Don't Miss!
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಗಿಯದ 'ದನಕಾಯೋರ' ರಗಳೆ: ಕೋರ್ಟ್ ಮೆಟ್ಟಿಲೇರಿದ ಭಟ್ಟರು
ನಿರ್ದೇಶಕ ಯೋಗರಾಜ್ ಭಟ್ ಮತ್ತು 'ದನಕಾಯೋನು' ಚಿತ್ರದ ನಿರ್ಮಾಪಕ ಕನಕಪುರ ಶ್ರೀನಿವಾಸ್ ನಡುವಿನ ಸಂಭಾವನೆಯ ಕಿರಿಕ್ ಇನ್ನು ಮುಗಿದಿಲ್ಲ.
'ಭರ್ಜರಿ' ಚಿತ್ರದ ರಿಲೀಸ್ ವೇಳೆ ಶ್ರೀನಿವಾಸ್ ಅವರು ನೀಡಿದ್ದ ಚೆಕ್ ಗಳು ಬೌನ್ಸ್ ಆಗಿರುವ ಕಾರಣ ಭಟ್ಟರು ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಈ ಹಿಂದೆ ಯೋಗರಾಜ್ ಮತ್ತು ಶ್ರೀನಿವಾಸ್ ಅವರನ್ನ ಕರೆಯಿಸಿ ವಾಣಿಜ್ಯ ಮಂಡಳಿಯಲ್ಲಿ ಮಾತುಕತೆ ಮೂಲಕ ಸಂಭಾವನೆ ಕುರಿತು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದ್ರೆ, ನಿರ್ಮಾಪಕರ ಸಂಭಾವನೆ ನೀಡದ ಕಾರಣ ಅಂತಿಮವಾಗಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಘಟನೆಯ ಪೂರ್ತಿ ವಿವರ ಮುಂದೆ ಓದಿ....
'ದನ ಕಾಯೋನು' ಚಿತ್ರದ ಕಿರಿಕ್
ದುನಿಯಾ ವಿಜಯ್ ಅಭಿನಯಿಸಿ, ಯೋಗರಾಜ್ ಭಟ್ ನಿರ್ದೇಶನ ಮಾಡಿದ್ದ 'ದನ ಕಾಯೋನು' ಚಿತ್ರಕ್ಕಾಗಿ ತಮಗೆ ಬರಬೇಕಿದ್ದ ಸಂಭಾವನೆಯನ್ನ ನಿರ್ಮಾಪಕ ಕನಕಪುರ ಶ್ರೀನಿವಾಸ್ ಇನ್ನೂ ನೀಡದ ಕಾರಣ ಯೋಗರಾಜ್ ಭಟ್ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ.
ಸಂಭಾವನೆ ಕಿರಿಕ್: ಕೋರ್ಟ್ ಮೆಟ್ಟಿಲೇರಿದ ನಿರ್ದೇಶಕ ಯೋಗರಾಜ್ ಭಟ್
23 ಲಕ್ಷ ಹಣ ಕೊಡಬೇಕಂತೆ
ನಿರ್ಮಾಪಕರಿಂದ ತಮಗೆ ಬರಬೇಕಾಗಿರುವ 23 ಲಕ್ಷ ಹಣವನ್ನ ಕೊಡಿಸಿ ಎಂದು ಯೋಗರಾಜ್ ಭಟ್ ಅವರು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.
'ಭರ್ಜರಿ'ಗಿದ್ದ ಭಯ ಮಾಯ: ಇನ್ನೇನಿದ್ರು 'ಘರ್ಜನೆ' ಮಾತ್ರ ಬಾಕಿ
ಚೆಕ್ ಬೌನ್ಸ್ ಆಗಿದೆ
ಈ ಹಿಂದೆ 'ಭರ್ಜರಿ' ಚಿತ್ರದ ವೇಳೆ ಶ್ರೀನಿವಾಸ ಅವರು ಭಟ್ ಅವರಿಗೆ ಮೂರು ಚೆಕ್ ನೀಡಿದ್ದರು. ಆದ್ರೆ, ಚೆಕ್ ಬೌನ್ಸ್ ಆಗಿರುವ ಹಿನ್ನೆಲೆ ಭಟ್ಟರು ನ್ಯಾಯಾಲಯದ ಮೊರೆ ಹೋಗಿದ್ದಾರೆ.
ವಿಚಾರಣೆ ನಡೆಯಲಿದೆ
ಯೋಗರಾಜ್ ಭಟ್ ಅವರು ದಾಖಲಿಸಿರುವ ದೂರಿನ ವಿಚಾರಣೆ ನವೆಂಬರ್ 22 ರಂದು ಮ್ಯಾಜಿಸ್ಟ್ರಿಟ್ ಕೋರ್ಟ್ ನಲ್ಲಿ ನಡೆಯಲಿದೆ. ವಿಚಾರಣೆ ಬಳಿಕ ಕೋರ್ಟ್ ಅದೇ ದಿನ ತೀರ್ಪು ನೀಡುವ ಸಾಧ್ಯತೆ ಇದೆ.