Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬ್ಯೂಟಿಫುಲ್ ಮನಸ್ಸು'ಗಳಿಗೆ 'ದರ್ಶನ್' ಅತಿಥಿ
ಬ್ಯೂಟಿಫುಲ್ ಮನಸ್ಸು'ಗಳ ರೊಮ್ಯಾಂಟಿಕ್ ಹಾಡುಗಳನ್ನ ಸ್ಯಾಂಡಲ್ ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ 'ದರ್ಶನ್' ಬಿಡುಗಡೆ ಮಾಡಲಿದ್ದಾರೆ.
'ಲೂಸಿಯಾ' ಚಿತ್ರದ ಮೂಲಕ ಮೋಡಿ ಮಾಡಿದ್ದ ಸೂಪರ್ ಹಿಟ್ ಜೋಡಿ, 'ಬ್ಯೂಟಿಫುಲ್ ಮನಸ್ಸುಗಳು' ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರೆದುರು ಬರ್ತಿದ್ದಾರೆ. ಇತ್ತೀಚಿಗೆ 'ಬ್ಯೂಟಿಫುಲ್ ಮನಸ್ಸುಗಳು' ಚಿತ್ರದ ಪ್ರೋಮೋ ಬಿಡುಗಡೆ ಮಾಡಿ ನಿರೀಕ್ಷೆ ಹುಟ್ಟಿಹಾಕಿದ್ದ ಚಿತ್ರತಂಡ, ಈಗ ಆಡಿಯೋ ರಿಲೀಸ್ ಮಾಡುವ ತಯಾರಿಯಲ್ಲಿದೆ.
ವಿಶೇಷ ಅಂದ್ರೆ, 'ಬ್ಯೂಟಿಫುಲ್ ಮನಸ್ಸುಗಳು' ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅತಿಥಿಯಾಗಿ ಆಗಮಿಸಲಿದ್ದಾರಂತೆ.
ಹೌದು, ಇದೆ ತಿಂಗಳು 20 ರಂದು 'ಬ್ಯೂಟಿಫುಲ್ ಮನಸ್ಸುಗಳು' ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ನೆರವೇರಲಿದ್ದು, ಚಿತ್ರದ ಹಾಡುಗಳನ್ನ ದರ್ಶನ್ ಬಿಡುಗಡೆ ಮಾಡಲಿದ್ದಾರಂತೆ. ಈ ವಿಷಯವನ್ನ ಸ್ವತಃ ಚಿತ್ರದ ನಟ ನೀನಾಸಂ ಸತೀಶ್ ತಮ್ಮ ಫೇಸ್ ಬುಕ್ ಮೂಲಕ ಸ್ವಷ್ಟಪಡಿಸಿದ್ದಾರೆ.['ಸವಾರಿ' ನಿರ್ದೇಶಕರ ಜೊತೆ 'ಕ್ವಾಟ್ಲೆ' ಸತೀಶ್ 'ಚಂಬಲ್'ಗೆ ಪಯಣ]
'ಬ್ಯೂಟಿಫುಲ್ ಮನಸುಗಳು' ಚಿತ್ರದ ಆಡಿಯೋ ಬಿಡುಗಡೆಗಾಗಿ ದರ್ಶನ್ ಸರ್ ನ ಭೇಟಿ ಮಾಡಿ ಅವರನ್ನ ಕೇಳಿದಾಗ, "ನಿಮಗಿಷ್ಟ ಬಂದ ದಿನ ಮಾಡಿ ನಾನು ಬರುತ್ತೇನೆ" ಎಂದು ಬಹಳ ಪ್ರೀತಿಯಿಂದ ಹೇಳಿದ್ದಾರೆ. ಇದೇ 20 ರಂದು ದರ್ಶನ್ ಸರ್, ನಮ್ಮ ಆಡಿಯೋ ಬಿಡುಗಡೆ ಮಾಡುತ್ತಿರುವುದು ನನ್ನ ಜೀವನದ ಅಪೂರ್ವ ಕ್ಷಣಗಳಲ್ಲೊಂದು' ಎಂದು ನೀನಾಸಂ ಸತೀಶ್ ಸಂತಸ ವ್ಯಕ್ತ ಪಡಿಸಿದ್ದಾರೆ.[ಯಾರು ನಿಜವಾದ 'ಮಂಡ್ಯ'ದ ಮಾಸ್ಟರ್ ಪೀಸ್?]
ಅಂದಾಗೆ, 'ಬ್ಯೂಟಿಫುಲ್ ಮನಸ್ಸುಗಳು' ಪಕ್ಕಾ ಲವ್ ಸ್ಟೋರಿಯಾಗಿದ್ದು, ಲೂಸಿಯಾ ಖ್ಯಾತಿಯ ನೀನಾಸಂ ಸತೀಶ್ ಹಾಗೂ ಶೃತಿ ಹರಿಹರನ್ ಜೋಡಿ, ಮತ್ತೆ ತೆರೆಮೇಲೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ 'ಒಲವೇ ಮಂದಾರ', 'ಟೋನಿ', 'ಬುಲೆಟ್ ಬಸ್ಯ' ಅಂತಹ ಚಿತ್ರಗಳಿಗೆ ನಿರ್ದೇಶನ ಮಾಡಿದ್ದ ಜಯತೀರ್ಥ ಈ 'ಬ್ಯೂಟಿಫುಲ್ ಮನಸ್ಸುಗಳಿಗೆ' ಆಕ್ಟನ್ ಕಟ್ ಹೇಳಿದ್ದಾರೆ.
ಈ ಚಿತ್ರಕ್ಕೆ 'ನೀರ್ ದೋಸೆ' ಖ್ಯಾತಿಯ ನಿರ್ಮಾಪಕ ಪ್ರಸನ್ನ, ಬಂಡವಾಳ ಹಾಕಿದ್ದಾರೆ. ಇನ್ನು ಬಿಜೆ ಭರತ್ ಅವರ ಸಂಗೀತ ನಿರ್ದೇಶನವಿದ್ದು, ಕಿರಣ್ ಹಂಪಾಪುರ ಅವರ ಛಾಯಗ್ರಹಣ 'ಬ್ಯೂಟಿಫುಲ್ ಮನಸ್ಸುಗಳು' ಚಿತ್ರಕ್ಕಿದೆ.