Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸಪೇಟೆಯ ಅಪ್ಪು ಪುತ್ಥಳಿ ಮುಂದೆ ಯುವರಾಜ್ಕುಮಾರ್, ಅನುಶ್ರೀ: ಯುವರತ್ನನಿಗೆ ನಮನ!
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಕನ್ನಡಿಗರು ಎಂದೆಂದಿಗೂ ಮರೆಯಲು ಸಾಧ್ಯವೇ ಇಲ್ಲ. ಪುನೀತ್ ರಾಜ್ಕುಮಾರ್ ಕನ್ನಡ ಚಿತ್ರರಂಗಕ್ಕೆ ಮಾಡಿದ ಕಲಾಸೇವೆ ಒಂದೆಡೆಯಾದರೆ, ಅವರ ಸಮಾಜಮುಖಿ ಕೆಲಸಗಳು ಅದೆಷ್ಟೋ ಯುವಕರ ಪ್ರೇರಣೆಗೆ ಕಾರಣವಾಗಿದೆ.
ಪುನೀತ್ ರಾಜ್ಕುಮಾರ್ ಅಗಲಿಕೆ ಬಳಿಕ ಅವರನ್ನು ಯುವರಾಜ್ಕುಮಾರ್ರಲ್ಲಿ ಕಾಣುತ್ತಿದ್ದಾರೆ. ಇತ್ತ ಅಣ್ಣಾವ್ರ ಮೊಮ್ಮಗ ಕೂಡ ಅಪ್ಪು ಅಭಿಮಾನಿಗಳನ್ನು ತನ್ನ ಅಭಿಮಾನಿಗಳು ಅಂತಲೇ ನೋಡುತ್ತಿದ್ದಾರೆ. ಯುವ ರಾಜ್ಕುಮಾರ್ ಹೋದಲ್ಲೆಲ್ಲಾ ಪವರ್ಸ್ಟಾರ್ ಅಭಿಮಾನಿಗಳು ಅವರೊಂದಿಗೆ ಮಾತಾಡಲು ತವಕಿಸುತ್ತಿದ್ದಾರೆ.
ಇತ್ತೀಚೆಗೆ ಯುವರಾಜ್ಕುಮಾರ್ ಹೊಸಪೇಟೆಗೆ ಭೇಟಿ ನೀಡಿದ್ದರು. ಈ ವೇಳೆ ಅಪ್ಪು ಪುತ್ಥಳಿ ಮುಂದೆ ನಿಂತು ಗೌರವ ಸಲ್ಲಿಸಿ ಬಂದಿದ್ದಾರೆ. ಇದೇ ವಿಡಿಯೋ ಹಾಗೂ ಫೋಟೊಗಳು ಸೋಶಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ.
ಅಪ್ಪು ಪುತ್ಥಳಿಗೆ ಹೂವಿನ ಹಾರ
ಅಪ್ಪು ಅಗಲಿದ ದಿನದಿಂದ ಯುವ ರಾಜ್ಕುಮಾರ್ ಎಲ್ಲಾ ಕಾರ್ಯಕ್ಕೂ ಮುಂದೆ ನಿಂತಿದ್ದಾರೆ. ಪವರ್ಸ್ಟಾರ್ ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿದ್ದಾರೆ. ಇತ್ತೀಚೆಗೆ ಯುವರಾಜ್ಕುಮಾರ್ ಹಾಗೂ ಆಪ್ತರು ಹೊಸಪೇಟೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಭೇಟಿ ನೀಡಿದ್ದರು. ಈ ವೇಳೆ ತಡರಾತ್ರಿ ಅಪ್ಪು ಪುತ್ಥಳಿ ಇರುವ ಜಾಗಕ್ಕೆ ಭೇಟಿ ನೀಡಿದ್ದರು. ಇದೇ ವೇಳೆ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಪುತ್ಥಳಿಗೆ ಹೂವಿನ ಹಾರ ಹಾಕಿ ನಮಿಸಿ ಬಂದಿದ್ದಾರೆ.
ಜೂ. ಅಪ್ಪು ಜೊತೆ ಅನುಶ್ರೀ
ಹೊಸಪೇಟೆಯ ಪುನೀತ್ ರಾಜ್ಕುಮಾರ್ ಪುತ್ಥಳಿ ಬಳಿ ಯುವರಾಜ್ಕುಮಾರ್ ಜೊತೆಯಲ್ಲಿ ಕನ್ನಡದ ನಿರೂಪಕಿ ಅನುಶ್ರೀ ಕೂಡ ಕಾಣಿಸಿಕೊಂಡಿದ್ದಾರೆ. ಪುತ್ಥಳಿ ಸಮೀಪ ಯುವ ಹಾಗೂ ಅನುಶ್ರೀ ಆಪ್ತರೊಂದಿಗೆ ಕೆಲ ಕಾಲ ಇದ್ದು, ಗೌರವ ಸಲ್ಲಿಸಿ ಹಿಂತಿರುಗಿದ್ದಾರೆ.
ಅಪ್ಪುಗೆ ಹೊಸಪೇಟೆ ಅಂದ್ರೆ ಇಷ್ಟ!
ಪುನೀತ್ ರಾಜ್ಕುಮಾರ್ಗೆ ಹೊಸಪೇಟೆ ಅಂದರೆ ಬಲು ಪ್ರೀತಿ. ಅವರ ಸಾಕಷ್ಟು ಸಿನಿಮಾಗಳು ಹೊಸಪೇಟೆಯಲ್ಲಿ ಉತ್ತಮ ಪ್ರದರ್ಶನ ಕಂಡಿವೆ. ಅಲ್ಲದೆ ಬಿಡುವು ಸಿಕ್ಕಾಗಲೆಲ್ಲಾ ಪುನೀತ್ ರಾಜ್ಕುಮಾರ್ ಹೊಸಪೇಟೆಗೆ ಭೇಟಿ ನೀಡುತ್ತಿದ್ದರು. ತಮ್ಮದೇ ಸಿನಿಮಾ ಕಾರ್ಯಕ್ರಮವೊಂದರ ವೇಳೆ ಅಪ್ಪು ಹೊಸಪೇಟೆ ಜನರ ಬಗ್ಗೆ ಮನಬಿಚ್ಚಿ ಮಾತಾಡಿದ್ದರು. " ನನಗೆ ಹೊಸಪೇಟೆ ಅಂದ್ರೆ ಇಷ್ಟ. ನನಗೆ ಹೊಸಪೇಟೆ ಜನ ಅಂದರೆ ಇಷ್ಟ. ಯಾರೇ ಬಿಟ್ಟರೂ ಹೊಸ ಪೇಟೆ ಜನ ಅಂತೂ ನಮ್ಮನ್ನು ಬಿಡುವುದಿಲ್ಲ." ಎಂದು ಪುನೀತ್ ರಾಜ್ಕುಮಾರ್ ಹೇಳಿದ್ದರು.
Recommended Video
ಯುವ ಸಿನಿಮಾ ಶೀಘ್ರದಲ್ಲೇ ಆರಂಭ
ಅಪ್ಪು
ಅಗಲಿಕೆ
ಬಳಿಕ
ಅಭಿಮಾನಿಗಳ
ಪಾಲಿಗೆ
ಯುವರಾಜ್ಕುಮಾರ್
ಜೂ.
ಅಪ್ಪು.
ಹೀಗಾಗಿ
ಪುನೀತ್
ಸಿನಿಮಾ
ನಿರ್ದೇಶಿಸಿದ
ಡೈರೆಕ್ಟರ್ಗಳಿಗೆ
ಸಿನಿಮಾ
ಮಾಡುವಂತೆ
ಒತ್ತಾಯ
ಮಾಡಿದ್ದರು.
ಇವರ
ಒತ್ತಡಕ್ಕೆ
ಮಣಿದ
ಸಂತೋಷ್
ಆನಂದ್ರಾಮ್
ಕಥೆಯನ್ನು
ಸಿದ್ಧಪಡಿಸಿದ್ದು,
ಯುವ
ರಾಜ್ಕುಮಾರ್ರನ್ನು
ಸ್ಯಾಂಡಲ್ವುಡ್ಗೆ
ಪರಿಚಯ
ಮಾಡಲಿದ್ದಾರೆ.
ಹೊಂಬಾಳೆ
ಸಂಸ್ಥೆ
ಈ
ಸಿನಿಮಾವನ್ನು
ನಿರ್ಮಾಣ
ಮಾಡುತ್ತಿದೆ.
ಈ
ಕಾರಣಕ್ಕೆ
ಅಭಿಮಾನಿಗಳಲ್ಲಿ
ಕುತೂಹಲ
ಹೆಚ್ಚಾಗಿದೆ.