Don't Miss!
- News Asianet Digital Network Survey: ಮತ್ತೊಮ್ಮೆ ಮೋದಿಗೆ ಜೈ ಎಂದ ಮತದಾರರು!
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿಪರದೆಗೆ ಯೋಗರಾಜ್ ಭಟ್, ಅಯ್ಯೋ ದ್ಯಾವ್ರೇ!
ತಮ್ಮ ಕಾರ್ಯ ಚಟುವಟಿಕೆಯನ್ನು ಬಾಲಿವುಡ್ ವಿಸ್ತರಿಸಿರುವ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರು ಈಗ ಮುಂಬೈಗೆ ಸ್ಥಳಾಂತರವಾಗಿರುವುದು ಗೊತ್ತೇ ಇದೆ. ಅವರು ಇದೇ ಮೊದಲ ಬಾರಿಗೆ ಬಣ್ಣ ಹಚ್ಚುತ್ತಿದ್ದಾರೆ. ಇದೊಂದು ಅಂಡರ್ ವರ್ಲ್ಡ್ ಕಥೆ.
ಯೋಗರಾಜ್ ಮೂವೀಸ್ ಜಯಣ್ಣ ಕಂಬೈನ್ಸ್ ಲಾಂಛನದಲ್ಲಿ ಚಿತ್ರ ನಿರ್ಮಿಸಲಾಗುತ್ತಿದೆ. ಈ ಚಿತ್ರಕ್ಕೆ ಜಯಣ್ಣ ಭೋಗೇಂದ್ರ ನಿರ್ಮಾಪಕರು. ಅಯ್ಯೋ ಇಷ್ಟಕ್ಕೂ ಚಿತ್ರದ ಹೆಸರೇ ಹೇಳಲಿಲ್ಲ ಅಂತಿದ್ದೀರಾ. ಚಿತ್ರದ ಹೆಸರು 'ದ್ಯಾವ್ರೇ'. 'ಒಂದೇ ಒಂದು ಕಿಂಡಿ ಕೊಡು ಪ್ಲೀಸ್' ಎಂಬುದು ಚಿತ್ರದ ಅಡಿಬರಹ.
ಅಲ್ಲಲ್ಲಿ ನಡೆದ, ಕಣ್ಣಿಗೆ ಕಂಡ ಕೆಲವು ನೈಜ ಘಟನೆಗಳೇ ಚಿತ್ರದ ಕಥಾವಸ್ತು ಎನ್ನುತ್ತಾರೆ ನಿರ್ದೇಶಕರು. ಈ ಚಿತ್ರದಲ್ಲಿ ಯೋಗರಾಜ್ ಭಟ್ ಅವರು ಒಂದು ಪಾತ್ರವನ್ನು ಪೋಷಿಸುತ್ತಿದ್ದಾರೆ. ಈ ಮೂಲಕ ಅವರು ಬೆಳ್ಳಿಪರದೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಪಾತ್ರದ ಜೊತೆಗೆ ಒಂದು ಹಾಡನ್ನೂ ಬರೆದಿದ್ದಾರೆ. ಅದೇನೆಂದರೆ "ಖಾಲಿ ಪರ್ಸಲಿ ಜಿರಳೆ ಸೇರ್ಕೋಬಾರ್ದು, ಕಾಸು ಇದ್ದರೆ ಉಸಿರು ಎಳ್ಕೊಬೋದು..ನೂರ್ ರೂಪಾಯ್ ನೋಟು ತೋರಿಸು ಫಸ್ಟು, ಸೂರ್ಯ ಹುಟ್ಟೋದು ನೆಕ್ಸ್ಟು.. ದುಡ್ಡು ಮಾಡು ಗುರುವೇ ನೀ ಯಾಕೆ ಸುಮ್ಮನಿರುವೆ, ಎಲ್ರೂ ಕಳ್ಳರಿಲ್ಲಿ ನೀ ಯಾತಕಾಗಿ ಅಳುವೇ..? ಕಾಸಿಲ್ಲದಿದ್ದರೆ ಪಾಸುಬುಕ್ಕನು ಬೈಯ್ಯೋಕಾಯ್ತದ...?"
ದ್ಯಾವ್ರೇ ಚಿತ್ರಕ್ಕೆ ವೀರ್ ಸಮರ್ಥ್ ಅವರ ಸಂಗೀತ, ಮುರಳಿ ಅವರ ನೃತ್ಯ ನಿರ್ದೇಶನವಿದೆ. ಪಾತ್ರವರ್ಗದಲ್ಲಿ ನೀನಾಸಂ ಸತೀಶ್, ಸೋನು ಗೌಡ, ಸೋನಿಯಾ ಗೌಡ, ಶ್ರುತಿ ಹರಿಹರನ್, ಗಂಧರ್ವ ಚೇತನ್, ರಾಜೇಶ್ ನಟರಾಜನ್ ಮುಂತಾದವರಿದ್ದಾರೆ. (ಒನ್ಇಂಡಿಯಾ ಕನ್ನಡ)