Don't Miss!
- News
ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಗುಜರಾತ್ನಲ್ಲಿ ಜೂನಿಯರ್ ಕ್ಲರ್ಕ್ ನೇಮಕಾತಿ ಪರೀಕ್ಷೆ ರದ್ದು, ಓರ್ವನ ಬಂಧನ
- Sports
ಫಿಟ್ನೆಸ್ ಪರೀಕ್ಷೆಯಲ್ಲಿ ಸಂಜು ಸ್ಯಾಮ್ಸನ್ ತೇರ್ಗಡೆ: ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೆ ಬುಮ್ರಾ ವಾಪಸ್?
- Automobiles
'ಮಹೀಂದ್ರಾ ಸ್ಕಾರ್ಪಿಯೊ ಎನ್' ಈ ರೂಪಾಂತರಗಳಿಗೆ ಬರೋಬ್ಬರಿ 2 ವರ್ಷ ಕಾಯಬೇಕು..
- Lifestyle
Horoscope Today 29 Jan 2023: ಭಾನುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Technology
ಒಪ್ಪೋ ಕಂಪೆನಿಯ ಈ ಸ್ಮಾರ್ಟ್ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಮೈಸೂರು ದಸರಾ 2022: 'ಅಪ್ಪು ನಮನ' ಕಾರ್ಯಕ್ರಮದ ನಿರೂಪಕಿ ಹಾಗೂ ಗಾಯಕರ ಪಟ್ಟಿ
ನಾಡಹಬ್ಬ 'ಮೈಸೂರು ದಸರಾ 2022' ಆರಂಭವಾಗಿದ್ದು ದಸರಾದ ಪ್ರಮುಖ ಆಕರ್ಷಣೆಯಾದ ಯುವ ದಸರಾ ಇಂದಿನಿಂದ ( ಸೆಪ್ಟೆಂಬರ್ 28 ) ಆರಂಭಗೊಳ್ಳುತ್ತಿದೆ. ಯುವ ದಸರಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಇಂದು ಸಂಜೆ 6ರಿಂದ 7 ಗಂಟೆಯವರೆಗೆ ನಡೆಯಲಿದ್ದು, ಕಳೆದ ವರ್ಷ ನಮ್ಮನೆಲ್ಲ ಅಗಲಿದ ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ಮೊದಲಿಗೆ 'ಅಪ್ಪು ನಮನ' ವಿಶೇಷ ಕಾರ್ಯಕ್ರಮ ಆಯೋಜನೆಗೊಂಡಿದೆ. ಯುವ ದಸರಾ ಕಾರ್ಯಕ್ರಮದ ಮೊದಲ ದಿನ ಅಪ್ಪು ನಮನ ಕಾರ್ಯಕ್ರಮ ಮಾತ್ರ ನಡೆಯಲಿದೆ.
ಉದ್ಘಾಟನೆ ಮತ್ತು ಅಪ್ಪು ನಮನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಜರಿರಲಿದ್ದಾರೆ. ಅಪ್ಪು ನಮನ ಕಾರ್ಯಕ್ರಮ 7 ಗಂಟೆಗೆ ಆರಂಭಗೊಳ್ಳಲಿದ್ದು, ಅಪ್ಪು ಅವರ ಅಭಿಮಾನಿ, ನಿರೂಪಕಿ ಅನುಶ್ರೀ ನಿರೂಪಣೆ ಮಾಡಲಿದ್ದಾರೆ.
ಕಾಂತಾರದಲ್ಲಿ
ಅಪ್ಪು:
ಪುನೀತ್
ರಾಜ್ಕುಮಾರ್
ಪೋಸ್ಟರ್ಗಳು
ವೈರಲ್;
ಆಹಾ
ಎಷ್ಟು
ಚೆಂದ
ಇನ್ನು ಈ ಕಾರ್ಯಕ್ರಮದಲ್ಲಿ ಮೂವರು ಪ್ರಮುಖ ಗಾಯಕರು ಹಾಡುಗಳನ್ನು ಹಾಡಿ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಪುನೀತ್ ರಾಜ್ ಕುಮಾರ್ ಅಭಿನಯದ ರಾಜಕುಮಾರ ಚಿತ್ರದ ಎವರ್ ಗ್ರೀನ್ 'ಬೊಂಬೆ ಹೇಳುತೈತೆ' ಹಾಡು ಹಾಡಿರುವ ವಿಜಯ್ ಪ್ರಕಾಶ್, ಪುನೀತ್ ಅಭಿನಯದ ಆರಂಭದ ಚಿತ್ರಗಳಿಗೆ ಸಂಗೀತ ನಿರ್ದೇಶಕನಾಗಿ ಕೆಲಸ ಮಾಡಿರುವ ಗುರುಕಿರಣ್ ಹಾಗೂ ಖ್ಯಾತ ಗಾಯಕ ಕುನಾಲ್ ಗಾಂಜಾವಾಲಾ ವೇದಿಕೆಯೇರಿ ಹಾಡುಗಳನ್ನು ಹಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಅಪಾರವಾದ ಅಪ್ಪು ಅಭಿಮಾನಿಗಳು ಆಗಮಿಸಲಿದ್ದಾರೆ.
ಇಂದು ಆರಂಭವಾಗಲಿರುವ ಯುವಸಂಭ್ರಮ ಕಾರ್ಯಕ್ರಮ ಅಕ್ಟೋಬರ್ 3ರವರೆಗೂ ನಡೆಯಲಿದ್ದು, ನಾಳೆಯಿಂದ ವಿವಿಧ ತಂಡಗಳಿಂದ ನೃತ್ಯ ಕಾರ್ಯಕ್ರಮ ಜರುಗಲಿವೆ. ಕಾರ್ಯಕ್ರಮದ ಮೂರನೇ ದಿನ ( ಸೆಪ್ಟೆಂಬರ್ 30 ) ಸ್ಯಾಂಡಲ್ ವುಡ್ ನೈಟ್ಸ್ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಕನ್ನಡದ ಹಲವು ಸಿನಿ ಕಲಾವಿದರು ವೇದಿಕೆ ಮೇಲೆ ಹೆಜ್ಜೆ ಹಾಕುವ ನಿರೀಕ್ಷೆಯಿದೆ.