Don't Miss!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- News Lok Sabha Election: ಕರ್ನಾಟಕದ ಈ ಕ್ಷೇತ್ರದಲ್ಲಿ ಮಹಿಳಾ ಮತದಾರರೇ ನಿರ್ಣಾಯಕ
- Sports ರೋಹಿತ್ ಶರ್ಮಾ ಬಳಿಕ ಭಾರತ ತಂಡದ ನಾಯಕನಾರು?; ಅಚ್ಚರಿ ಹೆಸರು ತಿಳಿಸಿದ ಹರ್ಭಜನ್ ಸಿಂಗ್!
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಪ್ಪು' ಬಳಗವನ್ನ ಸೋಲಿಸಿ ಫೈನಲ್ ಗೆ ಲಗ್ಗೆಯಿಟ್ಟ ಯಶ್ 'ವಾರಿಯರ್ಸ್'
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 'ಗಂಗಾ ವಾರಿಯರ್ಸ್' ತಂಡವನ್ನ ಮಣಿಸಿ, ರಾಕಿಂಗ್ ಸ್ಟಾರ್ ಯಶ್ ಅವರ 'ರಾಷ್ಟ್ರಕೂಟ ಪ್ಯಾಂಥರ್ಸ್' ತಂಡ ಕೆಸಿಸಿ ಎರಡನೇ ಆವೃತ್ತಿಯಲ್ಲಿ ಫೈನಲ್ ಗೆ ಲಗ್ಗೆಯಿಟ್ಟಿದೆ.
ಇಂದು ರಾತ್ರಿ 8.15 ಗಂಟೆಗೆ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಗೋಲ್ಡನ್ ಸ್ಟಾರ್ ಸಾರಥ್ಯದ 'ಒಡೆಯರ್ ಚಾರ್ಜರ್ಸ್' ತಂಡವನ್ನ ಯಶ್ ಅವರ ತಂಡ ಎದುರಿಸಲಿದೆ.
ಯಶ್ ತಂಡ ಗೆದ್ರೆ ಎಲ್ಲ ಪಕ್ಕಾ, ಸೋತ್ರೆ ಎಲ್ಲ ಉಲ್ಟಾ ಪಲ್ಟಾ.!
110 ರನ್ ಗಳ ಗುರಿಯನ್ನ ಬೆನ್ನತ್ತಿದ ಗಂಗಾ ವಾರಿಯರ್ಸ್ ಡಾರ್ಲಿಂಗ್ ಕೃಷ್ಣ ಮತ್ತು ಸ್ಟಾಲೀನ್ ಹುವರ್ ಅವರ ಭರ್ಜರಿ ಆಟದ ನೆರವಿನಿಂದ 9 ವಿಕೆಟ್ ಗಳ ಜಯ ಗಳಿಸಿದೆ. ಸ್ಟಾಲೀನ್ ಹುವರ್ 28 ಎಸೆತಗಳಲ್ಲಿ 72 ರನ್ನ ಬಾರಿಸಿ ಅಮೋಘ ಆಟ ಪ್ರದರ್ಶಿಸಿದರು. ಇವರಿಗೆ ಉತ್ತಮ ಸಾಥ್ ನೀಡಿದ ನಟ ಡಾರ್ಲಿಂಗ್ ಕೃಷ್ಣ 23 ರನ್ ಬಾರಿಸುವ ಮೂಲಕ ಜಯದ ದಡ ಸೇರಿಸಿದರು.
ಫೈನಲ್ ಹಂತ ತಲುಪಿದ ಮೊದಲ ತಂಡವಾದ ಗಣೇಶ್ ಟೀಂ
ಅದಕ್ಕೂ ಮುಂಚೆ ಮೊದಲು ಬ್ಯಾಟ್ ಮಾಡಿದ್ದ ಗಂಗಾ ವಾರಿಯರ್ಸ್, ನಿಹಾಲ್ ಉಲ್ಲಾಳ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 109 ರನ್ ಗಳಿಸಿತು. ನಿಹಾಲ್ ಉಲ್ಲಾಳ್ 21 ಎಸೆತಗಳಲ್ಲಿ 47 ರನ್ ಚಚ್ಚಿದರು. ಸ್ಟಾರ್ ಆಟಗಾರ ಲ್ಯಾನ್ಸ್ ಕ್ಲೂಸ್ನರ್ ಕೇವಲ 10 ರನ್ ಗಳಿಸಿದ್ದರು.
ರಾಷ್ಟ್ರಕೂಟ ತಂಡದ ಪರವಾಗಿ ಕೆ. ಕಾಮತ್ 20 ರನ್ ನೀಡಿ 3 ವಿಕೆಟ್ ಪಡೆದರು. ಪ್ರೀತಂ ಗುಬ್ಬಿ ಮಹತ್ವದ ಎರಡು ವಿಕೆಟ್ಗಳನ್ನು ಪಡೆದು ಗಮನ ಸೆಳೆದರು.