Don't Miss!
- Finance ಭಾರತದ ಮೊದಲ ಬುಲೆಟ್ ರೈಲಿನ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ ಹಳಿ ಚಿತ್ರ ಬಹಿರಂಗ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಯಚೂರು ವಿದ್ಯಾರ್ಥಿನಿ ಸಾವು: ಹೃದಯಸ್ಪರ್ಶಿ ಪತ್ರ ಬರೆದ ಯೋಗರಾಜ್ ಭಟ್
ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಅನುಮಾನಸ್ಪಾದ ಸಾವಿಗೆ ತೀವ್ರ ಖಂಡನೆ ವ್ಯಕ್ತವಾಗಿದೆ. ಸಾರ್ವಜನಿಕರು, ಸಿನಿಮಾ ತಾರೆಯರು, ರಾಜಕಾರಣಿಗಳೂ ಎಲ್ಲರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದ್ರೆ, ಈ ಘಟನೆಯ ಬಗ್ಗೆ ಮಾಧ್ಯಮಗಳು, ಸರ್ಕಾರ ಎಲ್ಲವೂ ತಡವಾಗಿ ಎಚ್ಚೆತ್ತುಗೊಂಡಿದ್ದು ನಿಜಕ್ಕೂ ದುರಂತ.
ಈ ಬಗ್ಗೆ ನಿರ್ದೇಶಕ ಯೋಗರಾಜ್ ಭಟ್ ಕೂಡ ಬೇಸರ ವ್ಯಕ್ತಪಡಿಸಿದ್ದು, ಭಾವನಾತ್ಮಕ ಪತ್ರ ಬರೆದು ತಮ್ಮ ನೋವು ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಜನಸಾಮಾನ್ಯರಿಗೆ ಅದರಲ್ಲೂ ಬೆಂಗಳೂರಿನ ಜನತೆಗೆ ಕೆಲವು ಪ್ರಶ್ನೆಗಳನ್ನ ಮುಂದಿಟ್ಟಿದ್ದಾರೆ.
ರಾಯಚೂರಿನ ವಿದ್ಯಾರ್ಥಿನಿ ಸಾವು : ನ್ಯಾಯಕ್ಕಾಗಿ ನಟ, ನಟಿಯರ ಕೂಗು
ಮಕ್ಕಳು ಅಂದ್ರೆ ಎಲ್ಲ ಮಕ್ಕಳು ಒಂದೇ ಅಲ್ವಾ. ಇಂತಹ ಕೃತ್ಯಗಳು ನಡೆಯದಂತೆ ಎಚ್ಚರವಹಿಸಬೇಕು ಎಂದು ಭಟ್ ಸಲಹೆ ನೀಡಿದ್ದಾರೆ. ಯೋಗರಾಜ್ ಭಟ್ಟರ ಭಾವನಾತ್ಮಕ ಪತ್ರದಲ್ಲಿ ಏನಿದೆ? ಮುಂದೆ ಓದಿ....
ಅಂದು ಭಾರತವೇ ಕೂಗಿತು
''ವಿಕೃತನೊಬ್ಬನ ಕೆಲಸಕ್ಕೆ ಹೂವೊಂದು ಸುಟ್ಟು ಹೋಗಿದೆ. ಎಲ್ಲ ಕಡೆಗೆ ಮರುಕ ಮಡುಗಟ್ಟುತ್ತಿದೆ 'ಮಧು' ಎಂಬ ಅಮಾಯಕಿ ಕೊಲೆಗೆ. ಇದೇ ರೀತಿಯ ಕೃತ್ಯ ದೆಹಲಿಯಲ್ಲಿ ನಡೆದಾಗ ಇಡೀ ಭಾರತ ಕೂಗಿತು. ಆದರೆ ನಮ್ಮ ರಾಜಧಾನಿ ಬೆಂಗಳೂರು ಮಾತ್ರ ಮೊನ್ನೆಯಿಂದಲೂ ಪ್ರತಕ್ರಿಯೆ ನೀಡಲು, ಮಾತನಾಡಲು ಮನಸ್ಸು ಮಾಡುತ್ತಿಲ್ಲ''
ಬೆಂಗಳೂರು ಜನರು ಯಾಕೆ ಹೀಗೆ?
''ಹೋಗಲಿ ಏನೋ ವೋಟು ಹಾಕುವ ಕೆಲಸ ಇತ್ತು ಅನ್ನುವುದಾದರೆ ಅದೂ ಇಲ್ಲ. 45 % ಜನ ಮಾತ್ರ ಮತ ಹಾಕಿದ್ದಾರೆ. ಬಾಕಿ ಜನರು ದಿವ್ಯ ನಿದ್ದೆಯಲ್ಲಿದ್ದಾರಾ? ಯಾರು ಎಬ್ಬಿಸುವುದು ಇವರನ್ನು? ಮಧು ಆತ್ಮಕ್ಕೆ ನೆಮ್ಮದಿಕೋರುವುದು ಪ್ರತಿಯೊಬ್ಬ ಕರ್ತವ್ಯ ಅಲ್ಲವೇ? ಯಾರ ಮನೆಯ ಮಗುವಾದರೇನು ಸಾವೆಂಬ ಸಂಕಟ ಎಲ್ಲರಿಗು ತೀವ್ರವಾಗಿ ಕಾಡಬೇಕಲ್ಲವೇ?''
ರಾಯಚೂರಿನಲ್ಲಿ ವಿದ್ಯಾರ್ಥಿನಿಯ ನಿಗೂಢ ಸಾವು, ಕಟ್ಟೆಯೊಡೆದ ಆಕ್ರೋಶ
ಮೊದಲು ಪ್ರತಿಕ್ರಯಿಸಿ ಮಾನವೀಯತೆ ತೋರಿಸಿ
''ದಯಮಾಡಿ ಈ ಮಾನಭಂಗ ಕೊಲೆಯಂತಹ ವಿಕೃತಿಗಳನ್ನು ತಡೆಯಲು ತಡವಾದರೂ ಪರವಾಗಿಲ್ಲ ಕೊನೆ ಪಕ್ಷ ಪ್ರತಿಕ್ರಿಯಿಸಿ.. ಒಂದೇ ದನಿಯಲ್ಲಿ ಒಂಚೂರು ಆವೇಶದಲ್ಲಿ ಭವಿಷ್ಯದ ಹೂವುಗಳನ್ನು ಸುಡಲು ಬರುವ ಬೆಂಕಿಯನ್ನು ಒಂದೇ ಒಂದು 'ಕಿಡಿ' ಕೂಡ ಉಳಿಯದಂತೆ ನಂದಿಸಲು ಮುಂದಾಗಿ...ಮಧು...ಕಂದಮ್ಮ...ನಿನಗೆ ನ್ಯಾಯ ನೀ ಇಲ್ಲದಿದ್ದರೂ..ಸಿಗಲಿ....ಹೋಗಿ ಬಾ ತಾಯಿ...''
ಶಿಕ್ಷೆಯಾಗಲೇ ಬೇಕು
ರಾಯಚೂರಿನ ಮಾಣಿಕ್ ಪ್ರಭು ದೇವಸ್ಥಾನದ ಗುಡ್ಡದಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಏಪ್ರಿಲ್ 16ರಂದು ಈ ಪ್ರಕರಣ ಬೆಳಕಿಗೆ ಬಂದಿದ್ದು, ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.