Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಯಚೂರಿನ ಜನರಿಗೆ ನೆರವಾದ ಯಶೋಮಾರ್ಗ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರ ಎದುರಾಗಿದೆ. ಪ್ರಾಣಿಗಳು ನೀರಿಲ್ಲದೇ ಸಾಯುವ ಸ್ಥಿತಿ ನಿರ್ಮಾಣವಾಗಿದ್ದರೇ, ಜನರಿಗೆ ಕುಡಿಯಲು ನೀರು ಸಿಗದೇ ಕಿಲೋ ಮಿಟರ್ ಗಳಷ್ಟು ದೂರು ಸಾಗಿ ಒಂದು ಬಿಂದಿಗೆ ನೀರು ತರಬೇಕಾಗಿದೆ.
ಇಂತಹ ಕಷ್ಟದ ಸಮಯದಲ್ಲಿ ಕನ್ನಡ ನಟ ರಾಕಿಂಗ್ ಸ್ಟಾರ್ ಯಶ್ ಸಾರಥ್ಯದ ಯಶೋಮಾರ್ಗ ಜನರ ಸಹಾಯಕ್ಕೆ ನಿಂತಿದೆ. ರಾಯಚೂರಿನ ಕೆಲವು ಹಳ್ಳಿಗಳಿಗೆ ನೀರು ಸರಬರಾಜು ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.
ಈ ಬಗ್ಗೆ ಯಶೋಮಾರ್ಗ ಫೌಂಡೇಶನ್ ನ ಅಧಿಕೃತ ಫೇಸ್ ಬುಕ್ ಪೇಜ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ''ರಾಯಚೂರಿನಲ್ಲಿ ಬರದ ನಡುವೆ ಕುಡಿಯುವ ನೀರಿನ ಅಭಾವ ಹೆಚ್ಚಾಗಿದ್ದು ಇದನ್ನು ಮನಗಂಡಂತಹ ನಮ್ಮ ರಾಕಿಂಗ್ ಸ್ಟಾರ್ ಯಶ್ ಅವರು ಇಂದು ರಾಯಚೂರಿನಲ್ಲಿ ಯಶೋಮಾರ್ಗ ಮೂಲಕ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿಸಿದ್ದಾರೆ..!'' ಎಂದು ವಿವರ ನೀಡಿದ್ದಾರೆ.
1 ನಿಮಿಷದ 'ಕೆಜಿಎಫ್ 2' ಆಡಿಷನ್ ಗೆ ಹನುಮಂತನ ಬಾಲಕ್ಕಿಂತ ಉದ್ದದ ಸಾಲು
ಟ್ಯಾಂಕರ್ ಗಳ ಮೂಲಕ ನೀರು ತುಂಬಿಸಿಕೊಂಡು ಹೋಗಿ ದೂರದ ಹಳ್ಳಿಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ಯಶೋಮಾರ್ಗ ಟ್ಯಾಂಕರ್ ಗಳನ್ನ ನೋಡಿ ಖುಷಿಯಿಂದ ಜನರು ಕೂಡ ಬಿಂದಿಗೆ ತಗೊಂಡು ಬಂದು ನೀರು ತುಂಬಿಸಿಕೊಂಡು ಹೋಗುತ್ತಿದ್ದಾರೆ.
ಕೆಜಿಎಫ್ ಆಡಿಷನ್ ನಲ್ಲಿ 'ಬುಲ್ ಬುಲ್' ಡೈಲಾಗ್ ಹೊಡೆದ ಆಫ್ರಿಕಾ ಅಭಿಮಾನಿ
ಯಶ್ ಅವರ ಉದ್ದೇಶ ಕೂಡ ಇದೇ ಆಗಿತ್ತು. ಬರ ಎದುರಿಸುವ ಹಾಗೂ ನೀರಿಗಾಗಿ ಪರದಾಡುವಂತಹ ಹಳ್ಳಿಗಳಿಗೆ ಸಹಾಯ ಮಾಡಬೇಕು ಎಂದು ಪಣ ತೊಟ್ಟು, ಯಶೋಮಾರ್ಗ ಫೌಂಡೇಶನ್ ಆರಂಭಿಸಿದ್ದರು. ಆ ಸಂಸ್ಥೆಯ ಮೂಲಕ ಅವರ ಅಭಿಮಾನಿಗಳು ಈಗ ಇಂತಹ ಕೆಲಸ ಮಾಡುತ್ತಿರುವುದು ನಿಜಕ್ಕೂ ವಿಶೇಷ.