Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿವಾದಕ್ಕೆ ಸಿಲುಕಿದ್ದ ಪದವಿ ಪೂರ್ವ: ಸನ್ ನೆಟ್ವರ್ಕ್ಗೆ ಭಾರೀ ಮೊತ್ತಕ್ಕೆ ಟಿವಿ, ಡಿಜಿಟಲ್ ಹಕ್ಕುಗಳು ಸೇಲ್
ಯೋಗರಾಜ್ ಭಟ್ ಹಾಗೂ ರವಿ ಶಾಮನೂರ್ ಜಂಟಿಯಾಗಿ ನಿರ್ಮಿಸಿದ್ದ 'ಪದವಿ ಪೂರ್ವ'. ಈ ಸಿನಿಮಾ ಬಿಡುಗಡೆಗೂ ಮುನ್ನ ಸ್ಯಾಟಲೈಟ್ ಹಾಗೂ ಓಟಿಟಿ ಖರೀದಿ ವಿಚಾರವಾಗಿ ವಿವಾದಕ್ಕೆ ಸಿಲುಕಿತ್ತು. ಇದೇ ವಿಚಾರ ಯೋಗರಾಜ್ ಭಟ್ ಹಾಗೂ ಜೀ ಕನ್ನಡದ ಬ್ಯುಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ನಡುವೆ ವೈಮಸ್ಸಿಗೂ ಕಾರಣವಾಗಿತ್ತು.
ಈ ಸಂಬಂಧ ಯೋಗರಾಜ್ ಭಟ್ ಆಡಿಯೋ ಲೀಕ್ ಆಗಿ ವೈರಲ್ ಆಗಿತ್ತು. ಈ ಆಡಿಯೋದಲ್ಲಿ 'ಪದವಿ ಪೂರ್ವ' ಸಿನಿಮಾದ ಸ್ಯಾಟಲೈಟ್ ಖರೀದಿಯಿಂದ ಹಿಂದೆ ಸರಿದಿದ್ದಾರೆಂದು ರಾಘವೇಂದ್ರ ಹುಣಸೂರು ವಿರುದ್ಧ ಗರಂ ಆಗಿದ್ದರು. ಈಗ ಇದೇ ಸಿನಿಮಾವನ್ನು ಬೇರೆ ಮನರಂಜನಾ ವಾಹಿನಿ ಖರೀದಿ ಮಾಡಿದೆ.
ಯೋಗರಾಜ್ ಭಟ್ರ 'ಗರಡಿ' ಮುಕ್ತಾಯ: ಇನ್ನೇನಿದ್ರೂ ಥಿಯೇಟರ್ನಲ್ಲೇ ಆಟ!
'ಪದವಿ ಪೂರ್ವ' ಸಿನಿಮಾ ಯೂತ್ ಸ್ಟೋರಿ, ನಿರ್ದೇಶನ, ಛಾಯಾಗ್ರಹಣ, ಹಾಡುಗಳಿಂದ ಸದ್ದು ಮಾಡಿತ್ತು. ಅಲ್ಲದೆ ಹೊಸ ಪ್ರತಿಭೆಗಳ ನಟನೆಯಿಂದಾನೂ ಹದಿಹರೆಯದ ವಯಸ್ಸಿನ ಹುಡುಗ ಹುಡುಗಿಯರ ಮನಸ್ಸು ಗೆದ್ದಿದ್ದರು. ಸದ್ಯ ಈ ಸಿನಿಮಾ ಥಿಯೇಟರ್ಗಳಲ್ಲಿ ಮೂರನೇ ವಾರ ಪ್ರದರ್ಶನ ಕಾಣುತ್ತಿದೆ. ಇದೇ ವೇಳೆ ಸಿನಿಮಾದ ಸ್ಯಾಟಲೈಟ್ ಹಾಗೂ ಓಟಿಟಿ ಹಕ್ಕುಗಳು ಮಾರಾಟ ಆಗಿದೆ.
'ಪದವಿ ಪೂರ್ವ' ಸಿನಿಮಾದ ಕನ್ನಡ ಭಾಷೆಯ ಸ್ಯಾಟಲೈಟ್ ಹಾಗೂ ಓಟಿಟಿ ಹಕ್ಕುಗಳನ್ನು ಒಂದೊಳ್ಳೆ ಮೊತ್ತಕ್ಕೆ ಖರೀದಿಯಾಗಿದೆ. ಉದಯ ಟಿವಿ ಮತ್ತು ಸನ್ನೆಕ್ಸ್ಟ್ ಟಿವಿ ಹಾಗೂ ಓಟಿಟಿ ಹಕ್ಕುಗಳನ್ನು ಖರೀದಿ ಮಾಡಿದೆ. ಹೊಸಬರ ಸಿನಿಮಾ ಸುಮಾರು 2 ಕೋಟಿ ರೂ. ಆಸುಪಾಸಿನಲ್ಲಿ ಸೇಲ್ ಆಗಿದೆ ಎನ್ನಲಾಗಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿಯನ್ನು ಹೊರ ಹಾಕಿಲ್ಲ. ಇದರೊಂದಿಗೆ ಕನ್ನಡ ಬಿಟ್ಟು ಬೇರೆ ಭಾಷೆಯ ಡಬ್ಬಿಂಗ್ ಮತ್ತು ರೀಮೇಕ್ ಹಕ್ಕುಗಳು ತಂಡದ ಬಳಿಯೇ ಇವೆ.
ಈ ಸಿನಿಮಾದಲ್ಲಿ ಹೀರೊ ಆಗಿ ಪೃಥ್ವಿ ಶಾಮನೂರ್, ಹೀರೊಯಿನ್ ಆಗಿ ಅಂಜಲಿ ಅನಿಶ್ ಮತ್ತು ಯಶ ಶಿವಕುಮಾರ್ ನಟಿಸಿದ್ದಾರೆ. ಇವರೊಂದಿಗೆ ಶರತ್ ಲೋಹಿತಾಶ್ವ, ರಂಗಾಯಣ ರಘು, ಯೋಗರಾಜ್ ಭಟ್, ಅದಿತಿ ಪ್ರಭುದೇವ, ದಿವ್ಯ ಉರುಡುಗ, ಪ್ರಭು ಮುಂದ್ಕುರ್, ಶ್ರೀ ಮಹಾದೇವ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
'ಪದವಿ ಪೂರ್ವ' ಸಿನಿಮಾವನ್ನು ಯೋಗರಾಜ್ ಭಟ್ ಗರಡಿಯಲ್ಲಿ ಪಳಗಿರುವ ಹರಿಪ್ರಸಾದ್ ಜಯಣ್ಣ ಚೊಚ್ಚಲ ಬಾರಿ ನಿರ್ದೇಶನ ಮಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ, ಯೋಗರಾಜ್ ಭಟ್ ಸಾಹಿತ್ಯದಿಂದ ಸಂಗೀತ ಪ್ರಿಯರ ಮನಗೆದ್ದಿವೆ. ಸಂತೋಷ್ ರೈ ಪಾತಾಜೆ ಕ್ಯಾಮರಾ ವರ್ಕ್ ಈ ಸಿನಿಮಾಗಿದೆ.