Don't Miss!
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೂಕಾಂಬಿಕೆಯ ಸನ್ನಿಧಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡ ಯೇಸುದಾಸ್
ಉಡುಪಿ ಜನವರಿ 10: ಖ್ಯಾತ ಗಾಯಕ ಯೇಸುದಾಸ್ ಅವರಿಗೆ ಇಂದು 79 ನೇ ಹುಟ್ಟುಹಬ್ಬದ ಸಂಭ್ರಮ. ಇದರ ಪ್ರಯುಕ್ತ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ಇಂದು ಯೇಸುದಾಸ್ ಅವರು ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಂಡರು.
ಜನ್ಮದಿನದ ನಿಮಿತ್ತ ಮೂಕಾಂಬಿಕೆಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಮತ್ತು ಪೂಜೆ ನಡೆಯಿತು. ಕುಟುಂಬ ಸಹಿತ ಪೂಜೆಯಲ್ಲಿ ಭಾಗಿಯಾದ ಯೇಸುದಾಸ್ ರವರಿಂದ ಸ್ವರ್ಣಮುಖಿ ಸಭಾಭವನದಲ್ಲಿ ಗಾಯನ ಸೇವೆ ನಡೆಯಿತು.
ವಾತಾಪಿ ಗಣಪತಿಂ ಹಾಡಿಗೆ ಯೇಸುದಾಸ್ ಭಾವುಕರಾದರು. ನೆಚ್ಚಿನ ಗಾಯಕನ ಹುಟ್ಟುಹಬ್ಬದಲ್ಲಿ ಕೇರಳದ ಭಕ್ತರೂ ಭಾಗಿಯಾದರು. ಈ ಸಂದರ್ಭದಲ್ಲಿ ಯೇಸುದಾಸ್ ಅವರ ಹೆಸರಿನಲ್ಲಿ ಸಂಗೀತ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಖ್ಯಾತ ಗಾಯಕ ಯೇಸುದಾಸ್ ಅವರು ತಮ್ಮ ಹುಟ್ಟುಹಬ್ಬವನ್ನು ಪ್ರತೀ ವರ್ಷ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಆಚರಿಸಿಕೊಳ್ಳುತ್ತಾರೆ. ಸಾವಿರಾರು ಗೀತೆಗಳಿಗೆ ದನಿಯಾದ ಗಾನ ಗಾರುಡಿಗ ಕೇರಳದವರಾದರೂ, ಕೊಲ್ಲೂರು ಮೂಕಾಂಬಿಕೆಯ ಪರಮ ಭಕ್ತ. ತನ್ನ ಹುಟ್ಟು ಹಬ್ಬದಂದು ಬೆಳಗ್ಗೆ ಮೂಕಾಂಬಿಕೆಯ ಎದುರು ಗಾನ ಸೇವೆ ಸಲ್ಲಿಸಿ ಬಳಿಕ ಚಂಡಿಕಾಯಾಗದಲ್ಲಿ ಪಾಲ್ಗೊಳ್ಳುತ್ತಾರೆ.
ನೂರಾರು ಶಿಷ್ಯಂದಿರ ಜೊತೆ ದೇವಿಗೆ ಸಂಗೀತ ಸೇವೆ ಸಲ್ಲಿಸುತ್ತಾರೆ. ನೂರಾರು ಪ್ರಶಸ್ತಿಗಳನ್ನು ಪಡೆದ ಅದ್ವಿತೀಯ ಸಾಧಕ ಯಾವುದೇ ಹಮ್ಮುಬಿಮ್ಮುಗಳಿಲ್ಲದೆ ಸಾದಾ ಸೀದಾ ಭಕ್ತನಂತೆ ಇರುವ ಯೇಸುದಾಸ್ ನೋಡಲು ಇಂದು ಜನ ಮುಗಿ ಬಿದ್ದರು.
ಹಲವಾರು ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿರುವ ಯೇಸುದಾಸ್ ಕೋಟ್ಯಾಂತರ ಅಭಿಮಾನಿಗಳ ಆರಾದ್ಯ ದೈವ. ಮಲೆಯಾಳಂ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ. ಅವರು ಶಬರಿಮಲೆಯ ಅಯ್ಯಪ್ಪನ ಸ್ವಾಮಿಯ ಕುರಿತು ಹಾಡಿದ ಹರಿವರಾಸನಂ ಹಾಡು ಚಿರನೂತನ. ಸದ್ಯ ಅಮೇರಿಕಾದಲ್ಲಿ ನೆಲೆಸಿದ್ದರೂ ಇಂದಿಗೂ ಚಿತ್ರರಂಗದ ಬೇಡಿಕೆಯ ಗಾಯಕ. ಅವರ ಹುಟ್ಟು ಹಬ್ಬವನ್ನು ಲಕ್ಷಾಂತರ ಅಭಿಮಾನಿಗಳು ಆಚರಿಸುತ್ತಾರೆ.
ಕೊಲ್ಲೂರಿನಲ್ಲಿ ಪ್ರತೀ ವರ್ಷ ಹುಟ್ಟು ಹಬ್ಬ ಆಚರಿಸುವಾಗ ಅದೆಷ್ಟೋ ಹೆತ್ತವರು ತಮ್ಮ ಮಕ್ಕಳಿಗೆ ಯೇಸುದಾಸ್ ಕೈಯಿಂದ ಅಕ್ಷರಾಭ್ಯಾಸ ಮಾಡಿಸುತ್ತಾರೆ. ಇನ್ನಷ್ಟು ಕಾಲ ಅರೋಗ್ಯವಂತರಾಗಿ ಬಾಳಿ ಇನ್ನಷ್ಟು ಹಾಡುಗಳು ಅವರ ಕಂಠದಿಂದ ಹೊಮ್ಮಲಿ ಎಂಬುದೇ ಅಭಿಮಾನಿಗಳ ಹಾರೈಕೆ.