ಕ್ಷಮೆ ಕೇಳದಿದ್ದರೆ ಪ್ರತಿಭಟನೆ ನಿಶ್ಚಿತ: ಜೀ ಕನ್ನಡಕ್ಕೆ ಪೇಜಾವರ ಮಠದ ಶ್ರೀಗಳ ಎಚ್ಚರಿಕೆ

By ಕಿರಣ್, ಮಂಗಳೂರು ಪ್ರತಿನಿಧಿ

ಮಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಡ್ರಾಮಾ ಜೂನಿಯರ್ಸ್' ಕಾರ್ಯಕ್ರಮದಲ್ಲಿ ಬ್ರಾಹ್ಮಣರ ವೃತ್ತಿಗೆ ಅವಹೇಳನ ಮಾಡಿರುವುದರ ವಿರುದ್ಧ ಬ್ರಾಹ್ಮಣ ಸಮುದಾಯ ಬೇಸರಗೊಂಡಿದೆ. ಉಡುಪಿಯಲ್ಲಿ ಜೀ ಕನ್ನಡ ವಾಹಿನಿಯ 'ಡ್ರಾಮಾ ಜ್ಯೂನಿಯರ್ಸ್' ಕಾರ್ಯಕ್ರಮದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಉಡುಪಿಯ ಪೇಜಾವರ ಮಠದಲ್ಲಿ ಪ್ರತಿಭಟನಾ ಸಭೆ ನಡೆದು, ಯುವ ಬ್ರಾಹ್ಮಣ ಪರಿಷತ್ ನೇತೃತ್ವದಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಮುಂದಿನ ಸಂಚಿಕೆಯಲ್ಲಿ ಜೀ ಕನ್ನಡ ವಾಹಿನಿ ಕ್ಷಮೆ ಕೇಳುವಂತೆ ಒತ್ತಾಯಿಸಲಾಯಿತು.

Zee Kannada Channel should apologize says Vishwaprasanna Tirta Shree Swamiji

ಇದೇ ಸಂದರ್ಭದಲ್ಲಿ ಮಾತನಾಡಿದ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು, ''ಬ್ರಾಹ್ಮಣರ ವೃತ್ತಿಯನ್ನ ಅವಹೇಳನ ಮಾಡಲಾಗಿದೆ. ಇದು ನಮಗೆ ದುಃಖ ಉಂಟು ಮಾಡಿದೆ. ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಬೇಡ ಸಣ್ಣ ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕಾರ್ಯ ಮಾಡದಿರಿ'' ಎಂದರು. ಜೊತೆಗೆ ಜೀ ಕನ್ನಡ ವಾಹಿನಿ ಈ ಕೂಡಲೇ ಕ್ಷಮೆ ಯಾಚಿಸದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಸಿದರು.

More from Filmibeat

English summary
Zee kannada Channel's 'Drama Juniors' have show the Brahmin comminuty in a low level. Zee kannada must apologize says Vishwaprasanna Tirta Shree Swamiji here in Udupi by holding a meeting at Krishna Math on Aug 9th.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X