Don't Miss!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- News ವಿರಾಟ್ ಕೊಹ್ಲಿ ಬಳಿ ಬಂದ ಅಭಿಮಾನಿಯನ್ನು ಕಾಲಲ್ಲಿ ತುಳಿದ ಸೆಕ್ಯೂರಿಟಿ ಸಿಬ್ಬಂದಿ-ರೂಪೇಶ್ ರಾಜಣ್ಣ ಹೇಳಿದ್ದೇನು?
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಸಾರ್ವಭೌಮನಿಗೆ ಶುಭಕೋರಿದ ಯಶ್, ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಪ್ಪು
Recommended Video
ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಮತ್ತು ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣದಲ್ಲಿ ಕೆಲವೊಂದು ವಿಚಾರಕ್ಕಾಗಿ (ಕೆಜಿಎಫ್) ಕಿತ್ತಾಟ ನಡೆದಿತ್ತು. ಪರಸ್ಪರ ಇಬ್ಬರು ಅಭಿಮಾನಿಗಳು ದ್ವೇಷಿಸುವಂತಹ ಪೋಸ್ಟ್ ಗಳನ್ನ ಹಾಕಿ ಅಪಪ್ರಚಾರಕ್ಕೆ ಮುಂದಾಗಿದ್ದರು. ಇದು ಸಹಜವಾಗಿ ಬೇಸರ ಮೂಡಿಸಿತ್ತು.
ಆದ್ರೆ, ಇದೆಲ್ಲ ಕೆಲವು ಅಭಿಮಾನಿಗಳ ಮಾಡೋ ಕೆಲಸ ಅಷ್ಟೇ. ಇದರಿಂದ ಸ್ಟಾರ್ ನಟರಿಗೂ ಮುಜುಗರ. ಬಟ್, ಇದ್ಯಾವುದನ್ನ ತಲೆಕೆಡಿಸಿಕೊಳ್ಳದ ಯಶ್, ಅಪ್ಪು ಚಿತ್ರಕ್ಕೆ ವಿಶ್ ಮಾಡಿದ್ದಾರೆ.
Nata Sarvabhouma Review : ಅಪ್ಪು ಪವರ್ ಫುಲ್.. ಸಿನಿಮಾ ಸಕ್ಸಸ್ ಫುಲ್..
ತಮ್ಮ ವಿಶಿಷ್ಟ ರೀತಿಯ ನೃತ್ಯ ಹಾಗೂ ವಿಭಿನ್ನ ಪಾತ್ರಪೋಷಣೆಯ ಮೂಲಕ ಅಪಾರ ನಿರೀಕ್ಷೆಯನ್ನು ಹುಟ್ಟುಹಾಕಿರುವ ಪವರ್ ಸ್ಟಾರ್ ಅಪ್ಪು ಸರ್ ಅಭಿನಯದ 'ನಟಸಾರ್ವಭೌಮ' ಚಿತ್ರವು ಅಭಿಮಾನಿಗಳ ಮನತಣಿಸಿ, ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ. pic.twitter.com/dh2tUN5Xaw
— Yash (@TheNameIsYash) February 6, 2019
''ತಮ್ಮ ವಿಶಿಷ್ಟ ರೀತಿಯ ನೃತ್ಯ ಹಾಗೂ ವಿಭಿನ್ನ ಪಾತ್ರಪೋಷಣೆಯ ಮೂಲಕ ಅಪಾರ ನಿರೀಕ್ಷೆಯನ್ನು ಹುಟ್ಟುಹಾಕಿರುವ ಪವರ್ ಸ್ಟಾರ್ ಅಪ್ಪು ಸರ್ ಅಭಿನಯದ 'ನಟಸಾರ್ವಭೌಮ' ಚಿತ್ರವು ಅಭಿಮಾನಿಗಳ ಮನತಣಿಸಿ, ಪ್ರೇಕ್ಷಕರ ಮನಗೆದ್ದು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ'' ಎಂದು ಟ್ವಿಟ್ಟರ್ ನಲ್ಲಿ ಶುಭಕೋರಿದ್ದಾರೆ.
ನಟಸಾರ್ವಭೌಮ ಇಂದು ವರ್ಲ್ಡ್ ವೈಡ್ ತೆರೆಕಂಡಿದ್ದು, ಎಲ್ಲ ಕಡೆಯೂ ಪಾಸಿಟೀವ್ ರೆಸ್ಪಾನ್ಸ್ ಪಡೆದುಕೊಂಡಿದೆ. ಮತ್ತೊಂದೆಡೆ ಪುನೀತ್ ರಾಜ್ ಕುಮಾರ್ ಇಂದು ಸಿನಿಮಾ ರಿಲೀಸ್ ಹಿನ್ನೆಲೆ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಕೂಡ ಮಾಡಿಸಿದ್ದಾರೆ.
Twitter Review: ಸಿನಿಮಾ ಸೂಪರ್, ಧೂಳೆಬ್ಬಿಸ್ತಿದ್ದಾರೆ ಅಪ್ಪು ಹುಡುಗ್ರು
ಇನ್ನುಳಿದಂತೆ ಪವನ್ ಒಡೆಯರ್ ಈ ಚಿತ್ರವನ್ನ ನಿರ್ದೇಶನ ಮಾಡಿದ್ದು, ರಾಕ್ ಲೈನ್ ವೆಂಕಟೇಶ್ ಈ ಚಿತ್ರನ್ನ ನಿರ್ಮಾಣ ಮಾಡಿದ್ದಾರೆ. ರಚಿತಾ ರಾಮ್, ಅನುಪಮಾ ಪರಮೇಶ್ವರನ್ ನಾಯಕಿಯಾಗಿ ಅಭಿನಯಿಸಿದ್ದು, ರವಿಶಂಕರ್, ಚಿಕ್ಕಣ್ಣ ಸೇರಿದಂತೆ ಹಲವರು ನಟಿಸಿದ್ದಾರೆ.