Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಶ್ವತ್ ನಾರಾಯಣ ಜೊತೆ ತಮಿಳಿನಾಡಿನ ದೇವಸ್ಥಾನಕ್ಕೆ ಭೇಟಿ ನೀಡಿದ ಯಶ್
ರಾಕಿಂಗ್ ಸ್ಟಾರ್ ಯಶ್ ಮತ್ತು ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಅಶ್ವತ್ ನಾರಾಯಣ ಇಬ್ಬರು ತಮಿಳುನಾಡಿನಲ್ಲಿರುವ ಶನೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
Recommended Video
ಯಶ್ ಮತ್ತು ಅಶ್ವತ್ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಶೇಷ ಹೆಲಿಕಾಫ್ಟರ್ ಮೂಲಕ ಯಶ್ ಮತ್ತು ಡಿಸಿಎಂ ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿರುವ ಶನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಕೆಜಿಎಫ್ 2 ಚಿತ್ರೀಕರಣ ಮುಗಿದರೂ ಮನೆಗೆ ಹೋಗದೆ ಹೋಟೆಲ್ನಲ್ಲಿ ಉಳಿದ ಯಶ್!?
ಡಿಸಿಎಂ ಜೊತೆ ರಾಕಿಂಗ್ ಸ್ಟಾರ್ ದಿಢೀರ್ ದೇವಸ್ಥಾನ ಪ್ರವಾಸ ಹಿನ್ನೆಲೆ ಹಲವು ರೀತಿಯ ಚರ್ಚೆಗಳು ಶುರುವಾಗಿದೆ. ಈ ಹಿಂದಿನಿಂದಲೂ ಯಶ್ ಅವರ ರಾಜಕೀಯ ಪ್ರವೇಶದ ಕುರಿತು ಸುದ್ದಿಯಾಗುತ್ತಲೇ ಇದೆ. ಯಶೋಮಾರ್ಗದ ಮೂಲಕ ಉತ್ತರ ಕರ್ನಾಟಕದ ಹಲವು ಹಳ್ಳಿಗಳಿಗೆ ನೀರು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಶ್ ರಾಜಕೀಯ ಪ್ರವೇಶಕ್ಕೆ ಎಲ್ಲ ತಯಾರಿ ನಡೆಸುತ್ತಿದ್ದಾರೆ ಎಂಬ ಅಭಿಪ್ರಾಯವೂ ಸೋಶಿಯಲ್ ಮೀಡಿಯಾದಲ್ಲಿ ಕೇಳಿ ಬರುತ್ತಿದೆ.
ಭಾರತದ ಬಹುನಿರೀಕ್ಷೆಯ ಕೆಜಿಎಫ್ ಸಿನಿಮಾದ ಚಿತ್ರೀಕರಣ ಅಂತಿಮ ಹಂತದಲ್ಲಿದೆ. ಸದ್ಯದ ಮಾಹಿತಿ ಪ್ರಕಾರ ರಾಕಿಂಗ್ ಸ್ಟಾರ್ ಯಶ್ ಹಾಗೂ ಸಂಜಯ್ ದತ್ ಅವರ ಭಾಗದ ಶೂಟಿಂಗ್ ಮುಗಿದಿದೆ.
ಕೆಜಿಎಫ್ ಚಾಪ್ಟರ್-2 ಚಿತ್ರದಲ್ಲಿ ತೆಲುಗು ನಟ ಬಾಲಕೃಷ್ಣ?
ಬಾಕಿ ಉಳಿದಿರುವ ಕೆಲವು ಪ್ರಮುಖ ದೃಶ್ಯಗಳನ್ನು ಸೆರೆಹಿಡಿಯಲಾಗುತ್ತಿದೆ. ಜನವರಿ ತಿಂಗಳಲ್ಲಿ ಕೆಜಿಎಫ್ ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಲಿದೆ ಎಂದು ಹೇಳಲಾಗಿದೆ. ಆದರೆ, ಬಿಡುಗಡೆ ಬಗ್ಗೆ ಯಾವುದೇ ಮಾಹಿತಿ ಇಲ್ಲ.