Don't Miss!
- Automobiles Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಲಿಯಾ ಭಟ್ ನಟನೆಯ ಬಹುನಿರೀಕ್ಷೆಯ 'ಗಂಗೂಬಾಯಿ ಕಾಠಿಯಾವಾಡಿ' ಒಟಿಟಿಯಲ್ಲಿ ಬಿಡುಗಡೆ?
ಬಾಲಿವುಡ್ ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಮತ್ತು ನಟಿ ಆಲಿಯಾ ಭಟ್ ನಟನೆಯ ಬಹುನಿರೀಕ್ಷೆಯ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾ ಬಿಡುಗಡೆಗೆ ಸಿದ್ಧಾವಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸಿನಿಮಾ ಕಳೆದ ವರ್ಷವೇ ತೆರೆಗೆ ಬರಬೇಕಿತ್ತು. ಆದರೆ ಕೊರೊನಾ ಹಾವಳಿಯಿಂದ ಮುಂದಕ್ಕೆ ಹೋಗಿತ್ತು.
ಈ ವರ್ಷ ಜುಲೈ 30ಕ್ಕೆ ಸಿನಿಮಾ ಬಿಡುಗಡೆಯಾಗುವುದಾಗಿ ಚಿತ್ರತಂಡ ಘೋಷಣೆ ಮಾಡಿತ್ತು. ಆದರೀಗ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಕಾರಣ ಈ ವರ್ಷವೂ ಅಂದುಕೊಂಡ ದಿನಾಂಕಕ್ಕೆ ಸಿನಿಮಾ ಬಿಡುಗಡೆಯಾಗುವುದು ಅನುಮಾನ ಎನ್ನುವ ಮಾತುಗಳು ಕೇಳಿಬರುತ್ತಿದೆ.
'ಗಂಗೂಬಾಯಿ ಕಾಥಿಯಾವಾಡಿ' ಸಿನಿಮಾ ವಿವಾದ: ಅಲಿಯಾ ಮತ್ತು ಸಂಜಯ್ ಲೀಲಾ ಬನ್ಸಾಲಿಗೆ ಸಮನ್ಸ್
ಆದರೆ ಗಂಗೂಬಾಯಿ ಸಿನಿಮಾವನ್ನು ಅಂದುಕೊಂಡ ದಿನಕ್ಕೆ ಬಿಡುಗಡೆ ಮಾಡಲು ಸಿನಿಮಾತಂಡ ಪ್ರಯತ್ನಿಸುತ್ತಿದೆ. ಚಿತ್ರಮಂದಿರದ ಬದಲಿಗೆ ಒಟಿಟಿಯಲ್ಲಿ ಚಿತ್ರ ರಿಲೀಸ್ ಮಾಡಲು ಸಂಜಯ್ ಲೀಲಾ ಬನ್ಸಾಲಿ ನಿರ್ಧಾರಿಸಿದ್ದಾರಂತೆ. ಜುಲೈ 30ಕ್ಕೆ ಸಿನಿಮಾ ಬಿಡುಗಡೆ ದಿನಾಂಕ ಅನೌನ್ಸ್ ಆಗಿತ್ತು, ಇದೀಗ ಅದೇ ದಿನ ಆನ್ಲೈನ್ನಲ್ಲಿ ಗಂಗೂಬಾಯಿ ಸಿನಿಮಾ ಬಿಡುಗಡೆ ಮಾಡಲು ಸಿನಿಮಾತಂಡ ನಿರ್ಧರಿಸಿದೆ ಎನ್ನುವ ಸುದ್ದಿ ಬಾಲಿವುಡ್ ನಲ್ಲಿ ವೈರಲ್ ಆಗಿದೆ.
ಸಂಜಯ್ ಲೀಲಾ ಬನ್ಸಾಲಿ ಸಿನಿಮಾಗಳನ್ನು ದೊಡ್ಡ ಪರದೆ ಮೇಲೆ ನೋಡಿ ಆನಂದಿಸುವ ಮಜಾನೇ ಬೇರೆ. ಗಂಗೂಬಾಯಿ ಕಾಠಿಯಾವಾಡಿ ಚಿತ್ರವನ್ನು ಚಿತ್ರಮಂದಿರಗಳಲ್ಲಿ ಕಣ್ತುಂಬಿಕೊಳ್ಳಲು ಕಾತುರರಾಗಿದ್ದ ಅಭಿಮಾನಿಗಳಿಗೆ ಸಂಜಯ್ ಲೀಲಾ ಬನ್ಸಾಲಿ ಅವರ ಈ ನಿರ್ಧಾರ ಭಾರಿ ನಿರಾಸೆ ಮೂಡಿಸಿದೆ.
ಆದರೆ ಈ ಬಗ್ಗೆ ಸಿನಿಮಾತಂಡ ಅಧಿಕೃತವಾಗಿ ಇನ್ನು ಘೋಷಣೆ ಮಾಡಿಲ್ಲ. ಶೀಘ್ರದಲ್ಲೇ ಈ ಬಗ್ಗೆ ಬಹಿರಂಗ ಪಡಿಸುವ ಸಾಧ್ಯತೆ ಇದೆ. ಸದ್ಯ ಹೆಚ್ಚಾಗುತ್ತಿರುವ ಕೊರೊನಾ ಪರಿಸ್ಥಿತಿ ನೋಡಿದ್ರೆ ಸಿನಿಮಾ ನಿರ್ಮಾಪಕರಿಗೆ ಒಟಿಟಿ ಬಿಟ್ಟರೆ ಬೇರೆ ಮಾರ್ಗವಿಲ್ಲ. ಸರಿಯಾದ ಸಮಯಕ್ಕೆ ಪ್ರೇಕ್ಷಕರಿಗೆ ಸಿನಿಮಾ ತಲುಪಿಸಲು ಒಟಿಟಿ ಮೊರೆಹೋಗುತ್ತಿದ್ದಾರೆ. ಈ ಬಗ್ಗೆ ಸಂಜಯ್ ಲೀಲಾ ಬನ್ಸಾಲಿ ಗಂಭೀರವಾಗಿ ಚಿಂತಿಸಿದ್ದು, ಸದ್ಯದಲ್ಲೇ ಬಹಿರಂಗ ಪಡಿಸಲಿದ್ದಾರೆ.
ಗಂಗೂಬಾಯಿ ಕಾಠಿಯಾವಾಡಿ ಸಿನಿಮಾ ಬರಹಗಾರ ಹುಸೇನ್ ಜೈದಿ ಅವರ ಮಾಫಿಯಾ ಕ್ವೀನ್ ಆಫ್ ಮುಂಬೈನ ರೂಪಾಂತರವಾಗಿದೆ. ನೈಜ ಘಟನೆ ಆಧಾರಿತ ಸಿನಿಮಾವನ್ನು ನೋಡಲು ಪ್ರೇಕ್ಷಕರು ಸಹ ಎರಡು ವರ್ಷಗಳಿಂದ ಕಾಯುತ್ತಿದ್ದಾರೆ. ಸದ್ಯ ನಿರ್ದೇಶಕ ಬನ್ಸಾಲಿ ನಿರ್ಧಾರದ ಮೇಲೆ ಅಭಿಮಾನಿಗಳು ಗಮನ ಹರಿಸಿದ್ದಾರೆ.