Don't Miss!
- News
KCET2022ಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ
- Sports
IPL 2022: ಮುಕ್ತಾಯವಾದ ನಂತರ ತಂಡಗಳು ಮತ್ತು ಆಟಗಾರರಿಗೆ ಸಿಗಲಿರುವ ಪ್ರಶಸ್ತಿ ಮತ್ತು ಹಣವೆಷ್ಟು?
- Finance
Masked ಆಧಾರ್ ಕಾರ್ಡ್ ಎಂದರೇನು? Download ಮಾಡುವುದು ಹೇಗೆ?
- Automobiles
ಭಾರತದಲ್ಲಿ ಸ್ಥಗಿತಗೊಂಡ ಜನಪ್ರಿಯ ಮಾರುತಿ ಸುಜುಕಿ ಎಸ್-ಕ್ರಾಸ್ ಕಾರು
- Technology
ಪ್ರಸ್ತುತ ನೀವು ಖರೀದಿಸಬಹುದಾದ ಮಧ್ಯಮ ಶ್ರೇಣಿಯ ಅತ್ಯುತ್ತಮ ಸ್ಮಾರ್ಟ್ಫೋನ್ಗಳು!
- Lifestyle
ಮೇ 29 ರಿಂದ ಜೂನ್ 4ರ ವಾರ ಭವಿಷ್ಯ: ಮಿಥುನ, ಸಿಂಹ, ಕುಂಭ ರಾಶಿಯವರು ಆರೋಗ್ಯದ ಬಗ್ಗೆ ಜಾಗರೂಕರಾಗಿರಿ
- Education
BCWD Dolu And Nadaswara Music Training : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಒಟಿಟಿಯಲ್ಲೂ ಅಬ್ಬರ ಮುಂದುವರೆಸಿದ ಗರುಡ ಗಮನ ವೃಷಭ ವಾಹನ
ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಿರುವ 'ಗರುಡ ಗಮನ ವೃಷಭ ವಾಹನ' ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿತ್ತು. ಇದೀಗ ಕೆಲವು ದಿನಗಳ ಹಿಂದೆ ಒಟಿಟಿಯಲ್ಲಿ ಬಿಡುಗಡೆ ಆಗಿದ್ದು ಅಲ್ಲಿಯೂ ಅಬ್ಬರಿಸುತ್ತಿದೆ.
ಜೀ5 ಕನ್ನಡದಲ್ಲಿ ಜನವರಿ 13 ರಂದು ಈ ಸಿನಿಮಾ ಬಿಡುಗಡೆ ಆಗಿತ್ತು. ಬಿಡುಗಡೆ ಆಗಿ ಮೂರು ದಿನ ಪೂರ್ಣ ಕಳೆಯುವ ಮುನ್ನವೇ 8 ಕೋಟಿಗೂ ಹೆಚ್ಚು ನಿಮಿಷಗಳಷ್ಟು ಸಿನಿಮಾ ಸ್ಟ್ರೀಮಿಂಗ್ ಆಗಿದೆ. ಇದು ಸಾಮಾನ್ಯದ ದಾಖಲೆಯಲ್ಲ.
ಚಿತ್ರಮಂದಿರಗಳಲ್ಲಿ ಕಲೆಕ್ಷನ್ ಆಧಾರದಲ್ಲಿ ಹಿಟ್-ಫ್ಲಾಪ್ ಲೆಕ್ಕ ಹಾಕಿದಂತೆ ಒಟಿಟಿಗಳಲ್ಲಿ ಸಿನಿಮಾ ಎಷ್ಟು ಬಾರಿ ನೋಡಲ್ಪಟ್ಟಿತೆಂದು ಅಥವಾ ಎಷ್ಟು ನಿಮಿಷಗಳ ಕಾಲ ಅಥವಾ ಗಂಟೆಗಳ ಕಾಲ ಸ್ಟ್ರೀಮ್ ಆಯಿತೆಂದು ಲೆಕ್ಕ ಹಾಕಲಾಗುತ್ತದೆ.
ಜೀ5 ಒಟಿಟಿಯಲ್ಲಿ ಬಿಡುಗಡೆ ಆಗಿರುವ 'ಗರುಡ ಗಮನ ವೃಷಭ ವಾಹನ' ಸಿನಿಮಾವು ಈವರೆಗೆ 8 ಕೋಟಿ ನಿಮಿಷ ಅಂದರೆ 13.33 ಲಕ್ಷ ಗಂಟೆಗೂ ಹೆಚ್ಚು ಕಾಲ ಸ್ಟ್ರೀಮ್ ಆಗಿದೆ. ದೇಶ ಮಾತ್ರವೇ ಅಲ್ಲದೆ ವಿದೇಶಗಳಲ್ಲಿಯೂ ಸಿನಿಮಾವನ್ನು ಜನ ಮುಗಿಬಿದ್ದು ನೋಡಿದ್ದಾರೆ, ನೋಡುತ್ತಿದ್ದಾರೆ.
ಜೀ5 ಒಟಿಟಿಯಲ್ಲಿಯೇ ಬಿಡುಗಡೆ ಆಗಿದ್ದ ಮತ್ತೊಂದು ಕನ್ನಡದ ಸಿನಿಮಾ 'ಭಜರಂಗಿ 2' ಸಹ ಬಹಳ ಚೆನ್ನಾಗಿ ಸ್ಟ್ರೀಮ್ ಆಗಿತ್ತು. 16 ದಿನಗಳಲ್ಲಿ 10 ಕೋಟಿ ನಿಮಿಷ ಸ್ಟ್ರೀಮ್ ಆಗಿತ್ತು. ಆದರೆ 'ಗರುಡ ಗಮನ ವೃಷಭ ವಾಹನ' ಸಿನಿಮಾ ಕೇವಲ ಮೂರು ದಿನಗಳಲ್ಲಿ 8 ಕೋಟಿ ನಿಮಿಷ ಸ್ಟ್ರೀಮ್ ಆಗಿದೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ.
ಒಟಿಟಿಯಲ್ಲಿ 'ಗರುಡ ಗಮನ ವೃಷಭ ವಾಹನ' ಸಿನಿಮಾ ನೋಡಿದ ತೆಲುಗು ಹಾಗೂ ಬಾಲಿವುಡ್ ಸಿನಿಮಾಗಳನ್ನು ನಿರ್ದೇಶಿಸಿರುವ ದೇವಕಟ್ಟ ಸಿನಿಮಾದ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದು, "2021ರಲ್ಲಿ ತೆರೆಕಂಡ ಭಾರತೀಯ ಸಿನಿಮಾಗಳ ಪೈಕಿ ಅತ್ಯುತ್ತಮ ಚಲನಚಿತ್ರ 'ಗರುಡ ಗಮನ ವೃಷಭ ವಾಹನ'. ನನಗೆ ಪವರ್ ಇದ್ದಿದ್ದರೆ ಆಸ್ಕರ್ಗೆ ಈ ಸಿನಿಮಾವನ್ನು ಆಯ್ಕೆ ಮಾಡುತ್ತಿದ್ದೆ. 'ಗರುಡ ಗಮನ ವೃಷಭ ವಾಹನ' ಚಿತ್ರವನ್ನು ನನ್ನ ಗೆಳಯರೊಂದಿಗೆ ನೋಡಿದ್ದೆ. ಸಿನಿಮಾ ಚಿತ್ರೀಕರಿಸಿದ ರೀತಿ ಅದ್ಭುತವಾಗಿದೆ. ಸಿನಿಮಾ ಸಿಕ್ಕಾಪಟ್ಟೆ ಇಷ್ಟ ಆಗಿದ್ದರಿಂದ ಥಿಯೇಟರ್ಗೆ ಮತ್ತೆ ಹೋಗಿ ನೋಡಿದಾಗ ಇರಲಿಲ್ಲ. ಈ ಕಾರಣಕ್ಕೆ ಬೇಸರ ಆಗಿತ್ತು" ಎಂದಿದ್ದಾರೆ.
'ಗರುಡ ಗಮನ ವೃಷಭ ವಾಹನ' ಸಿನಿಮಾವನ್ನು ರಾಜ್ ಬಿ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ರಿಷಬ್ ಶೆಟ್ಟಿ ಹರಿಯಾಗಿಯೂ, ರಾಜ್ ಬಿ ಶೆಟ್ಟಿ ಶಿವನಾಗಿಯೂ ನಟಿಸಿದ್ದಾರೆ. ಮಂಗಳಾದೇವಿಯಲ್ಲಿ ನಡೆವ ಒಂದು ಗ್ಯಾಂಗ್ಸ್ಟರ್ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾವನ್ನು ರಕ್ಷಿತ್ ಶೆಟ್ಟಿ ಪ್ರೆಸೆಂಟ್ ಮಾಡಿದ್ದಾರೆ.