಾದ್ಧಾಂತ ಆಗಿದೆ ಎಂದಿದ್ದಾರೆ ನಟ ಯಶ್.