Don't Miss!
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಂಗಾಯಣ ರಘು ಹುಟ್ಟುಹಬ್ಬಕ್ಕೆ ಭಟ್ಟರ ಶುಭಾಶಯ
ನಟ ರಂಗಾಯಣ ರಘು ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ರಂಗಾಯಣ ರಘು ಹುಟ್ಟುಹಬ್ಬಕ್ಕೆ ನಿರ್ದೇಶಕ ಯೋಗರಾಜ್ ಭಟ್ ಶುಭಾಶಯವನ್ನು ತಿಳಿಸಿದ್ದಾರೆ.
ತಮ್ಮ ಫೇಸ್ ಬುಕ್ ಖಾತೆಯಲ್ಲಿ ರಂಗಾಯಣ ರಘು ಅವರಿಗೆ ನಾಲ್ಕು ಸಾಲುಗಳ ಮೂಲಕ ವಿಶ್ ಮಾಡಿದ್ದಾರೆ. ''ಅಪಾರ ಜೀವನಾಸಕ್ತಿ, ಅಪರಿಮಿತ ಸ್ನೇಹ, ಅಸಾಧಾರಣ ಪ್ರತಿಭೆ, ಅದ್ವಿತೀಯ ವ್ಯಕ್ತಿತ್ವ, ಅಚ್ಚಗನ್ನಡ ನಟ ರಂಗಾಯಣ ರಘು ಅವರಿಗೆ ಹುಟ್ಟುಹಬ್ಬದ ಕೋಟಿ ಕೋಟಿ ಶುಭಾಶಯಗಳು.'' ಎಂದು ಭಟ್ಟರು ಬರೆದುಕೊಂಡಿದ್ದಾರೆ.
ವಿಜಯನಗರದ ಫುಟ್ ಪಾತ್ ನಲ್ಲಿ ರಂಗಾಯಣ ರಘು ತರಕಾರಿ ಮಾರಿದ್ದು ಯಾಕೆ.?
ಯೋಗರಾಜ್ ಭಟ್ ಹಾಗೂ ರಂಗಾಯಣ ರಘು ಕಾಂಬಿನೇಶನ್ ನಲ್ಲಿ ಅನೇಕ ಸಿನಿಮಾಗಳು ಬಂದಿವೆ. ಇತ್ತೀಚಿಗಷ್ಟೆ 'ಪಂಚತಂತ್ರ' ಸಿನಿಮಾದಲ್ಲಿ ರಂಗಪ್ಪನ ಪಾತ್ರದಲ್ಲಿ ರಂಗಾಯಣ ರಘು ಮಿಂಚಿದ್ದರು. ಸಿನಿಮಾಗೆ ಅವರ ನಟನೆ ಪ್ಲಾಸ್ ಆಗಿತ್ತು.
ಮತ್ತೊಂದು ಕಡೆ 'ಪುಕ್ಸಟ್ಟೆ ಲೈಫು' ಸಿನಿಮಾದ ಪೋಸ್ಟರ್ ರಂಗಾಯಣ ರಘು ಬರ್ತ್ ಡೇ ವಿಶೇಷ ಹೊರ ಬಂದಿದೆ. ಈ ಸಿನಿಮಾವನ್ನು ಅರವಿಂದ್ ಕುಪ್ಲೀಕರ್ ನಿರ್ದೇಶನ ಮಾಡುತ್ತಿದ್ದಾರೆ. ಸಂಚಾರಿ ವಿಜಯ್ ಚಿತ್ರದ ನಾಯಕನಾಗಿದ್ದಾರೆ.