Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಪ್ಪು' ಬಳಗವನ್ನ ಸೋಲಿಸಿ ಫೈನಲ್ ಗೆ ಲಗ್ಗೆಯಿಟ್ಟ ಯಶ್ 'ವಾರಿಯರ್ಸ್'
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 'ಗಂಗಾ ವಾರಿಯರ್ಸ್' ತಂಡವನ್ನ ಮಣಿಸಿ, ರಾಕಿಂಗ್ ಸ್ಟಾರ್ ಯಶ್ ಅವರ 'ರಾಷ್ಟ್ರಕೂಟ ಪ್ಯಾಂಥರ್ಸ್' ತಂಡ ಕೆಸಿಸಿ ಎರಡನೇ ಆವೃತ್ತಿಯಲ್ಲಿ ಫೈನಲ್ ಗೆ ಲಗ್ಗೆಯಿಟ್ಟಿದೆ.
ಇಂದು ರಾತ್ರಿ 8.15 ಗಂಟೆಗೆ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಗೋಲ್ಡನ್ ಸ್ಟಾರ್ ಸಾರಥ್ಯದ 'ಒಡೆಯರ್ ಚಾರ್ಜರ್ಸ್' ತಂಡವನ್ನ ಯಶ್ ಅವರ ತಂಡ ಎದುರಿಸಲಿದೆ.
ಯಶ್ ತಂಡ ಗೆದ್ರೆ ಎಲ್ಲ ಪಕ್ಕಾ, ಸೋತ್ರೆ ಎಲ್ಲ ಉಲ್ಟಾ ಪಲ್ಟಾ.!
110 ರನ್ ಗಳ ಗುರಿಯನ್ನ ಬೆನ್ನತ್ತಿದ ಗಂಗಾ ವಾರಿಯರ್ಸ್ ಡಾರ್ಲಿಂಗ್ ಕೃಷ್ಣ ಮತ್ತು ಸ್ಟಾಲೀನ್ ಹುವರ್ ಅವರ ಭರ್ಜರಿ ಆಟದ ನೆರವಿನಿಂದ 9 ವಿಕೆಟ್ ಗಳ ಜಯ ಗಳಿಸಿದೆ. ಸ್ಟಾಲೀನ್ ಹುವರ್ 28 ಎಸೆತಗಳಲ್ಲಿ 72 ರನ್ನ ಬಾರಿಸಿ ಅಮೋಘ ಆಟ ಪ್ರದರ್ಶಿಸಿದರು. ಇವರಿಗೆ ಉತ್ತಮ ಸಾಥ್ ನೀಡಿದ ನಟ ಡಾರ್ಲಿಂಗ್ ಕೃಷ್ಣ 23 ರನ್ ಬಾರಿಸುವ ಮೂಲಕ ಜಯದ ದಡ ಸೇರಿಸಿದರು.
ಫೈನಲ್ ಹಂತ ತಲುಪಿದ ಮೊದಲ ತಂಡವಾದ ಗಣೇಶ್ ಟೀಂ
ಅದಕ್ಕೂ ಮುಂಚೆ ಮೊದಲು ಬ್ಯಾಟ್ ಮಾಡಿದ್ದ ಗಂಗಾ ವಾರಿಯರ್ಸ್, ನಿಹಾಲ್ ಉಲ್ಲಾಳ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 109 ರನ್ ಗಳಿಸಿತು. ನಿಹಾಲ್ ಉಲ್ಲಾಳ್ 21 ಎಸೆತಗಳಲ್ಲಿ 47 ರನ್ ಚಚ್ಚಿದರು. ಸ್ಟಾರ್ ಆಟಗಾರ ಲ್ಯಾನ್ಸ್ ಕ್ಲೂಸ್ನರ್ ಕೇವಲ 10 ರನ್ ಗಳಿಸಿದ್ದರು.
ರಾಷ್ಟ್ರಕೂಟ ತಂಡದ ಪರವಾಗಿ ಕೆ. ಕಾಮತ್ 20 ರನ್ ನೀಡಿ 3 ವಿಕೆಟ್ ಪಡೆದರು. ಪ್ರೀತಂ ಗುಬ್ಬಿ ಮಹತ್ವದ ಎರಡು ವಿಕೆಟ್ಗಳನ್ನು ಪಡೆದು ಗಮನ ಸೆಳೆದರು.