Don't Miss!
- Automobiles ರಾಂಗ್ ರೂಟ್ನಲ್ಲಿ ಬಂದು ಪ್ರಶ್ನಿಸಿದ ಬೈಕ್ ಸವಾರನಿಗೆ ಥಳಿಸಿದ ಕಾರು ಚಾಲಕ: ವಿಡಿಯೋ
- News CAA: ಸಿಎಎ ಜಾರಿ ಪ್ರಶ್ನಿಸಿ 230ಕ್ಕೂ ಹೆಚ್ಚು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಮಹತ್ವದ ವಿಚಾರಣೆ
- Finance ಆಧಾರ್ ಉಚಿತ ಅಪ್ಡೇಟ್ ದಿನಾಂಕ ಜೂ.14ರವರೆಗೆ ವಿಸ್ತರಣೆ: ಆನ್ಲೈನ್ನಲ್ಲಿ ಹೀಗೆ ನವೀಕರಿಸಿ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Sports IPL 2024: ಮುಂಬೈ ನಾಯಕನಿಗೆ ಪತ್ರಕರ್ತರಿಂದ ಬೌನ್ಸರ್: ಉತ್ತರಿಸದೆ ಮೌನಕ್ಕೆ ಶರಣಾದ ಹಾರ್ದಿಕ್ ಪಾಂಡ್ಯ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಧಿಕೃತ ಘೋಷಣೆ ಹೊರಡಿಸಿದ ಯೋಗರಾಜ್ ಭಟ್
ಕನ್ನಡ ಸಿನಿಮಾರಂಗದ ಸ್ಟಾರ್ ನಿರ್ದೇಶಕ ಯೋಗರಾಜ್ ಭಟ್ ಅಧಿಕೃತ ಘೋಷಣೆ ಹೊರಡಿಸಿದ್ದಾರೆ. ಭಟ್ರು ಹೇಳುತ್ತಿರುವ ವಿಚಾರ ಸಿನಿಮಾಗೆ ಸಂಬಂಧ ಪಟ್ಟಿದಲ್ಲ. ವಯಕ್ತಿಕ ವಿಚಾರಕ್ಕೆ ಸಂಬಂಧ ಪಟ್ಟದ್ದು. ಹೌದು ಯೋಗರಾಜ್ ಭಟ್ ಅವರ ಫೋಟೋವನ್ನು ರಾಜಕೀಯವಾಗಿ ಉಪಯೋಗ ಮಾಡಿಕೊಳ್ಳುತ್ತಿದ್ದಾರಂತೆ. ಆದ್ದರಿಂದ ಈ ಘೋಷಣೆಯನ್ನ ಹೊರಡಿಸಿದ್ದಾರೆ.
ತಮ್ಮ ಟ್ವಿಟ್ಟರ್ ಮತ್ತು ಫೇಸ್ ಬುಕ್ ಖಾತೆಯಲ್ಲಿ "ನನ್ನ ಫೋಟೋವನ್ನು ರಾಜಕೀಯವಾಗಿ ಬಳಸಿರುವುದು ಕಂಡು ಬಂದಿದೆ ಹಾಗಾಗಿ ನನ್ನ ನಿಲುವನ್ನು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇನೆ. ನಾನು ನಿಷ್ಪಕ್ಷಪಾತಿ, ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವನಲ್ಲ, ಯಾವುದಾದರೂ ಸರ್ಕಾರದ ಕೆಲಸ ಇದ್ದರೆ ಮಾಡುತ್ತೇನೆ ಹೊರತು ನಾನು ಯಾರ ಪರವೂ ಅಲ್ಲ, ವಿರೋಧಿಯೂ ಅಲ್ಲ. ಜೈ ಭಾರತಾಂಬೆ ಜೈ ಕರ್ನಾಟಕ ಜೈ ಹಿಂದ್ ಜೈ ಮುಂದ್" ಎಂದು ಬರೆದುಕೊಂಡಿದ್ದಾರೆ.
ಎರಡನೇ ಬಾರಿ 'ತೆನೆ ಹೊತ್ತ' ನಟಿ ಪೂಜಾ ಗಾಂಧಿ
ಭಟ್ಟರು ಹಾಗೂ ಅವರ ತಂಡ ಸೇರಿ ಇತ್ತೀಚಿಗಷ್ಟೆ ಮತದಾನದ ಕುರಿತಾಗಿ ಸರ್ಕಾರಕ್ಕೆ ಹಾಡನ್ನು ಚಿತ್ರೀಕರಿಸಿಕೊಟ್ಟಿದ್ದರು. ಇದೇ ಕಾರಣಕ್ಕೆ ಕೆಲವು ಜನರು ಭಟ್ಟರು ರಾಜಕೀಯ ಪಕ್ಷ ಸೇರುತ್ತಾರೆ ಎಂದುಕೊಂಡಿದ್ದಾರೆ.
ಈ ರೀತಿಯ ಸ್ಟೇಟಸ್ ಹಾಕುವ ಮೂಲಕ ಯೋಗರಾಜ್ ಭಟ್ ತಮ್ಮ ನಿಲುವನ್ನ ಅಭಿಮಾನಿಗಳಿಗೆ ಮತ್ತು ಸಾಮಾನ್ಯ ಜನರಿಗೆ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ನನ್ನ ಪೋಟೋವನ್ನ ಯಾವುದೇ ಪಕ್ಷದವರು ಬಳಸಿಕೊಳ್ಳಬೇಡಿ ಎಂದು ಇನ್ಡೈರೆಕ್ಟರ್ ಆಗಿ ರಾಜಕೀಯ ವ್ಯಕ್ತಿಳಿಗೂ ತಿಳಿಸಿದ್ದಾರೆ.
ರಾಜಕೀಯ 'ರಣರಂಗ'ದಲ್ಲಿ ಕಾದಾಡಲಿರುವ ಸಿನಿಮಾ ಮಂದಿ ಇವರೇ