Don't Miss!
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Lifestyle ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಗಾಳಿಪಟ 2' ನಾಯಕರ ಬದಲಾವಣೆ : ಯೋಗರಾಜ್ ಭಟ್ ಸ್ಪಷ್ಟನೆ
'ಗಾಳಿಪಟ 2' ಸಿನಿಮಾದ ನಾಯಕರು ಬದಲಾಗಿದ್ದಾರೆ. ಶರಣ್ ಹಾಗೂ ರಿಷಿ ಬದಲಿಗೆ ಗಣೇಶ್ ಹಾಗೂ ದಿಗಂತ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ 'ಗಾಳಿಪಟ' ಚಿತ್ರದ ನಾಯಕರೇ ಇಲ್ಲಿಯೂ ಮುಂದುವರೆಯಲಿದ್ದಾರೆ.
ನಾಯಕರ ಬದಲಾವಣೆ ಬಗ್ಗೆ ನಿರ್ದೇಶಕ ಯೋಗರಾಜ್ ಭಟ್ ಸ್ಪಷ್ಟನೆ ನೀಡಿದ್ದಾರೆ. ಚಿತ್ರಕ್ಕೆ ನಟ ಗಣೇಶ್ ಪಾದಾರ್ಪಣೆ ಮಾಡಿದ್ದಾರೆ, ಅವರ ಜೊತೆಗೆ ದಿಗಂತ್ ಕೂಡ ಚಿತ್ರತಂಡ ಸೇರಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
'ಗಾಳಿಪಟ-2' ಚಿತ್ರದಿಂದ ಹೊರ ಬರಲು ಕಾರಣ ಬಿಚ್ಚಿಟ್ಟ ರಿಷಿ
ಇದರೊಂದಿಗೆ ಮೊದಲ 'ಗಾಳಿಪಟ' ಸಿನಿಮಾದಲ್ಲಿ ನಟಿಸಿದ್ದ ರಾಜೇಶ್ ಕೃಷ್ಣನ್ ಗೌರವ ಪಾತ್ರದಲ್ಲಿ ನಟಿಸಲಿದ್ದಾರಂತೆ. ಉಳಿದಂತೆ, ರಂಗಾಯಣ ರಘು ಹಾಗೂ ಅನಂತ್ ನಾಗ್ ಚಿತ್ರದ ತಾರಬಳಗದಲ್ಲಿ ಇದ್ದಾರೆ.
'ಗಾಳಿಪಟ 2' ಸಿನಿಮಾದ ಬದಲಿಗೆ, ನಟ ಶರಣ್ ಗೆ ಒಂದು ಸಿನಿಮಾ ಹಾಗೂ ರಿಷಿಗೆ ಮತ್ತೊಂದು ಸಿನಿಮಾವನ್ನು ಯೋಗರಾಜ್ ಭಟ್ ಮಾಡುತ್ತಿದ್ದಾರೆ. ಅಲ್ಲದೆ, 'ಗಾಳಿಪಟ 2' ಸಿನಿಮಾವನ್ನು ಬೇರೆ ಬೇರೆ ಭಾಷೆಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆಯಂತೆ.
ಶರಣ್ ಮತ್ತು ರಿಷಿ ಜಾಗಕ್ಕೆ ಬಂದ್ರು ಗಣೇಶ್ ಮತ್ತು ದಿಗಂತ್
ಈ ಹಿಂದೆ ಅದಿತಿ ಪ್ರಭುದೇವ, ಸೊನಾಲ್ ಹಾಗೂ ಶರ್ಮಿಳಾ ಮಾಂಡ್ರೆ ಚಿತ್ರದ ನಾಯಕಿಯರಾಗಿದ್ದಾರೆ ಎಂದು ತಿಳಿಸಲಾಗಿತ್ತು. ಆದರೆ, ಈಗ ನಾಯಕರ ಬದಲಾವಣೆಗೆ ತಕ್ಕ ಹಾಗೆ ನಾಯಕಿಯರೂ ಬದಲಾಗುತ್ತಾರೆಯೇ ಎನ್ನುವ ಪ್ರಶ್ನೆ ಇದೆ.