Don't Miss!
- News Lok Sabha Election 2024: ಬೆಂಗಳೂರು ಉತ್ತರದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ! ಶೋಭಾ ಎದುರು ‘ಕೈ’ ಅಸ್ತ್ರ ವರ್ಕೌಟ್ ಆಗುತ್ತಾ?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಣೇಶ್-ಭಟ್ಟರ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್ !
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಯೋಗರಾಜ್ ಭಟ್ ಜುಗಲ್ ಬಂದಿಯಲ್ಲಿ ಮೂಡಲಿರುವ ಮೂರನೇ ಚಿತ್ರದ ತಯಾರಿ ಜೋರಾಗಿ ನಡೆಯುತ್ತಿದೆ. ಈಗಾಗಲೇ ಸ್ಕ್ರಿಪ್ಟ್ ಅಂತಿಮ ಮಾಡಿರುವ ಚಿತ್ರತಂಡ, ಚಿತ್ರದ ಟೈಟಲ್ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿತ್ತು. ಈಗ ಗಣೀ ಹಾಗೂ ಭಟ್ಟರು ಕಾಂಬಿನೇಶನ್ ನ ಹ್ಯಾಟ್ರಿಕ್ ಸಿನಿಮಾದ ಟೈಟಲ್ ಫಿಕ್ಸ್ ಆಗಿದೆ.[ಗಣೇಶ್ ಮತ್ತು ಯೋಗರಾಜ್ ಭಟ್ ಅಡ್ಡದಿಂದ ಇದೀಗ ಬಂದ ಸುದ್ದಿ]
ಹೌದು, ಸ್ಟಾರ್ ಜೋಡಿಯ ಹೊಸ ಚಿತ್ರಕ್ಕೆ 'ಮುಗುಳು ನಗೆ' ಎಂಬ ಶೀರ್ಷಿಕೆಯನ್ನ ಅಂತಿಮ ಮಾಡಲಾಗಿದೆ. ಈ ಹಿಂದೆ ಈ ಚಿತ್ರಕ್ಕೆ 'ಜಾಮೂನು' ಎಂಬ ಟೈಟಲ್ ಇಡಲಾಗಿದೆ ಎಂಬ ಮಾತುಗಳು ಕೇಳಿಬಂದಿತ್ತಾದರೂ, ಈಗ ಸ್ವತಃ ಗಣೇಶ್ ಅವರೇ, 'ಮುಗುಳು ನಗೆ' ಎಂಬ ಟೈಟಲ್ ಇಟ್ಟಿರುವುದಾಗಿ ಟ್ವಿಟ್ಟರ್ ಮೂಲಕ ಸ್ವಷ್ಟಪಡಿಸಿದ್ದಾರೆ.[ಗೋಲ್ಡನ್ ಸ್ಟಾರ್ ಗಣೇಶ್, ಭಟ್ ಹ್ಯಾಟ್ರಿಕ್ ಕಾಂಬಿನೇಷನ್ ಚಿತ್ರ]
'ಮುಂಗಾರು ಮಳೆ', 'ಗಾಳಿಪಟ' ಚಿತ್ರದ ನಂತರ ಗಣೇಶ್ ಹಾಗೂ ಯೋಗರಾಜ್ ಭಟ್ ಒಂದಾಗಿದ್ದು, ಸಾಮಾನ್ಯವಾಗಿ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ. 'ಮುಗುಳು ನಗೆ' ಚಿತ್ರದಲ್ಲಿ ಗಣೇಶ್ ಜತೆ ನಾಲ್ವರು ನಾಯಕಿಯರ ರೊಮ್ಯಾನ್ಸ್ ಮಾಡಲಿದ್ದು, ಸ್ಯಾಂಡಲ್ ವುಡ್ ನ ಟಾಪ್ ನಟಿಯರ ಜೊತೆ ಹೊಸ ಪ್ರತಿಭೆಗಳಿಗೂ ಅವಕಾಶ ದೊರೆಯಲಿದೆಯಂತೆ.[ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರಕ್ಕೆ ನಾಯಕಿಯರು ಬೇಕಾಗಿದ್ದಾರೆ?]
ಅಂದ್ಹಾಗೆ, 'ಮುಗುಳುನಗೆ' ಚಿತ್ರವನ್ನ ಯೋಗರಾಜ್ ಮೂವೀಸ್ ಮತ್ತು ಗೋಲ್ಡನ್ ಮೂವೀಸ್ ಬ್ಯಾನರ್ನಡಿ, ಯೋಗರಾಜ್ ಭಟ್ ಹಾಗೂ ಗಣೇಶ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಹರಿಕೃಷ್ಣ ಸಂಗೀತ ಸಂಯೋಜಿಸಲಿದ್ದು, ಜಯಂತ್ ಕಾಯ್ಕಿಣಿ ಹಾಗೂ ಭಟ್ ಅವರು ಸಾಹಿತ್ಯ ಬರೆಯಲಿದ್ದಾರೆ. ಸದ್ಯ, ಚಿತ್ರದ ಪ್ರೀ-ಪ್ರೊಡಕ್ಷನ್ ಮುಗಿಸಿರುವ ಚಿತ್ರತಂಡ, ಇದೇ ತಿಂಗಳಲ್ಲಿ ಸೆಟ್ಟೇರಲಿದೆ.