ಅಶ್ವತ್ ನಾರಾಯಣ ಜೊತೆ ತಮಿಳಿನಾಡಿನ ದೇವಸ್ಥಾನಕ್ಕೆ ಭೇಟಿ ನೀಡಿದ ಯಶ್

ರಾಕಿಂಗ್ ಸ್ಟಾರ್ ಯಶ್ ಮತ್ತು ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಅಶ್ವತ್ ನಾರಾಯಣ ಇಬ್ಬರು ತಮಿಳುನಾಡಿನಲ್ಲಿರುವ ಶನೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

Recommended Video

ಇದು ಯಶ್ ರಾಜಕೀಯ ಪ್ರವೇಶದ ಸುಳಿವಾ..? | Filmibeat kannada

ಯಶ್ ಮತ್ತು ಅಶ್ವತ್ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಶೇಷ ಹೆಲಿಕಾಫ್ಟರ್ ಮೂಲಕ ಯಶ್ ಮತ್ತು ಡಿಸಿಎಂ ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿರುವ ಶನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಡಿಸಿಎಂ ಜೊತೆ ರಾಕಿಂಗ್ ಸ್ಟಾರ್ ದಿಢೀರ್ ದೇವಸ್ಥಾನ ಪ್ರವಾಸ ಹಿನ್ನೆಲೆ ಹಲವು ರೀತಿಯ ಚರ್ಚೆಗಳು ಶುರುವಾಗಿದೆ. ಈ ಹಿಂದಿನಿಂದಲೂ ಯಶ್ ಅವರ ರಾಜಕೀಯ ಪ್ರವೇಶದ ಕುರಿತು ಸುದ್ದಿಯಾಗುತ್ತಲೇ ಇದೆ. ಯಶೋಮಾರ್ಗದ ಮೂಲಕ ಉತ್ತರ ಕರ್ನಾಟಕದ ಹಲವು ಹಳ್ಳಿಗಳಿಗೆ ನೀರು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಶ್ ರಾಜಕೀಯ ಪ್ರವೇಶಕ್ಕೆ ಎಲ್ಲ ತಯಾರಿ ನಡೆಸುತ್ತಿದ್ದಾರೆ ಎಂಬ ಅಭಿಪ್ರಾಯವೂ ಸೋಶಿಯಲ್ ಮೀಡಿಯಾದಲ್ಲಿ ಕೇಳಿ ಬರುತ್ತಿದೆ.

 Yash Visited Tirunallar Saniswaran Temple With DCM Ashwath narayana

ಭಾರತದ ಬಹುನಿರೀಕ್ಷೆಯ ಕೆಜಿಎಫ್ ಸಿನಿಮಾದ ಚಿತ್ರೀಕರಣ ಅಂತಿಮ ಹಂತದಲ್ಲಿದೆ. ಸದ್ಯದ ಮಾಹಿತಿ ಪ್ರಕಾರ ರಾಕಿಂಗ್ ಸ್ಟಾರ್ ಯಶ್ ಹಾಗೂ ಸಂಜಯ್ ದತ್ ಅವರ ಭಾಗದ ಶೂಟಿಂಗ್ ಮುಗಿದಿದೆ.

ಬಾಕಿ ಉಳಿದಿರುವ ಕೆಲವು ಪ್ರಮುಖ ದೃಶ್ಯಗಳನ್ನು ಸೆರೆಹಿಡಿಯಲಾಗುತ್ತಿದೆ. ಜನವರಿ ತಿಂಗಳಲ್ಲಿ ಕೆಜಿಎಫ್ ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಲಿದೆ ಎಂದು ಹೇಳಲಾಗಿದೆ. ಆದರೆ, ಬಿಡುಗಡೆ ಬಗ್ಗೆ ಯಾವುದೇ ಮಾಹಿತಿ ಇಲ್ಲ.

More from Filmibeat

English summary
Kannada actor Yash visited tirunallar saniswaran temple with karnataka deputy chief minister Ashwath narayana.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X