Don't Miss!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- News India weather: ಮಳೆಗಾಗಿ ಕಾಯುತ್ತಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿಪರದೆಗೆ ಯೋಗರಾಜ್ ಭಟ್, ಅಯ್ಯೋ ದ್ಯಾವ್ರೇ!
ತಮ್ಮ ಕಾರ್ಯ ಚಟುವಟಿಕೆಯನ್ನು ಬಾಲಿವುಡ್ ವಿಸ್ತರಿಸಿರುವ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರು ಈಗ ಮುಂಬೈಗೆ ಸ್ಥಳಾಂತರವಾಗಿರುವುದು ಗೊತ್ತೇ ಇದೆ. ಅವರು ಇದೇ ಮೊದಲ ಬಾರಿಗೆ ಬಣ್ಣ ಹಚ್ಚುತ್ತಿದ್ದಾರೆ. ಇದೊಂದು ಅಂಡರ್ ವರ್ಲ್ಡ್ ಕಥೆ.
ಯೋಗರಾಜ್ ಮೂವೀಸ್ ಜಯಣ್ಣ ಕಂಬೈನ್ಸ್ ಲಾಂಛನದಲ್ಲಿ ಚಿತ್ರ ನಿರ್ಮಿಸಲಾಗುತ್ತಿದೆ. ಈ ಚಿತ್ರಕ್ಕೆ ಜಯಣ್ಣ ಭೋಗೇಂದ್ರ ನಿರ್ಮಾಪಕರು. ಅಯ್ಯೋ ಇಷ್ಟಕ್ಕೂ ಚಿತ್ರದ ಹೆಸರೇ ಹೇಳಲಿಲ್ಲ ಅಂತಿದ್ದೀರಾ. ಚಿತ್ರದ ಹೆಸರು 'ದ್ಯಾವ್ರೇ'. 'ಒಂದೇ ಒಂದು ಕಿಂಡಿ ಕೊಡು ಪ್ಲೀಸ್' ಎಂಬುದು ಚಿತ್ರದ ಅಡಿಬರಹ.
ಅಲ್ಲಲ್ಲಿ ನಡೆದ, ಕಣ್ಣಿಗೆ ಕಂಡ ಕೆಲವು ನೈಜ ಘಟನೆಗಳೇ ಚಿತ್ರದ ಕಥಾವಸ್ತು ಎನ್ನುತ್ತಾರೆ ನಿರ್ದೇಶಕರು. ಈ ಚಿತ್ರದಲ್ಲಿ ಯೋಗರಾಜ್ ಭಟ್ ಅವರು ಒಂದು ಪಾತ್ರವನ್ನು ಪೋಷಿಸುತ್ತಿದ್ದಾರೆ. ಈ ಮೂಲಕ ಅವರು ಬೆಳ್ಳಿಪರದೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಪಾತ್ರದ ಜೊತೆಗೆ ಒಂದು ಹಾಡನ್ನೂ ಬರೆದಿದ್ದಾರೆ. ಅದೇನೆಂದರೆ "ಖಾಲಿ ಪರ್ಸಲಿ ಜಿರಳೆ ಸೇರ್ಕೋಬಾರ್ದು, ಕಾಸು ಇದ್ದರೆ ಉಸಿರು ಎಳ್ಕೊಬೋದು..ನೂರ್ ರೂಪಾಯ್ ನೋಟು ತೋರಿಸು ಫಸ್ಟು, ಸೂರ್ಯ ಹುಟ್ಟೋದು ನೆಕ್ಸ್ಟು.. ದುಡ್ಡು ಮಾಡು ಗುರುವೇ ನೀ ಯಾಕೆ ಸುಮ್ಮನಿರುವೆ, ಎಲ್ರೂ ಕಳ್ಳರಿಲ್ಲಿ ನೀ ಯಾತಕಾಗಿ ಅಳುವೇ..? ಕಾಸಿಲ್ಲದಿದ್ದರೆ ಪಾಸುಬುಕ್ಕನು ಬೈಯ್ಯೋಕಾಯ್ತದ...?"
ದ್ಯಾವ್ರೇ ಚಿತ್ರಕ್ಕೆ ವೀರ್ ಸಮರ್ಥ್ ಅವರ ಸಂಗೀತ, ಮುರಳಿ ಅವರ ನೃತ್ಯ ನಿರ್ದೇಶನವಿದೆ. ಪಾತ್ರವರ್ಗದಲ್ಲಿ ನೀನಾಸಂ ಸತೀಶ್, ಸೋನು ಗೌಡ, ಸೋನಿಯಾ ಗೌಡ, ಶ್ರುತಿ ಹರಿಹರನ್, ಗಂಧರ್ವ ಚೇತನ್, ರಾಜೇಶ್ ನಟರಾಜನ್ ಮುಂತಾದವರಿದ್ದಾರೆ. (ಒನ್ಇಂಡಿಯಾ ಕನ್ನಡ)