Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇದೇ ತಿಂಗಳು ಓಟಿಟಿಗೆ ಬರ್ತಿದ್ದಾನೆ 'ಬಡವ ರಾಸ್ಕಲ್'!
'ಡಾಲಿ' ಧನಂಜಯ್ ಮೊದಲ ಬಾರಿಗೆ ನಿರ್ಮಾಣ ಮಾಡಿದ್ದ 'ಬಡವ ರಾಸ್ಕಲ್'. ಬಡವ ರಾಸ್ಕಲ್ ಚಿತ್ರ ಬಿಡುಗಡೆ ಆದಾಗಿನಿಂದಲೂ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಕಲೆಕ್ಷನ್ ವಿಚಾರದಲ್ಲೂ ಸದ್ದು ಮಾಡಿರುವ ಈ ಚಿತ್ರ ಡಿ.24ರಂದು ತೆರೆಕಂಡಿತ್ತು. ಬಡವ ರಾಸ್ಕಲ್ ಚಿತ್ರ ಧನಂಜಯ್ ಕರಿಯರ್ಗೆ ದೊಡ್ಡ ಬ್ರೇಕ್ ನೀಡಿರೋದು ಅಲ್ಲದೇ, ಹೆಸರು ಮತ್ತು ಲಾಭವನ್ನು ಲಾಭವನ್ನೂ ತಂದುಕೊಟ್ಟಿದೆ. ಮಿಡಲ್ ಕ್ಲಾಸ್ ಹುಡುಗನ ಪಾಡು ಹೇಗಿರುತ್ತದೆ ಎಂದು ಸಿನಿಮಾದಲ್ಲಿ ಸೂಪರ್ ಆಗಿ ತೋರಿಸಲಾಗಿದೆ. ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿರುವ ಈ ಸಿನಿಮಾದಲ್ಲಿ ಸಾಕಷ್ಟು ವಿಶೇಷತೆಗಳು ಇದೆ. ಹೀಗಾಗಿ ಸಾಕಷ್ಟು ವೀಕ್ಷಕರಿಗೆ ಈ ಸಿನಿಮಾ ಹಿಡಿಸಿತ್ತು.
ಚಿತ್ರ ಮಂದಿರಗಳಲ್ಲಿ ಭರ್ಜರಿ ಯಶಸ್ಸು ಕಂಡ ಡಾಲಿ ಧನಂಜಯ್ ಅಭಿನಯದ ಬಡವ ರಾಸ್ಕಲ್ ಸಿನಿಮಾ ಜನವರಿ 26ರಂದು ಓಟಿಟಿ ಪ್ಲಾಟ್ಫಾರ್ಮ್ನಲ್ಲಿ ಬಿಡುಗಡೆಯಾಗುತ್ತಿದೆ. ಶಂಕರ್ ಗುರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ಇವರು ಡಾಲಿ ಧನಂಜಯ್ ಸ್ನೇಹಿತ ಮತ್ತು ಈವರೆಗೂ ಸಹಾಯಕ ನಿರ್ದೇಶಕರಾಗಿದ್ದ ಶಂಕರ್ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಗುಜ್ಜಾಲ್ ಪುರಷೋತ್ತಮ ಜೊತೆ ಧನಂಜಯ್ ಡಾಲಿ ಪಿಕ್ಷರ್ಸ್ ಬ್ಯಾನರ್ ಅಡಿಯಲ್ಲಿ ಸಹ ನಿರ್ಮಾಣ ಮಾಡಿದ್ದಾರೆ.
ಶ್ರೀಮಂತ ರಾಜಕಾರಣಿಯ ಮಗಳು ಸಂಗೀತಾ ಮತ್ತು ಮಧ್ಯಮ ವರ್ಗ ಕುಟುಂಬದ ಶಂಕರ್ ನಡುವೆ ಪ್ರೇಮ ಬೆಳೆದು ಹಲವು ತಿರುವು ಪಡೆದು ಇವರಿಬ್ಬರು ಒಂದಾಗಲಿದ್ದಾರೆಯೇ ಎಂಬ ಪ್ರೇಮ ಕತೆ ಹಾಗೂ ಜೀವನದ ಕುರಿತು ಹಲವು ಹೊಂದಿರುವ ಈ ಚಿತ್ರವೂ ಈಗಾಗಲೇ ಯಶಸ್ವಿ ಪ್ರದರ್ಶನ ಕಂಡು ಜನರಿಂದ ಮೆಚ್ಚುಗೆ ಪಡೆದಿದೆ. ಇದೀಗ ಪ್ರತಿಯೊಬ್ಬರ ಮನೆಬಾಗಿಲಿಗೆ ಈ ಸಿನಿಮಾ ಬರುತ್ತಿದ್ದು, ಇದೇ ಗಣರಾಜ್ಯೋತ್ಸವದ ದಿನದಂದು ಚಿತ್ರವನ್ನು ಓಟಿಟಿ ಪ್ಲಾಟ್ಫಾರ್ಮ್ನಲ್ಲಿ ರಿಲೀಸ್ ಮಾಡಲಾಗುವುದು.
ಬಡವ ರಾಸ್ಕಲ್ ಚಿತ್ರವು ರೊಮ್ಯಾಂಟಿಕ್ ಡ್ರಾಮ ಜಾನರ್ನಲ್ಲಿ ಮೂಡಿ ಬಂದಿದ್ದು, ದಲ್ಲಿ ಧನಂಜಯ್, ಅಮೃತ ಅಯ್ಯಂಗಾರ್, ರಂಗಾಯಣ ರಘು ಹಾಗೂ ತಾರಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸ್ವರ್ಶ ರೇಖಾ, ನಾಗಭೂಷಣ್, ಪೂರ್ಣ ಚಂದ್ರ ಮತ್ತು ಮಾಸ್ತಿ ಮಂಜು ಕೂಡ ಬಣ್ಣಹಚ್ಚಿದ್ದಾರೆ.