Don't Miss!
- News "ಅಲ್ಲಾ ಹೋ ಅಕ್ಬರ್" ಕೂಗಬೇಕು ಎಂದು ಮುಸ್ಲಿಂ ಗೂಂಡಾಗಳಿಂದ ಧಮ್ಕಿ ; ನಾವು ಪಾಕಿಸ್ತಾನದಲ್ಲಿ ಇದ್ದೇವಾ - ಆರ್.ಅಶೋಕ್
- Finance ನೆಸ್ಲೆಯ ಸೆರೆಲಾಕ್ ಶಿಶು ಹಾಲಿನಲ್ಲಿ ಸಕ್ಕರೆ ಅಂಶ ಪತ್ತೆ: ತನಿಖಾ ವರದಿಯಲ್ಲಿ ಬಹಿರಂಗ
- Technology ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- Lifestyle ಆಕಾಶದಲ್ಲಿ ಮತ್ತೆ ಕಾಣಿಸಿಕೊಂಡ ವಿಚಿತ್ರ ವಸ್ತು.! ಸ್ಪಷ್ಟನೆ ಬೇಕೆಂದ ನಿವಾಸಿಗಳು..!
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ಷಮೆ ಕೇಳದಿದ್ದರೆ ಪ್ರತಿಭಟನೆ ನಿಶ್ಚಿತ: ಜೀ ಕನ್ನಡಕ್ಕೆ ಪೇಜಾವರ ಮಠದ ಶ್ರೀಗಳ ಎಚ್ಚರಿಕೆ
ಮಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಡ್ರಾಮಾ ಜೂನಿಯರ್ಸ್' ಕಾರ್ಯಕ್ರಮದಲ್ಲಿ ಬ್ರಾಹ್ಮಣರ ವೃತ್ತಿಗೆ ಅವಹೇಳನ ಮಾಡಿರುವುದರ ವಿರುದ್ಧ ಬ್ರಾಹ್ಮಣ ಸಮುದಾಯ ಬೇಸರಗೊಂಡಿದೆ. ಉಡುಪಿಯಲ್ಲಿ ಜೀ ಕನ್ನಡ ವಾಹಿನಿಯ 'ಡ್ರಾಮಾ ಜ್ಯೂನಿಯರ್ಸ್' ಕಾರ್ಯಕ್ರಮದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
'ಜೀ ಕನ್ನಡ'ದಿಂದ ದೊಡ್ಡ ಎಡವಟ್ಟು: ಕೋಪೋದ್ರೇಕದಿಂದ ಗುಟುರು ಹಾಕಿದ ಬ್ರಾಹ್ಮಣರು.!
ಉಡುಪಿಯ ಪೇಜಾವರ ಮಠದಲ್ಲಿ ಪ್ರತಿಭಟನಾ ಸಭೆ ನಡೆದು, ಯುವ ಬ್ರಾಹ್ಮಣ ಪರಿಷತ್ ನೇತೃತ್ವದಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಮುಂದಿನ ಸಂಚಿಕೆಯಲ್ಲಿ ಜೀ ಕನ್ನಡ ವಾಹಿನಿ ಕ್ಷಮೆ ಕೇಳುವಂತೆ ಒತ್ತಾಯಿಸಲಾಯಿತು.
'ಡ್ರಾಮಾ ಜ್ಯೂನಿಯರ್ಸ್' ತೀರ್ಪುಗಾರರಿಗೆ ವೀಕ್ಷಕರೊಬ್ಬರು ಬರೆದಿರುವ ಪತ್ರ ಇದು.!
ಇದೇ ಸಂದರ್ಭದಲ್ಲಿ ಮಾತನಾಡಿದ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು, ''ಬ್ರಾಹ್ಮಣರ ವೃತ್ತಿಯನ್ನ ಅವಹೇಳನ ಮಾಡಲಾಗಿದೆ. ಇದು ನಮಗೆ ದುಃಖ ಉಂಟು ಮಾಡಿದೆ. ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಬೇಡ ಸಣ್ಣ ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕಾರ್ಯ ಮಾಡದಿರಿ'' ಎಂದರು. ಜೊತೆಗೆ ಜೀ ಕನ್ನಡ ವಾಹಿನಿ ಈ ಕೂಡಲೇ ಕ್ಷಮೆ ಯಾಚಿಸದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಸಿದರು.