ವಿಜಯ್ ಪ್ರಸಾದ್ 'ಪೆಟ್ರೋಮ್ಯಾಕ್ಸ್' ಒಟಿಟಿಗೆ ಲಗ್ಗೆ!
ಪೆಟ್ರೋಮ್ಯಾಕ್ಸ್ ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆಕಂಡ ಬಳಿಕ ಒಟಿಟಿಗೆ ಲಗ್ಗೆ ಇಡುತ್ತಿದೆ. ಈ ಸಿನಿಮಾ ನಿರ್ದೇಶಕ ವಿಜಯ್ ಪ್ರಸಾದ್ ಅವರ ಶೈಲಿಯ ಸಿನಿಮಾ. ಈ ಚಿತ್ರದಲ್ಲಿ ನಟ ನೀನಾಸಂ ಸತೀಶ್ ಮತ್ತು ಹರಿಪ್ರಿಯಾ ನಾಯಕ, ನಾಯಕಿಯಾಗಿ ನಟಿಸಿದ್ದಾರೆ.
ಪೆಟ್ರೋಮ್ಯಾಕ್ಸ್ ಚಿತ್ರವು ನಾಲ್ಕು ಮಂದಿ ಅನಾಥರ ಜೀವನದ ಮೇಲೆ ಕೇಂದ್ರೀಕೃತವಾದ ಸಿನಿಮಾ. ಊದಬತ್ತಿ ಶಿವಪ್ಪ, ಅಗರಬತ್ತಿ ಮಾದಪ್ಪ, ಕೃಷ್ಣಮೂರ್ತಿ ಮತ್ತು ಕವಿತಾ ಕೃಷ್ಣಮೂರ್ತಿ ಪಾತ್ರಗಳಿದ್ದು, ಇವರು ತಮ್ಮ ಪೋಷಕರಿಂದ ಬೇಷರತ್ತಾಗಿ ಪ್ರೀತಿಯನ್ನು ಪಡೆಯುವುದನ್ನು ಅನ್ವೇಷಣೆ ಮಾಡುತ್ತಿರುತ್ತಾರೆ.
ಬಾಲ್ಯದಿಂದಲೂ ಅನಾಥಾಶ್ರಮದಲ್ಲಿ ಬೆಳೆದ ಈ ನಾಲ್ವರು ಪೋಷಕರಿಂದ ಕಾಳಜಿ ಮತ್ತು ಸಹಾನುಭೂತಿಯನ್ನು ಪಡೆಯಲು ಹಾತೊರೆಯುತ್ತಾರೆ. ವಿಧಿಯ ಪ್ರಕಾರ ಅವರು ತಮ್ಮ ಮನೆಯನ್ನು ಹುಡುಕಲು ಆರಂಭಿಸಿದಾಗ, ಅಡ್ಡದಾರಿ ಹಿಡಿಯುತ್ತಾರೆ. ನಂತರ ಎಲ್ಲರೂ ಸೇರಿ ಮನೆಗಳನ್ನು ಹುಡುಕಲು ಆರಂಭಿಸುತ್ತಾರೆ, ಏಕಾಂಗಿ ಜೀವನದ ಬಿಂಬಿಸುವ ಈ ಚಿತ್ರವು ಒಡನಾಟ, ಮಾನವ ಸಂಬಂಧಗಳು ಮತ್ತು ಒಗ್ಗಟ್ಟಿನ ಸಾರವನ್ನು ವಿವರಿಸುತ್ತದೆ.

ಈ ಬಗ್ಗೆ ನಟ ನೀನಾಸಂ ಸತೀಶ್ ಮಾತನಾಡಿ, "ನನಗೆ ಪೆಟ್ರೋಮ್ಯಾಕ್ಸ್ ಒಂದು ಅನನ್ಯವಾದ ಚಿತ್ರವಾಗಿದೆ. ಅತ್ಯಂತ ಸರಳವಾದ ರೀತಿಯಲ್ಲಿ ಕತೆಯನ್ನು ಹೆಣೆದಿರುವುದು ಸಂತಸ ತಂದಿದೆ. ದೈನಂದಿನ ಜೀವನದ ಸಂಕೀರ್ಣತೆಗಳ ಜೊತೆಗೆ ಭಾವನಾತ್ಮಕತೆಯನ್ನು ಮತ್ತು ವಿನೋದವನ್ನು ಈ ಚಿತ್ರದಲ್ಲಿ ಕಾಣಬಹುದಾಗಿದೆ. ಇದು ನಟನೆಯಲ್ಲಿ ಮಾಸ್ಟರ್ ಕ್ಲಾಸ್ ಆಗಿದ್ದು, ಮಾನವನ ಭಾವನೆಗಳನ್ನು ಪ್ರಾಮಾಣಿಕವಾಗಿ ವ್ಯಕ್ತಪಡಿಸುವುದು ಸ್ವತಃ ಒಂದು ಸವಾಲಾಗಿದೆ. ಈ ಚಿತ್ರವು ಪ್ರತಿಯೊಂದು ದೃಶ್ಯದಲ್ಲಿಯೂ ನನ್ನ ಮಿತಿಗಳನ್ನು ಮತ್ತಷ್ಟು ಹೆಚ್ಚುವಂತೆ ಮಾಡಿದೆ. ಒಟಿಟಿ ಚೊಚ್ಚಲ ಪ್ರದರ್ಶನವನ್ನು ವೀಕ್ಷಿಸಲು ನಾನು ಉತ್ಸುಕನಾಗಿದ್ದೇನೆ" ಎಂದಿದ್ದಾರೆ.
ಚಿತ್ರ ನಿರ್ದೇಶಕ ವಿಜಯ ಪ್ರಸಾದ್ ಅವರು ಮಾತನಾಡಿ ಕೂಡ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗುತ್ತಿರುವ ಬಗ್ಗೆ ಮಾತನಾಡಿದ್ದಾರೆ. "ವಾಸ್ತವ ಜೀವನದಲ್ಲಿ ನಡೆಯುತ್ತಿರುವ ಸಾಮಾಜಿಕ ಸಮಸ್ಯೆಗಳ ಸುತ್ತ ಈ ಚಿತ್ರವನ್ನು ಮಾಡಲಾಗಿದೆ. ಇದು ಆಧನಿಕ ಮತ್ತು ಸಾಂಪ್ರದಾಯಿಕ ಜೀವನವು ತಡೆರಹಿತ ರೀತಿಯಲ್ಲಿ ಸಹಬಾಳ್ವೆ ನಡೆಸುವ ಸಾಧ್ಯತೆಯನ್ನು ತೋರಿಸುತ್ತದೆ".

"ಸ್ಕ್ರೀನ್ ಮೇಲೆ ನನ್ನ ದೃಷ್ಟಿಯನ್ನು ಜೀವಂತಗೊಳಿಸಲು ತುಂಬಾ ಕಷ್ಟಪಟ್ಟು ಪ್ರೀತಿಯಿಂದ ಕೆಲಸ ಮಾಡಿದ ನಮ್ಮ ನೆಚ್ಚಿನ ಕಲಾವಿದರು ಮತ್ತು ಸಿಬ್ಬಂದಿಗೆ ನಾನು ಕೃತಜ್ಞನಾಗಿದ್ದೇನೆ. ಒಟಿಟಿ ಬಿಡುಗಡೆಯ ಮೂಲಕ ವಿಭಿನ್ನವಾದ ವಿಮರ್ಶೆಗಳು ಮತ್ತು ಗ್ರಹಿಕೆಗಳನ್ನು ಅಳೆಯಲು ಇದು ನಮಗೆ ಸಹಾಯ ಮಾಡುತ್ತದೆ" ಎಂದು ಹೇಳಿದ್ದಾರೆ.


Click it and Unblock the Notifications











