Don't Miss!
- News Lok Sabha Election 2024: ಟಿಕೆಟ್ ಹಂಚಿಕೆಯ ಬಳಿಕ ಬಿಜೆಪಿಯ ಮುಂದೆ ಹೊಸ-ಹೊಸ ಸವಾಲುಗಳು
- Automobiles ಎಲೆಕ್ಟ್ರಿಕ್ ಲೋಕಕ್ಕೆ ಎಸ್ಯುವಿ ದೈತ್ಯನ ಎಂಟ್ರಿ: ಇನ್ನು ಉಳಿದ ಕಾರುಗಳನ್ನು ದೇವರೇ ಕಾಪಾಡಬೇಕು!
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಗಾಳಿಪಟ 2' ನಾಯಕರ ಬದಲಾವಣೆ : ಯೋಗರಾಜ್ ಭಟ್ ಸ್ಪಷ್ಟನೆ
'ಗಾಳಿಪಟ 2' ಸಿನಿಮಾದ ನಾಯಕರು ಬದಲಾಗಿದ್ದಾರೆ. ಶರಣ್ ಹಾಗೂ ರಿಷಿ ಬದಲಿಗೆ ಗಣೇಶ್ ಹಾಗೂ ದಿಗಂತ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ 'ಗಾಳಿಪಟ' ಚಿತ್ರದ ನಾಯಕರೇ ಇಲ್ಲಿಯೂ ಮುಂದುವರೆಯಲಿದ್ದಾರೆ.
ನಾಯಕರ ಬದಲಾವಣೆ ಬಗ್ಗೆ ನಿರ್ದೇಶಕ ಯೋಗರಾಜ್ ಭಟ್ ಸ್ಪಷ್ಟನೆ ನೀಡಿದ್ದಾರೆ. ಚಿತ್ರಕ್ಕೆ ನಟ ಗಣೇಶ್ ಪಾದಾರ್ಪಣೆ ಮಾಡಿದ್ದಾರೆ, ಅವರ ಜೊತೆಗೆ ದಿಗಂತ್ ಕೂಡ ಚಿತ್ರತಂಡ ಸೇರಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
'ಗಾಳಿಪಟ-2' ಚಿತ್ರದಿಂದ ಹೊರ ಬರಲು ಕಾರಣ ಬಿಚ್ಚಿಟ್ಟ ರಿಷಿ
ಇದರೊಂದಿಗೆ ಮೊದಲ 'ಗಾಳಿಪಟ' ಸಿನಿಮಾದಲ್ಲಿ ನಟಿಸಿದ್ದ ರಾಜೇಶ್ ಕೃಷ್ಣನ್ ಗೌರವ ಪಾತ್ರದಲ್ಲಿ ನಟಿಸಲಿದ್ದಾರಂತೆ. ಉಳಿದಂತೆ, ರಂಗಾಯಣ ರಘು ಹಾಗೂ ಅನಂತ್ ನಾಗ್ ಚಿತ್ರದ ತಾರಬಳಗದಲ್ಲಿ ಇದ್ದಾರೆ.
'ಗಾಳಿಪಟ 2' ಸಿನಿಮಾದ ಬದಲಿಗೆ, ನಟ ಶರಣ್ ಗೆ ಒಂದು ಸಿನಿಮಾ ಹಾಗೂ ರಿಷಿಗೆ ಮತ್ತೊಂದು ಸಿನಿಮಾವನ್ನು ಯೋಗರಾಜ್ ಭಟ್ ಮಾಡುತ್ತಿದ್ದಾರೆ. ಅಲ್ಲದೆ, 'ಗಾಳಿಪಟ 2' ಸಿನಿಮಾವನ್ನು ಬೇರೆ ಬೇರೆ ಭಾಷೆಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆಯಂತೆ.
ಶರಣ್ ಮತ್ತು ರಿಷಿ ಜಾಗಕ್ಕೆ ಬಂದ್ರು ಗಣೇಶ್ ಮತ್ತು ದಿಗಂತ್
ಈ ಹಿಂದೆ ಅದಿತಿ ಪ್ರಭುದೇವ, ಸೊನಾಲ್ ಹಾಗೂ ಶರ್ಮಿಳಾ ಮಾಂಡ್ರೆ ಚಿತ್ರದ ನಾಯಕಿಯರಾಗಿದ್ದಾರೆ ಎಂದು ತಿಳಿಸಲಾಗಿತ್ತು. ಆದರೆ, ಈಗ ನಾಯಕರ ಬದಲಾವಣೆಗೆ ತಕ್ಕ ಹಾಗೆ ನಾಯಕಿಯರೂ ಬದಲಾಗುತ್ತಾರೆಯೇ ಎನ್ನುವ ಪ್ರಶ್ನೆ ಇದೆ.