Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಗಲಕೋಟೆಯಲ್ಲಿ ಯೋಗರಾಜ್ ಭಟ್ಟರು, 'ಗರಡಿ' ಸೇರಿದ ಸಚಿವ ಪಾಟೀಲ್!
'ಗಾಳಿಪಟ 2' ಸಿನಿಮಾ ಬಿಡುಗಡೆ ಮುಂದಿಟ್ಟುಕೊಂಡು ಹೊಸ ಸಿನಿಮಾದ ಚಿತ್ರೀಕರಣದಲ್ಲಿ ಭರದಿಂದ ತೊಡಗಿಸಿಕೊಂಡಿದ್ದಾರೆ ನಿರ್ದೇಶಕ ಯೋಗರಾಜ್ ಭಟ್.
Recommended Video
ಯೋಗರಾಜ್ ಭಟ್ಟರು 'ಗರಡಿ' ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಈ ಮೊದಲು ಬೆಂಗಳೂರಿನ ಜಿವಿ ಅಯ್ಯರ್ ಸ್ಟುಡಿಯೋದಲ್ಲಿ ಸೆಟ್ ಹಾಕಿ ಚಿತ್ರೀಕರಣ ಮಾಡಿದ್ದ ಚಿತ್ರತಂಡ ಈಗ ಬಾಗಲಕೋಟೆಗೆ ಹಾರಿದ್ದು ಅಲ್ಲಿ ಹೊರಾಂಗಣ ಚಿತ್ರೀಕರಣದಲ್ಲಿ ತೊಡಗಿಕೊಂಡಿದೆ.
'ಗರಡಿ' ಸಿನಿಮಾದಿಂದ ಹೊರನಡೆದ ರಚಿತಾ ರಾಮ್ ಜಾಗಕ್ಕೆ ಬಂದ್ರು ಮತ್ತೋರ್ವ ನಟಿ!
ಸೌಮ್ಯ ಫಿಲಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ 'ಗರಡಿ' ಸಿನಿಮಾದ ಚಿತ್ರೀಕರಣ ಪ್ರಸ್ತುತ ಬಾದಾಮಿಯ ಮೇನಬಸದಿ ಹಾಗೂ ಸುತ್ತ-ಮುತ್ತಲ ಸ್ಥಳಗಳಲ್ಲಿ ಚಿತ್ರೀಕರಣಗೊಳ್ಳುತ್ತಿದೆ. ನಟ ಯಶಸ್ ಸೂರ್ಯ ನಾಯಕ ನಟನಾಗಿ ನಟಿಸುತ್ತಿರುವ ಈ ಸಿನಿಮಾದಲ್ಲಿ ಸೋನಲ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ದರ್ಶನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಕೃಷಿ ಸಚಿವ ಬಿ.ಸಿ.ಪಾಟೀಲ್ ಸಹ ಈ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದು ಇಂದು ಬಾದಾಮಿಯಲ್ಲಿ ನಡೆದ ಚಿತ್ರೀಕರಣದಲ್ಲಿ ಬಿಸಿ ಪಾಟೀಲ್ ಭಾಗವಹಿಸಿದ್ದರು. ಚಿತ್ರೀಕರಣ ಸೆಟ್ನಲ್ಲಿ ಮಾಧ್ಯಮದವರೊಟ್ಟಿಗೆ ಮಾತನಾಡಿದ ಬಿ.ಸಿ.ಪಾಟೀಲ್, ''ನಾನು ಸಿನಿಮಾದಲ್ಲಿ ನಟಿಸಲೆಂದೇ ಪೊಲೀಸ್ ನೌಕರಿ ಬಿಟ್ಟು ಬಂದೆ. ಸಿನಿಮಾ ಗೀಳು ಬಿಟ್ಟು ಬಿಡದ ಮಾಯೆ. ನನಗೆ ಕಲೆ ಬಗ್ಗೆ ವಿಶೇಷ ಆಸಕ್ತಿ ಇದೆ. ರಾಜಕಾರಣದಲ್ಲಿ ಇದ್ದಾಗಲೂ ಸಿನಿಮಾ ಮಾಡುತ್ತೇನೆ. ಈಗ ಗರಡಿ ಸಿನಿಮಾ ಮಾಡುತ್ತಿದ್ದು. ಕೆಲಸದ ಒತ್ತಡ, ಕಾರ್ಯಚಟುವಟಿಕೆಗಳ ನಡುವೆ ಬಿಡುವಿನ ಸಮಯದಲ್ಲಿ ನಟನೆ ಮಾಡುತ್ತೇನೆ'' ಎಂದರು.
''ಉತ್ತರ ಕರ್ನಾಟಕದ ಮತ್ತು ಮೈಸೂರು ರಾಜ-ಮಹಾರಾಜರು ಕುಸ್ತಿಗೆ ಹೆಚ್ಚಿಗೆ ಪ್ರಾಶಸ್ತ್ಯ ನೀಡಿದ್ದರು. ಅದಕ್ಕೆ ಬಾದಾಮಿಯಲ್ಲಿ 'ಗರಡಿ' ಚಿತ್ರದ ಚಿತ್ರೀಕರಣ ಮಾಡುತ್ತಿದ್ದೇವೆ. ಏಳು ವರ್ಷದ ನಂತರ ಸಿನಿಮಾ ನಿರ್ಮಾಣ ಆರಂಭಿಸಿದ್ದೇವೆ. ಯೋಗರಾಜ್ ಭಟ್ ಒಳ್ಳೆಯ ಕಥೆ ಹೇಳಿದರು. 'ಗರಡಿ' ಸಿನಿಮಾದಲ್ಲಿ ಜನಪದ ಶೈಲಿಯ ಕಥೆ ಇದೆ. ಇದರಲ್ಲಿ ನಾನು ಗರಡಿ ಮನೆಯ ಯಜಮಾನ ರಂಗಪ್ಪ ಎಂಬ ಪಾತ್ರದಲ್ಲಿ ನಟಿಸುತ್ತಿದ್ದೇನೆ'' ಎಂದು ಬಿ.ಸಿ.ಪಾಟೀಲ್ ಮಾಹಿತಿ ನೀಡಿದರು.
'ಗರಡಿ' ಸಿನಿಮಾದಲ್ಲಿ ಬಿ.ಸಿ.ಪಾಟೀಲ್ ಮಾತ್ರವೇ ಅಲ್ಲ ಸಚಿವ ಎಸ್.ಟಿ.ಸೋಮಶೇಖರ್ ಸಹ ಬಣ್ಣ ಹಚ್ಚಲಿದ್ದಾರೆ. ಸಿನಿಮಾವನ್ನು ಬಿ.ಸಿ.ಪಾಟೀಲ್ ಪುತ್ರಿ ಸೃಷ್ಟಿ ನಿರ್ಮಾಣ ಮಾಡುತ್ತಿದ್ದಾರೆ.