Don't Miss!
- News ಕರ್ನಾಟಕ ವಿಶ್ವವಿದ್ಯಾಲಯದ ಸುತ್ತ ಚಿರತೆ ಓಡಾಟ: ಜಿಲ್ಲಾಡಳಿತದಿಂದ ಎಚ್ಚರಿಕೆ ಸಂದೇಶ
- Lifestyle ಮೆನ್ಸ್ಟ್ರಲ್ ಕಪ್ ಬಳಸಿ ಈಜಾಡಬಹುದೇ, ಸುರಕ್ಷಿತವೇ? ಲೀಕ್ ಆಗುವುದಿಲ್ಲವೇ?
- Technology ಇಂದು ರಿಯಲ್ಮಿ ನಾರ್ಜೋ 70 ಪ್ರೊ 5G ಫಸ್ಟ್ ಸೇಲ್!..ವಾವ್ ಎನಿಸುವ ಆಫರ್!
- Finance ಉತ್ತಮ ಕ್ರೆಡಿಟ್ ಸ್ಕೋರ್ ನಿರ್ವಹಿಸಲು ಇರುವ ಆರು ಮಾರ್ಗಗಳು
- Automobiles Tata: ಗಟ್ಟಿಮುಟ್ಟಾದ ಟಿಯಾಗೊ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Sports Virat Kohli: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದ ಕೆಲವೇ ಕ್ಷಣದಲ್ಲಿ ವಿರಾಟ್ ಕೊಹ್ಲಿ ವಿಡಿಯೋ ಕಾಲ್ನಲ್ಲಿ ಬ್ಯುಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಸೆಮಣೆ ಏರಿದ ಯುವರಾಜ್ ಕುಮಾರ್ - ಶ್ರೀದೇವಿ
Recommended Video
ಡಾ ರಾಜ್ ಕುಮಾರ್ ಮೊಮ್ಮಗ, ನಟ ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವರಾಜ್ ಕುಮಾರ್ ವಿವಾಹ ಇಂದು ನೆರವೇರಿದೆ. ಯುವರಾಜ್ ಕುಮಾರ್ ತಮ್ಮ ಪ್ರೀತಿಯ ಗೆಳತಿ ಶ್ರೀದೇವಿ ಭೈರಪ್ಪ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇಂದು ಬೆಳಗ್ಗೆ 10 ಗಂಟೆಗೆ ಕಟಕ ಲಗ್ನದಲ್ಲಿ ಮಾಂಗಲ್ಯಧಾರಣೆ ನೆರವೇರಿದೆ. ಒಗ್ಗಲಿಗರ ಸಂಪ್ರದಾಯದಂತೆ ಶಾಸ್ತ್ರಗಳು ನಡೆದಿದೆ. ಅರಮನೆ ಮೈದಾನದಲ್ಲಿ ವಿವಾಹ ಮಹೋತ್ಸವ ಜರುಗಿದೆ. ಗಣ್ಯಾತಿಗಣ್ಯರ ಜೊತೆಗೆ ಅಭಿಮಾನಿಗಳು ಸಹ ಮದುವೆಯಲ್ಲಿ ಭಾಗಿಯಾಗಿದ್ದಾರೆ.
ನಟ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಶ್ರೀಮುರಳಿ ಸೇರಿದಂತೆ ಇಡೀ ಕುಟುಂಬ ಮದುವೆ ಸಂತಸದಲ್ಲಿ ಇದೆ. ಮದುವೆಗೆ ಬಂದ ಅತಿಥಿಗಳಿಗೆ 30 ವಿವಿಧ ಖಾದ್ಯಗಳು ಸಿದ್ಧವಾಗಿವೆ.
ಇಂದೇ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಕಳೆದ ಕೆಲ ದಿನಗಳಿಂದ ಮದುವೆ ಸಂಭ್ರಮ ಜೋರಾಗಿದ್ದು, ಸಂಗೀತ, ಮೆಹಂದಿ ಶಾಸ್ತ್ರಗಳಲ್ಲಿ ಇಡೀ ಕುಟುಂಬ ಭಾಗಿಯಾಗಿತ್ತು.
ಶಿವರಾಜ್ ಕುಮಾರ್ ಮಗಳ ಮದುವೆ ಕೂಡ ಇದೇ ಜಾಗದಲ್ಲಿ ನಡೆದಿದ್ದು, ಈಗ ಯುವರಾಜ್ ಮದುವೆ ಕೂಡ ಅಲ್ಲಿಯೇ ನಡೆಯುತ್ತಿದೆ.
ಅಂದಹಾಗೆ, ಶ್ರೀದೇವಿ ಭೈರಪ್ಪ ಮೂಲತಃ ಮೈಸೂರಿನವರು. ಸಾಂಸ್ಕೃತಿಕ ನಗರದಲ್ಲಿಯೇ ಹುಟ್ಟಿ ಬೆಳೆದು, ಉನ್ನತ ಶಿಕ್ಷಣ ಮುಗಿಸಿದ್ದಾರೆ. ಇನ್ನು ಮದುವೆಯ ಬಳಿಕ ಅಣ್ಣನ ರೀತಿ ಯುವರಾಜ್ ಕುಮಾರ್ ಕೂಡ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ.