twitter
    For Quick Alerts
    ALLOW NOTIFICATIONS  
    For Daily Alerts

    ಸತ್ತೋಗೋ ಅಂಥ ಆಡಿಯೋ ಕಳುಹಿಸುತ್ತೇನೆ: ಜೀ ಕನ್ನಡದ ರಾಘವೇಂದ್ರ ಹುಣಸೂರು ವಿರುದ್ಧ ಭಟ್ರು ಗರಂ! ಆಡಿಯೊ ವೈರಲ್

    |

    ಕನ್ನಡ ಚಲನಚಿತ್ರರಂಗದ ಯಶಸ್ವಿ ನಿರ್ದೇಶಕರಲ್ಲಿ ಓರ್ವರಾದ ಯೋಗರಾಜ್ ಭಟ್ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳದಂತಹ ಪಕ್ಕಾ ಕ್ಲಾಸ್ ಡೈರೆಕ್ಟರ್. ಚಿತ್ರದ್ದಾಗಲಿ ಅಥವಾ ವೈಯಕ್ತಿಕ ಜೀವನದಲ್ಲಾಗಲಿ ಯೋಗರಾಜ್ ಭಟ್ ವಿವಾದ ಮಾಡಿಕೊಂಡು ಎಡವಿದ ಉದಾಹರಣೆಗಳಿಲ್ಲ. ಪುನೀತ್ ರಾಜ್‌ಕುಮಾರ್, ಸುದೀಪ್ ಹಾಗೂ ಗಣೇಶ್ ರೀತಿಯ ಸ್ಟಾರ್ ನಟರಿಗೆ ಚಿತ್ರ ನಿರ್ದೇಶಿಸಿರುವ ಯೋಗರಾಜ್ ಭಟ್ ನಿರ್ದೇಶನದ ಜತೆಗೆ ಓರ್ವ ಉತ್ತಮ ಚಿತ್ರಸಾಹಿತಿಯೂ ಹೌದು ಹಾಗೂ ಕಿರುತೆರೆ ರಿಯಾಲಿಟಿ ಶೋಗಳ ಜಡ್ಜ್ ಕೂಡ ಹೌದು.

    ಜೀ ಕನ್ನಡ ವಾಹಿನಿಯಲ್ಲಿ ಡ್ರಾಮಾ, ಕಾಮಿಡಿ ಕಿಲಾಡಿಗಳು ರೀತಿಯ ಕಾರ್ಯಕ್ರಮಗಳಿಗೆ ಜಡ್ಜ್ ಆಗಿ ವೀಕ್ಷಕರ ಫೇವರಿಟ್ ಜಡ್ಜ್ ಆಗಿದ್ದ ಯೋಗರಾಜ್ ಭಟ್ ಈಗ ಅದೇ ವಾಹಿನಿಯ ಮನರಂಜನೆಯ ಮುಖ್ಯಸ್ಥ ರಾಘವೇಂದ್ರ ಹುಣಸೂರು ವಿರುದ್ಧ ಕಿಡಿಕಾರಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ತಾವು ನಿರ್ದೇಶಿಸಿರುವ ಮುಂದಿನ ಚಿತ್ರಗಳ ಡಿಜಿಟಲ್ ಹಕ್ಕನ್ನು ಖರೀದಿಸುವುದಾಗಿ ಹೇಳಿದ್ದ ರಾಘವೇಂದ್ರ ಹುಣಸೂರು ಈಗ ಸ್ಪಂದಿಸುತ್ತಿಲ್ಲ ಎಂಬ ಕಾರಣಕ್ಕೆ ಯೋಗರಾಜ್ ಭಟ್ ಗರಂ ಆಗಿದ್ದಾರೆ ಎನ್ನಲಾಗುತ್ತಿದೆ.

    ಈ ಸಂಬಂಧ ಎರಡು ಆಡಿಯೊಗಳು ವಾಟ್ಸಪ್‌ನಲ್ಲಿ ಹರಿದಾಡುತ್ತಿದ್ದು ಇದರಲ್ಲಿ ಯೋಗರಾಜ್ ಭಟ್‌ ಜೀ ಕನ್ನಡದ ರಾಘವೇಂದ್ರ ಹುಣಸೂರು ವಿರುದ್ಧ ಕಿಡಿಕಾರಿದ್ದಾರೆ. ಈ ಆಡಿಯೊದಲ್ಲಿ ಕೆಲ ಕೆಟ್ಟ ಪದಗಳ ಬಳಕೆಯೂ ಇದ್ದು ಸಹನಾಮೂರ್ತಿ ಆಗಿದ್ದ ಯೋಗರಾಜ್ ಭಟ್ ಈ ಇಷ್ಟರ ಮಟ್ಟಿಗೆ ಕೋಪಗೊಂಡಿರುವುದನ್ನು ಕೇಳಿದವರು ಆಶ್ಚರ್ಯಕ್ಕೊಳಗಾಗಿದ್ದಾರೆ.

    ರಾಘಪ್ಪ ಕಾಲ್ ಪಿಕ್ ಮಾಡಪ್ಪ, ನೇಣು ಹಾಕಿಕೊಂಡು ಸತ್ತೋಗ್ತಿಯ

    ರಾಘಪ್ಪ ಕಾಲ್ ಪಿಕ್ ಮಾಡಪ್ಪ, ನೇಣು ಹಾಕಿಕೊಂಡು ಸತ್ತೋಗ್ತಿಯ

    "ರಾಘಪ್ಪ ನೀನು ಜೀ ಟಿವಿ ಉದ್ಧಾರ ಮಾಡಿದವನಾಗಿ ನಿನ್ನ ನಂಬಿಕೊಂಡಿರೋ ಇಂಡಸ್ಟ್ರಿಯವರನ್ನೂ ಉದ್ಧಾರ ಮಾಡಪ್ಪೋ. ಪದವಿಪೂರ್ವ ಅಂತ ಅಚ್ಚ ಕನ್ನಡದ ಚಿತ್ರ, ತುಂಬಾ ಅದ್ಭುತವಾಗಿ ಬಂದಿದೆ. ಈ ಚಿತ್ರದ ಟಿವಿ ಹಾಗೂ ಡಿಜಿಟಲ್ ತಗೊತಿನಿ ಅಂತ ಹೇಳಿದ್ದೆ. ಅದರ ಪ್ರಪೋಸಲ್ ಕಳಿಸಿದ್ದೀನಿ, ಆದರೆ ಫೋನ್ ತೆಗೀತಾ ಇಲ್ಲ ನೀನು. ಈಗ ಚಿತ್ರವನ್ನು ತಗೊಳ್ತಿಯೋ ಇಲ್ವೋ ಕ್ಲಾರಿಟಿ ಬೇಕು, ತುಂಬಾ ಅರ್ಜೆಂಟ್ ಇದೆ, ಇನ್ನು ಹತ್ತು ನಿಮಿಷದಲ್ಲಿ ಕಾಲ್ ಮಾಡು. ಇಲ್ಲಾ ಅಂದ್ರೆ ಒಂದು ಆಡಿಯೋ ಕಳುಹಿಸುತ್ತೇನೆ, ಅದನ್ನು ಕೇಳಿದ್ರೆ ನೀನು ಉರ್ಕೊಂಡು ನೇಣು ಹಾಕಿಕೊಂಡು ಸತ್ತೋಗ್ತಿಯ ಆಮೇಲೆ ಬಯ್ಕೊಬೇಡ" ಎಂದು ತುಸು ಕೆಟ್ಟದಾಗಿಯೇ ವಾಟ್ಸಪ್ ಆಡಿಯೊ ಮೂಲಕ ಹೇಳಿದ್ದಾರೆ.

    ಇದರ ಬೆನ್ನಲ್ಲೇ ಎರಡನೇ ಆಡಿಯೊ

    ಇದರ ಬೆನ್ನಲ್ಲೇ ಎರಡನೇ ಆಡಿಯೊ

    ಇನ್ನು ಮೇಲಿನ ಆಡಿಯೊ ಬೆನ್ನಲ್ಲೇ ಇರುವ ಮತ್ತೊಂದು ಆಡಿಯೊವನ್ನು ಯೋಗರಾಜ್ ಭಟ್ ಕಳುಹಿಸಿದ್ದಾರೆ. ಈ ಆಡಿಯೊದಲ್ಲಿ ಮೊದಲಿಗೆ "ಅಲ್ಲ ರಾಘು, ಯಥಾಪ್ರಕಾರ ಫೋನ್ ತೆಗಿತಾ ಇಲ್ಲ, ಇಪ್ಪತ್ತು ದಿನದಿಂದ ಕಾಲ್ ಮಾಡ್ತಾ ಇದ್ದೇನೆ ನಿಂಗೆ, ವಾಪಸ್ ಫೋನ್ ಮಾಡಿಲ್ಲ. ಈಗ ಸರಿಯಾಗಿ ಉಗೀತಿನಿ, ಸರಿಯಾಗಿ ಕೇಳುಸ್ಕೋ ಬೇಕು ನೀನು" ಎಂದು ಹೇಳಿದ್ದಾರೆ.

    ನಿಂಗೆ ಬೇಕಾದಾಗ ನಮ್ಮತ್ರ ಬರ್ತೀಯ, ನಾನು ಕಾಲ್ ಮಾಡೋ ಅಷ್ಟು ದೊಡ್ಡವನಲ್ಲ ನೀನು!

    ನಿಂಗೆ ಬೇಕಾದಾಗ ನಮ್ಮತ್ರ ಬರ್ತೀಯ, ನಾನು ಕಾಲ್ ಮಾಡೋ ಅಷ್ಟು ದೊಡ್ಡವನಲ್ಲ ನೀನು!

    ಇದೇ ಎರಡನೇ ಆಡಿಯೊದಲ್ಲಿ ತುಸು ಅಶ್ಲೀಲ ಶಬ್ದಗಳನ್ನು ಬಳಸಿ ಮಾತನಾಡಿರುವ ಭಟ್ರು ನಿಂಗೆ ಕಷ್ಟ ಅಂದಾಗ ನಮ್ಮತ್ರ ಬರ್ತಿಯ, ಅದೇ ನಮಗೆ ಅಗತ್ಯ ಬಿದ್ದಾಗ ಸಹಾಯ ಮಾಡುವುದಿಲ್ಲ ಎಂದು ಆರೋಪಿಸಿದ್ದಾರೆ ಹಾಗೂ ಇದು ನನ್ನೊಬ್ಬನ ಆರೋಪವಲ್ಲ, ಮುಕ್ಕಾಲು ಭಾಗ ಚಿತ್ರರಂಗದ ಆರೋಪ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ "ನಾವೆಲ್ಲಾ ಕಾಲ್ ಮಾಡೋವಷ್ಟು ದೊಡ್ಡವನಲ್ಲ ನೀನು ತುಂಬಾ ಅಲ್ಪ, ಅದು ನಿಂಗೂ ಗೊತ್ತು ಇರಲಿ ಅಂತ ನೆನಪಿಸುತ್ತಿದ್ದೇನೆ" ಎಂದರು.

    ನೀನು ಬೆಳೆಯೋ ಮಗ ಅಲ್ಲ!

    ನೀನು ಬೆಳೆಯೋ ಮಗ ಅಲ್ಲ!

    ಇನ್ನೂ ಮುಂದುವರಿದು ಮಾತನಾಡಿರುವ ಭಟ್ರು "ಯಾವ ಇಂಡಸ್ಟ್ರಿ ಚಿತ್ರಗಳನ್ನು ಬಳಸಿಕೊಂಡು ನಾವು ಟಿಆರ್‌ಪಿಯಲ್ಲಿ ಮುಂದು ಅಂತ ಮೆರೆಯುತ್ತೀಯೋ ಅದೇ ಇಂಡಸ್ಟ್ರಿಯವರ ಫೋನ್ ತೆಗೆಯಲ್ಲ ನೀನು ಅಂದರೆ ನೀನು ತುಂಬಾ ಬೆಳೆದಿದ್ದೀಯ ಅಂತ ಅರ್ಥ, ಇಲ್ಲ ನಾವು ಸತ್ತಿದ್ದೀವಿ ಅಂತ ಅರ್ಥ. ನೀ ಯಾವುದೇ ಕಾರಣಕ್ಕೂ ಬೆಳೆಯೋ ಮಗ ಅಲ್ಲ, ನಾವು ಸಾಯೋ ಮಂದಿ ಅಲ್ಲ ನಂಗೊತ್ತು. ನಿನ್ನಂತವರನ್ನೆಲ್ಲಾ ಹೂತೇ ಲೇಟಾಗಿ ಹೋಗ್ತೀನಿ. ನಿನ್ನ ಅವನತಿ ಶುರುವಾಗಿದೆ ಕಣೋ. ಬೀಳ್ತಿಯ ಆದ್ರೆ ಯಾವ ಹೈಟ್‌ನಿಂದ ಅಂತ ಗೊತ್ತಿಲ್ಲ. ಎಲ್ಲಾ ರೀತಿಯಲ್ಲೂ ದಬಾರ್ ಅಂತ ಬೀಳ್ತಿಯ, ಬಿದ್ದಾಗ ನಾಲ್ಕು ಜನ ಬರ್ತಾರೆ, ನನ್ನ ಕರ್ಮ ನಾನು ಬರ್ತೀನಿ, ಎತ್ತುತ್ತೀನಿ ಟಮಟೆ ಡಾನ್ಸ್ ಬೇಕದ್ರಾ ಮಾಡ್ತಿನಿ, ಆದರೆ ನಿನ್ನ ಜೊತೆ ವ್ಯವಹಾರ ಮಾತ್ರ ಬೇಡ" ಎಂದು ಆಕ್ರೋಶ ಹೊರಹಾಕಿದ್ದಾರೆ.

    ಬೇರೆಯವರೊಂದಿಗೆ ಚಿತ್ರ ವ್ಯವಹಾರ ಮಾಡ್ತೀನಿ

    ಬೇರೆಯವರೊಂದಿಗೆ ಚಿತ್ರ ವ್ಯವಹಾರ ಮಾಡ್ತೀನಿ

    ಇನ್ನು ಅಂತಿಮವಾಗಿ ಮಾತನಾಡಿದ ಯೋಗರಾಜ್ ಭಟ್ "ಪದವಿಪೂರ್ವ, ಗರಡಿ, ಶಿವಣ್ಣನ ಕರಕಟ ದಮನಕ ಚಿತ್ರಗಳ ವ್ಯವಹಾರವನ್ನು ಬೇರೆಯವರ ಜೊತೆ ಮಾಡ್ತೀನಿ. ನಿನ್ನ ಜೊತೆಯಂತೂ ಮಾಡಲ್ಲ, ನಿನ್ನ ಜೊತೆ ವ್ಯವಹಾರಕ್ಕೆ ಇಳಿಯಲ್ಲ, ಫೋನ್ ಕೂಡ ಮಾಡಲ್ಲ, ಸಹವಾಸ ಸಾಕು, ನಿನ್ನನ್ನು ತಿದ್ದಿಕೋ ಅಂತಾನೂ ಹೇಳಲ್ಲ. ಏಕೆಂದರೆ ನೀನು ತುಂಬಾ ಹೈಟ್‌ಗೆ ಹೋಗಿದ್ದೀಯ ನಿನ್ನ ಬರಿಗೈನಲ್ಲಿ ಹಿಡಿದುಕೊಳ್ಳೋಕೆ ನನ್ನಂತ ಬಡವನಿಂದ ಆಗಲ್ಲ. ನಾವು ನೌಕರರು, ಮೇಸ್ತ್ರಿಗಳು, ಕಾರ್ಪೋರೇಷನ್ ಅವರು ಅನ್ಕೊಳಪ್ಪ. ನೀನು ನೀಟಾಗಿ ಬೀಳು ತಲೆ ಹೊಡ್ಕೊ, ಬದುಕಿದ್ರೆ ಬರ್ತೀನಿ. ಟಾಟಾ ಬೈ ಬೈ.." ಎಂದು ಮಾತನಾಡಿದ್ದಾರೆ.

    English summary
    Yogaraj Bhat slams Zee Kannada creative head Raghavendra Hunsur via whatsapp audio. Take a look
    Saturday, November 12, 2022, 14:19
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X