Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಸೆಮಣೆ ಏರಿದ ಯುವರಾಜ್ ಕುಮಾರ್ - ಶ್ರೀದೇವಿ
Recommended Video
ಡಾ ರಾಜ್ ಕುಮಾರ್ ಮೊಮ್ಮಗ, ನಟ ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವರಾಜ್ ಕುಮಾರ್ ವಿವಾಹ ಇಂದು ನೆರವೇರಿದೆ. ಯುವರಾಜ್ ಕುಮಾರ್ ತಮ್ಮ ಪ್ರೀತಿಯ ಗೆಳತಿ ಶ್ರೀದೇವಿ ಭೈರಪ್ಪ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇಂದು ಬೆಳಗ್ಗೆ 10 ಗಂಟೆಗೆ ಕಟಕ ಲಗ್ನದಲ್ಲಿ ಮಾಂಗಲ್ಯಧಾರಣೆ ನೆರವೇರಿದೆ. ಒಗ್ಗಲಿಗರ ಸಂಪ್ರದಾಯದಂತೆ ಶಾಸ್ತ್ರಗಳು ನಡೆದಿದೆ. ಅರಮನೆ ಮೈದಾನದಲ್ಲಿ ವಿವಾಹ ಮಹೋತ್ಸವ ಜರುಗಿದೆ. ಗಣ್ಯಾತಿಗಣ್ಯರ ಜೊತೆಗೆ ಅಭಿಮಾನಿಗಳು ಸಹ ಮದುವೆಯಲ್ಲಿ ಭಾಗಿಯಾಗಿದ್ದಾರೆ.
ನಟ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಶ್ರೀಮುರಳಿ ಸೇರಿದಂತೆ ಇಡೀ ಕುಟುಂಬ ಮದುವೆ ಸಂತಸದಲ್ಲಿ ಇದೆ. ಮದುವೆಗೆ ಬಂದ ಅತಿಥಿಗಳಿಗೆ 30 ವಿವಿಧ ಖಾದ್ಯಗಳು ಸಿದ್ಧವಾಗಿವೆ.
ಇಂದೇ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಕಳೆದ ಕೆಲ ದಿನಗಳಿಂದ ಮದುವೆ ಸಂಭ್ರಮ ಜೋರಾಗಿದ್ದು, ಸಂಗೀತ, ಮೆಹಂದಿ ಶಾಸ್ತ್ರಗಳಲ್ಲಿ ಇಡೀ ಕುಟುಂಬ ಭಾಗಿಯಾಗಿತ್ತು.
ಶಿವರಾಜ್ ಕುಮಾರ್ ಮಗಳ ಮದುವೆ ಕೂಡ ಇದೇ ಜಾಗದಲ್ಲಿ ನಡೆದಿದ್ದು, ಈಗ ಯುವರಾಜ್ ಮದುವೆ ಕೂಡ ಅಲ್ಲಿಯೇ ನಡೆಯುತ್ತಿದೆ.
ಅಂದಹಾಗೆ, ಶ್ರೀದೇವಿ ಭೈರಪ್ಪ ಮೂಲತಃ ಮೈಸೂರಿನವರು. ಸಾಂಸ್ಕೃತಿಕ ನಗರದಲ್ಲಿಯೇ ಹುಟ್ಟಿ ಬೆಳೆದು, ಉನ್ನತ ಶಿಕ್ಷಣ ಮುಗಿಸಿದ್ದಾರೆ. ಇನ್ನು ಮದುವೆಯ ಬಳಿಕ ಅಣ್ಣನ ರೀತಿ ಯುವರಾಜ್ ಕುಮಾರ್ ಕೂಡ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ.