Don't Miss!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- News Snake Video: ವಿಮಾನದಲ್ಲಿ ಹಾವು ಬಿಟ್ಟ ವ್ಯಕ್ತಿ: ಬೆಂಗಳೂರಿನಲ್ಲಿ ಬಂಧನ- ಶಿವಪುರಿಯಲ್ಲಿ ಅಪರೂಪದ ಹಾವು ಪತ್ತೆ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಸೆಮಣೆ ಏರಿದ ಯುವರಾಜ್ ಕುಮಾರ್ - ಶ್ರೀದೇವಿ
Recommended Video
ಡಾ ರಾಜ್ ಕುಮಾರ್ ಮೊಮ್ಮಗ, ನಟ ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವರಾಜ್ ಕುಮಾರ್ ವಿವಾಹ ಇಂದು ನೆರವೇರಿದೆ. ಯುವರಾಜ್ ಕುಮಾರ್ ತಮ್ಮ ಪ್ರೀತಿಯ ಗೆಳತಿ ಶ್ರೀದೇವಿ ಭೈರಪ್ಪ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇಂದು ಬೆಳಗ್ಗೆ 10 ಗಂಟೆಗೆ ಕಟಕ ಲಗ್ನದಲ್ಲಿ ಮಾಂಗಲ್ಯಧಾರಣೆ ನೆರವೇರಿದೆ. ಒಗ್ಗಲಿಗರ ಸಂಪ್ರದಾಯದಂತೆ ಶಾಸ್ತ್ರಗಳು ನಡೆದಿದೆ. ಅರಮನೆ ಮೈದಾನದಲ್ಲಿ ವಿವಾಹ ಮಹೋತ್ಸವ ಜರುಗಿದೆ. ಗಣ್ಯಾತಿಗಣ್ಯರ ಜೊತೆಗೆ ಅಭಿಮಾನಿಗಳು ಸಹ ಮದುವೆಯಲ್ಲಿ ಭಾಗಿಯಾಗಿದ್ದಾರೆ.
ನಟ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಶ್ರೀಮುರಳಿ ಸೇರಿದಂತೆ ಇಡೀ ಕುಟುಂಬ ಮದುವೆ ಸಂತಸದಲ್ಲಿ ಇದೆ. ಮದುವೆಗೆ ಬಂದ ಅತಿಥಿಗಳಿಗೆ 30 ವಿವಿಧ ಖಾದ್ಯಗಳು ಸಿದ್ಧವಾಗಿವೆ.
ಇಂದೇ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಕಳೆದ ಕೆಲ ದಿನಗಳಿಂದ ಮದುವೆ ಸಂಭ್ರಮ ಜೋರಾಗಿದ್ದು, ಸಂಗೀತ, ಮೆಹಂದಿ ಶಾಸ್ತ್ರಗಳಲ್ಲಿ ಇಡೀ ಕುಟುಂಬ ಭಾಗಿಯಾಗಿತ್ತು.
ಶಿವರಾಜ್ ಕುಮಾರ್ ಮಗಳ ಮದುವೆ ಕೂಡ ಇದೇ ಜಾಗದಲ್ಲಿ ನಡೆದಿದ್ದು, ಈಗ ಯುವರಾಜ್ ಮದುವೆ ಕೂಡ ಅಲ್ಲಿಯೇ ನಡೆಯುತ್ತಿದೆ.
ಅಂದಹಾಗೆ, ಶ್ರೀದೇವಿ ಭೈರಪ್ಪ ಮೂಲತಃ ಮೈಸೂರಿನವರು. ಸಾಂಸ್ಕೃತಿಕ ನಗರದಲ್ಲಿಯೇ ಹುಟ್ಟಿ ಬೆಳೆದು, ಉನ್ನತ ಶಿಕ್ಷಣ ಮುಗಿಸಿದ್ದಾರೆ. ಇನ್ನು ಮದುವೆಯ ಬಳಿಕ ಅಣ್ಣನ ರೀತಿ ಯುವರಾಜ್ ಕುಮಾರ್ ಕೂಡ ಚಿತ್ರರಂಗಕ್ಕೆ ಎಂಟ್ರಿ ನೀಡಲಿದ್ದಾರೆ.