420 ಕಿ.ಮೀ. 13 ದಿನ ಓಟ: ಅಪ್ಪು ಸಮಾಧಿ ತಲುಪಿದ ಪುನೀತ್ ಅಭಿಮಾನಿ ದ್ರಾಕ್ಷಾಯಿಣಿ

ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಕಳೆದುಕೊಂಡು ಅಭಿಮಾನಿಗಳ ನೋವು ಮೇಲ್ನೋಟಕ್ಕೆ ಕಣ್ಮರೆಯಾಗಿದೆಯಷ್ಟೇ. ಆದರೆ, ಒಳಗಿನ ನೋವು ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಅಪ್ಪು ನಮ್ಮ ನಿಮ್ಮನೆಲ್ಲಾ ಅಗಲಿ ಎರಡು ತಿಂಗಳಾಗುತ್ತಾ ಬರುತ್ತಿದೆ. ಆದರೂ, ಅಪ್ಪು ಪುನೀತ್ ಸಮಾಧಿ ಮುಂದೆ ಅಭಿಮಾನಿಗಳ ಆಗಮನ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗಿತ್ತಲೇ ಇದೆ.

ಕೇವಲ ಕರ್ನಾಟಕ ಅಷ್ಟೇ ಅಲ್ಲ. ಹೊರ ರಾಜ್ಯದಿಂದಲೂ ಪುನೀತ್ ಸಮಾಧಿಯನ್ನು ನೋಡಲು ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಪ್ರತಿ ದಿನ ಸಮಾಧಿ ವೀಕ್ಷಣೆಗೆಂದು ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ ವಿನ: ಕಡಿಮೆ ಆಗುತ್ತಿಲ್ಲ. ಪುನೀತ್ ಅಭಿಮಾನಿಗಳು ತಮ್ಮ ಸ್ವಂತ ಖರ್ಚಿನೊಂದಿಗೆ ಸಮಾಧಿ ಬಂದು ಪುನೀತ್ ದರ್ಶನ ಪಡೆಯುತ್ತಿದ್ದಾರೆ. ಆದರೆ, ಧಾರವಾಡದ ಅಪ್ಪು ಅಭಿಮಾನಿಯೊಬ್ಬರು ಕಳೆದ ತಿಂಗಳು ಓಟದ ಮೂಲಕವೇ ಸಮಾಧಿ ತಲುಪುವ ಶಪಥ ಮಾಡಿದ್ದರು. ಅದರಂತೆ ಇಂದು(ಡಿಸೆಂಬರ್ 14)ರಂದು ಪುನೀತ್ ಸಮಾಧಿ ತಲುಪಿ, ವಿಶೇಷ ನಮನ ಸಲ್ಲಿಸಿದ್ದಾರೆ. ಈ ವೇಳೆ ಯುವರಾಜ್‌ಕುಮಾರ್ 420ಕಿ.ಮೀ ರನ್ನಿಂಗ್ ಮಾಡಿ ಅಪ್ಪು ಸಮಾಧಿ ತಲುಪಿದ ದ್ರಾಕ್ಷಾಯಿಣಿಗೆ ಸನ್ಮಾನ ಮಾಡಿದರು.

420 ಕಿಮೀ ಓಡೋಡಿ ಬಂದ ಅಪ್ಪು ಅಭಿಮಾನಿ

420 ಕಿಮೀ ಓಡೋಡಿ ಬಂದ ಅಪ್ಪು ಅಭಿಮಾನಿ

ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದ ದ್ರಾಕ್ಷಾಯಿಣಿ ಉಮೇಶ ಪಾಟೀಲ್ ಪುನೀತ್ ರಾಜ್‌ಕುಮಾರ್ ಅವರ ಅಪ್ಪಟ ಅಭಿಮಾನಿ. ಅಪ್ಪು ಅಗಲಿದ ನೋವಿನಲ್ಲಿ ದ್ರಾಕ್ಷಾಯಿಣಿ ಓಟದ ಮೂಲಕವೇ ಸಮಾಧಿ ತಲುವುವ ಶಪಥ ಮಾಡಿದ್ದರು. ಅದರಂತೆ, ನವೆಂಬರ್ ಕೊನೆ ವಾರದಲ್ಲಿ ಮನಗುಂಡಿಯಿಂದ ದ್ರಾಕ್ಷಾಯಿಣಿ ಓಟ ಆರಂಭಿಸಿದ್ದರು. ಸುಮಾರು 420 ಕಿಮೀ ಅಂತರವನ್ನು ಈ ಮಹಿಳಾ ಅಭಿಮಾನಿ ರನ್ನಿಂಗ್ ಮೂಲಕವೇ ಕ್ರಮಿಸಿದ್ದಾರೆ. ಅಪ್ಪು ಮೇಲಿನ ಅಭಿಮಾನ, ಅಗಲಿಕೆಯ ನೋವಿನಿಂದ ವಿಶೇಷ ಗೌರವ ಸೂಚಿಸಲು ಈ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಅಪ್ಪು ಮೇಲಿನ ಅಭಿಮಾನಕ್ಕಾಗಿ 13 ದಿನಗಳ ಓಟ

ಅಪ್ಪು ಮೇಲಿನ ಅಭಿಮಾನಕ್ಕಾಗಿ 13 ದಿನಗಳ ಓಟ

ಪುನೀತ್ ಸಮಾಧಿಗೆ ವಿಶೇಷ ನಮನ ಸಲ್ಲಿಸಬೇಕು ಅನ್ನುವ ಇಚ್ಚೆಯಿಂದ ದ್ರಾಕ್ಷಾಯಿಣಿ ಸ್ವಗ್ರಾಮ ಮನಗುಂಡಿಯ ಬಸವೇಶ್ವರ ವೃತದಿಂದ ಬೆಂಗಳೂರು ಕಡೆಗೆ ಓಟವನ್ನು ಆರಂಭಿಸಿದ್ದರು. ಅಪ್ಪು ಮಹಿಳಾ ಅಭಿಮಾನಿಯ ಈ ನಿರ್ಧಾರಕ್ಕೆ ಗ್ರಾಮದ ಗುರುಹಿರಿಯರು ದ್ರಾಕ್ಷಾಯಿಣಿ ಹಾಗೂ ಅವರ ತಾಯಿ ಮಕ್ಕಳಿಗೆ ಸನ್ಮಾನ ಮಾಡಿ ಬೀಳ್ಕೊಡುಗೆ ನೀಡಿದ್ದರು. ಅಲ್ಲಿಂದ ಶುರುವಾದ ದ್ರಾಕ್ಷಾಯಿಣಿಯ ಓಟ ಅಪ್ಪು ಸಮಾಧಿವರೆಗೂ ಸಾಗಿ ಬಂದಿದೆ. ರಾಷ್ಟ್ರೀಯ ಹೆದ್ಸಾರಿ ಮಾರ್ಗವಾಗಿ ಹುಬ್ಬಳ್ಳಿ, ಶಿಗ್ಗಾಂವ, ಹಾವೇರಿ ತಲುಪಿ ಬಳಿಕ ಬೆಂಗಳೂರಿಗೆ ಆಗಮಿಸಿದ್ದಾರೆ.

ಅಭಿ ಸಿನಿಮಾದಿಂದಲೇ ಅಪ್ಪು ಅಭಿಮಾನಿ

ಅಭಿ ಸಿನಿಮಾದಿಂದಲೇ ಅಪ್ಪು ಅಭಿಮಾನಿ

ಪುನೀತ್ ರಾಜಕುಮಾರ್ ನಾಯಕ ನಟನಾಗಿ ಅಭಿನಯಿಸಿದ 2ನೇ ಸಿನಿಮಾ 'ಅಭಿ' ಯಿಂದಲೇ ದ್ರಾಕ್ಷಾಯಿಣಿ ಅಭಿಮಾನಿಯಾಗಿದ್ದರು. ಓಟಗಾರ್ತಿಯೂ ಆಗಿರುವ ದ್ರಾಕ್ಷಾಯಿಣಿ ಒಂದೇ ಒಂದು ಸಿನಿಮಾವನ್ನು ನೋಡದೆ ಬಿಟ್ಟಿಲ್ಲ. ಹೀಗಾಗಿ ಅಪ್ಪು ಅಗಲಿದ ಬಳಿಕ ಸಮಾಜಮುಖಿ ಕಾರ್ಯಗಳು ಒಂದೊಂದಾಗೇ ಹೊರ ಬರುವುದನ್ನು ಕಂಡು ಅಪ್ಪುಗೆ ವಿಶೇಷ ನಮನ ಸಲ್ಲಿಸಲು ಮನಗುಂಡಿ ಗ್ರಾಮದಿಂದ ಬೆಂಗಳೂರಿನ ವರೆಗೂ ಓಡುತ್ತಲೇ ಬಂದು ತಲುಪಿದ್ದಾರೆ.

ದ್ರಾಕ್ಷಾಯಿಣಿ ಪತಿ ಅಪ್ಪು ಅಭಿಮಾನಿ

ದ್ರಾಕ್ಷಾಯಿಣಿ ಪತಿ ಅಪ್ಪು ಅಭಿಮಾನಿ

ದ್ರಾಕ್ಷಾಯಿಣಿಯಂತೆ ಪತಿ ಉಮೇಶ್ ಪಾಟೀಲ್ ಕೂಡ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿ. ಪತ್ನಿ ದ್ರಾಕ್ಷಾಯಿಣಿ ಅವರ 13 ದಿನಗಳ ಓಟಕ್ಕೆ ಪತಿ ಸಾಥ್ ನೀಡಿದ್ದಾರೆ. ಟಾ ಟಾ ಮ್ಯಾಜಿಕ್ ವಾಹನದಲ್ಲಿ ತಮ್ಮ ಮಕ್ಕಳನ್ನು ಕರೆದುಕೊಂಡು ಪತ್ನಿಯ ಆಸೆಗೆ ಸಾಥ್ ನೀಡಿದ್ದಾರೆ. ದಾರಿಯುದ್ದಕ್ಕೂ ನೇತ್ರದಾನದ ಬಗ್ಗೆ ಜಾಗೃತಿ ಮೂಡಿಸಿರುವ ಈ ದಂಪತಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೇ ವೇಳೆ ಕುಟುಂಬದ ಸದಸ್ಯರು ಕೂಡ ನೇತ್ರದಾನ ಮಾಡಲು ಮುಂದಾಗಿದ್ದಾರೆ.

More from Filmibeat

English summary
Puneeth Rajkumar fan Drakshayini reached Appu memorial after 13 days run of 420kms. Yuvarajkumar facilitated Puneeth Rajkumar fan Drakshayini.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X