Don't Miss!
- News
ಅಭ್ಯರ್ಥಿ ಯಾರೇ ಆಗಿರಲಿ, ಬಿಜೆಪಿ ಕ್ಲೀನ್ ಸ್ವೀಪ್: ಪ್ರಮೋದ್ ಮಧ್ವರಾಜ್ ಸಂದರ್ಶನ
- Automobiles
Xiaomi ಮೊದಲ ಎಲೆಕ್ಟ್ರಿಕ್ ಕಾರು: ಫುಲ್ ಚಾರ್ಜ್ನಲ್ಲಿ 1000 KM ಓಡಲಿದೆ.. ಫೋಟೋ ಲೀಕ್
- Lifestyle
ಸಂಧಿವಾತ ಮತ್ತು ಉರಿಯೂತಕ್ಕೆ ಈ ಆಯುರ್ವೇದ ಮದ್ದುಗಳು ಪರಿಣಾಮಕಾರಿ
- Sports
ಈ ಇಬ್ಬರಲ್ಲಿ ಈತ ಮಾತ್ರ ಮುಂದಿನ ಟಿ20 ವಿಶ್ವಕಪ್ ಆಡುತ್ತಾನೆ; ವಾಸಿಂ ಜಾಫರ್ ಭವಿಷ್ಯ
- Technology
ಇನ್ಸ್ಟಾಗ್ರಾಮ್ ಬಳಕೆದಾರರೇ ಗಮನಿಸಿ...ಇನ್ಮುಂದೆ ಈ ಸೇವೆಗೆ ಶುಲ್ಕ ಪಾವತಿ ಮಾಡಬೇಕು!?
- Finance
Milk Price: ಅಮುಲ್ ಬಳಿಕ ಈ ಬ್ರ್ಯಾಂಡ್ ಹಾಲಿನ ದರ 3 ರೂಪಾಯಿ ಏರಿಕೆ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಗುರುರಾಜ್ 'ಸಂಕ್ರಾಂತಿ' ಪಕ್ಕಾ ಟೈಮ್ ಪಾಸ್ ಮೂವಿ
ಟೈಮ್ ಪಾಸ್ ಮಾಡಲು ಎಲ್ಲೂ ಕಡಲೆಕಾಯಿ ಕೂಡ ಸಿಗಲಿಲ್ಲ ಎಂದರೆ ಗುರುರಾಜ್ ಜಗ್ಗೇಶ್ ಅವರ 'ಸಂಕ್ರಾಂತಿ' ಚಿತ್ರವನ್ನು ಒಮ್ಮೆ ಕಣ್ಣಾರೆ ನೋಡಿ ಆನಂದಿಸಬಹುದು. ಮುಸ್ಸಂಜೆ ಮಹೇಶ್ ಹಳೆ ಸರಕನ್ನು ನೀಟಾಗಿ ಪ್ಯಾಕ್ ಕೊಟ್ಟಿದ್ದಾರೆ. ಪ್ಯಾಕ್ ಓಪನ್ ಮಾಡಿ ನೋಡಿದರೆ ಸರಕಿನ ಬಂಡವಾಳ ಬಯಲಾಗುತ್ತದೆ.
ಅದೊಂದು ಹಳ್ಳಿಯ ಗೌರಸ್ಥ ಅವಿಭಕ್ತ ಕುಟುಂಬ. ಇಪ್ಪತ್ತು ವರ್ಷಗಳ ಹಿಂದೆ ನಾಯಕನ ತಾಯಿ ಈ ಕುಟುಂಬದಿಂದ ದೂರವಾಗಿರುತ್ತಾಳೆ. ಕಾರಣ ಆಕೆ ಪ್ರೀತಿಸಿ ಮದುವೆಯಾಗಿರುತ್ತಾಳೆ. ತನ್ನ ತಾಯಿಯನ್ನು ಮತ್ತೆ ಒಂದು ಮಾಡಲು ಪಣತೊಡುತ್ತಾನೆ ಚಿತ್ರದ ನಾಯಕ ಸೂರ್ಯಪ್ರಕಾಶ್ (ಗುರುರಾಜ್). ಕಡೆಗೇನಾಗುತ್ತದೆ ಎಂಬುದೇ ಚಿತ್ರದ ಕಥಾವಸ್ತು.
ಈ ರೀತಿಯ ಹಳೆಯ ಸರಕನ್ನು ತೆಲುಗು, ತಮಿಳು ನಿರ್ದೇಶಕರು ಸುತ್ತಿಸುತ್ತಿ ಸುಸ್ತಾಗಿದ್ದಾರೆ. ಈಗ ಅದೇ ರೀತಿಯ ಮಾಲನ್ನು ಹೊಸದಾಗಿ ಸುತ್ತಿ ನೀಡುವಲ್ಲಿ ನಿರ್ದೇಶಕರು ಸೋತಿದ್ದಾರೆ. ಕತೆ ಯಾವುದೇ ಕುತೂಹಲ ರೀತಿಯಲ್ಲಿ ಸಾಗುವುದಿಲ್ಲ. ಸಂಭಾಷಣೆ, ಚಿತ್ರಕತೆ, ಉದ್ದುದ್ದ ಸನ್ನಿವೇಶಗಳು ಚಿತ್ರಕ್ಕೆ ಮುಳುವಾಗಿವೆ.
ಗುರುರಾಜ್ ಜಗ್ಗೇಶ್ ಭಾವನಾತ್ಮಕ ಸನ್ನಿವೇಶಗಳಲ್ಲಿ ಕರ್ಚೀಫ್ಗೆ ಕೈ ಹಾಕುವಂತೆ ಅಭಿನಯಿಸಿದ್ದಾರೆ. ಇನ್ನು ಚಿತ್ರದ ನಾಯಕಿ ರೂಪಶ್ರೀ ಅಭಿನಯ ಅಷ್ಟಕ್ಕಷ್ಟೆ. ಚಿತ್ರದ ತಾಂತ್ರಿಕತೆ ಬಗ್ಗೆ ಮಾತನಾಡದಿರುವುದೇ ವಾಸಿ. ಒಟ್ಟಾರೆಯಾಗಿ ಟೈಮ್ ಪಾಸ್ ಮಾಡಲು ಒಳ್ಳೆಯ ಸಿನಿಮಾ. ಹೋಗಿ ನೋಡಿ ಆನಂದಿಸಿ ಬೇರೆಯವರಿಗೂ ತಿಳಿಸಿ.