Don't Miss!
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- News ಬೆಂಗಳೂರಿನಲ್ಲಿ ಮೋದಿ ಮತಬೇಟೆ; ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ ಏನಿದೆ?: ಡಾ.ಜಿ ಪರಮೇಶ್ವರ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೆರೆಯಿಂದ ತಲೆಕೆಳಗಾದ 'ಗಾಳಿಪಟ' ಯೋಜನೆ: ಟೆನ್ಷನ್ ನಲ್ಲಿ ಯೋಗರಾಜ್ ಭಟ್
ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಯೋಗಜಾರ್ ಭಟ್ ಸಾರಥ್ಯದಲ್ಲಿ ಗಾಳಿಪಟ-2 ಸಿನಿಮಾ ಸೆಟ್ಟೇರಿ ಅನೇಕ ದಿನಗಳೆ ಆಗಿದೆ. ಭಟ್ರು ಅಂದುಕೊಂಡ ಪ್ಲಾನ್ ಪ್ರಕಾರವೆ ಆಗಿದ್ರೆ ಈಗಾಗಲೆ ಚಿತ್ರೀಕರಣ ಭರ್ಜರಿಯಾಗಿ ನಡೆಯಬೇಕಿತ್ತು. ಆದ್ರೀಗ ಚಿತ್ರೀಕರಣ ತಡವಾದ ಕಾರಣ ಭಟ್ರು ಟೆನ್ಷನ್ ನಲ್ಲಿ ಇದ್ದಾರೆ..
ಗಾಳಿಪಟ-2 ಚಿತ್ರೀಕರಣ ಮಾಡಬೇಕೆಂದು ಕೊಂಡಿದ್ದ ಪ್ರದೇಶಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಹಾಗಾಗಿ ಚಿತ್ರತಂಡ ಹಾಕಿಕೊಂಡಿದ್ದ ವೇಳಪಟ್ಟಿ ಈಗ ತಲೆಕೆಳಗಾಗಿದೆ. ಇದರಿಂದ ಮಳೆಗಾಗಿಯೆ ಕಾದುಕುಳಿತು ಚಿತ್ರೀಕರಣಕ್ಕೆ ಸಿದ್ಧವಾಗಿದ್ದ ಭಟ್ಟರು ಚಿಂತೆಯಲ್ಲಿದ್ದಾರೆ. ತಿಂಗಳುಗಳಿಂದ ಚಿತ್ರೀಕರಣಕ್ಕೆ ಲೊಕೇಶನ್ ಹುಡುಕ್ಕಿದ್ದ ಭಟ್ಟರ ಶ್ರಮ ನೀರಲ್ಲಿ ಹೋಮ ಮಾಡಿದ ಹಾಗಾಗಿದೆ. ಈಗ ಮತ್ತೆ ಹೊಸದಾಗಿ ವೇಳಪಟ್ಟಿ ತಯಾರಿಕೆಯಲ್ಲಿ ಬ್ಯುಸಿಯಾಗಿದ್ದಾರೆ ಭಟ್ರು ಮತ್ತು ತಂಡ.
'ಗಾಳಿಪಟ 2' ನಾಯಕರ ಬದಲಾವಣೆ : ಯೋಗರಾಜ್ ಭಟ್ ಸ್ಪಷ್ಟನೆ
ಗಾಳಿಪಟ-2 ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. ಗಾಳಿಪಟ ಮೊದಲ ಭಾಗ ಕೂಡ ಸ್ಯಾಂಡಲ್ ವುಡ್ ನಲ್ಲಿ ಭಾರಿ ಸದ್ದು ಮಾಡಿತ್ತು. ಅದೇ ರೀತಿ ಗಾಳಿಪಟ-2 ಚಿತ್ರೀಕರಣ ಪ್ರಾರಂಭಕ್ಕೂ ಮೊದಲೆ ನಿರೀಕ್ಷೆ ಇಮ್ಮಡಿಗೊಳಿಸಿದೆ. ಮೊದಲ ಭಾಗದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ದಿಗಂತ್ ಜೋಡಿ ಅಭಿಮಾನಿಗಳನ್ನು ಮೋಡಿ ಮಾಡಿತ್ತು.
ಈಗ ಮತ್ತೆ ಗಾಳಿಪಟ-2 ಮೂಲಕ ಒಟ್ಟಿಗೆ ಬರುತ್ತಿರುವುದು ಸಿನಿಪ್ರಿಯರಲ್ಲಿ ಕುತೂಹಲ ಹೆಚ್ಚಾಗಿದೆ. ಗಣೇಶ್ ಮತ್ತು ದಿಗಂತ್ ಜೋಡಿಗೆ ಬೇಡಿಕೆ ಹೆಚ್ಚಾದ ಕಾರಣ ಪಾರ್ಟ್-2ಗೂ ಹಿಟ್ ಜೋಡಿಯನ್ನೆ ಆಯ್ಕೆ ಮಾಡಿಕೊಂಡಿದೆ ಚಿತ್ರತಂಡ. ಈ ಜೋಡಿಯ ಜೊತೆ ಲೂಸಿಯ ಖ್ಯಾತಿಯ ಪವನ್ ಕುಮಾರ್ ಸೇರಿಕೊಂಡಿದ್ದಾರೆ. ಭಟ್ರು ಹೊಸ ಯೋಜನೆ ಸಿದ್ಧವಾಗುತ್ತಿದ್ದಂತೆ ಚಿತ್ರೀಕರಣಕ್ಕೆ ಹೊರಡಲಿದೆ ಚಿತ್ರತಂಡ.