Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಾರೆ ನೀ ದೇವತೆ : ಪ್ರೇಕ್ಷಕ ಹಾಫ್ ಮರ್ಡರ್
ಸಿನಿಮಾದಲ್ಲಿ ಕೊಲೆಗಳ ಮೇಲೆ ಕೊಲೆ. ಇತ್ತ ಸಿನಿಮಾದಲ್ಲಿ ಇನ್ನೊಂದು ಸಿನಿಮಾ ಶೂಟಿಂಗ್ ನಡೆಯುತ್ತಿರುತ್ತದೆ. ಅತ್ತ ರಕ್ತ ತರ್ಪಣಕ್ಕೆ ದರ್ಪಣ ಹಿಡಿಯಲಾಗುತ್ತದೆ. ಕೊಲೆಗಾರನನ್ನು ಕಲೆಹಾಕಲು ಯಾರಿಂದಲೂ ಆಗುವು ದಿಲ್ಲ. ಆ ಪಾತಕ ಯಾರು ಎಂದು ಹುಡುಕುವ ಹೊತ್ತಿಗೆ ಪ್ರೇಕ್ಷಕನ ಹಾಫ್ ಮರ್ಡರ್ ಆಗಿರುತ್ತದೆ. ಅಲ್ಲಿಗೆ ಮೊದಲಾರ್ಧ ಮುಕ್ತಾಯ.
ಮುಂದಿನ ಹಂತದಲ್ಲಿ ಹಂತಕ ಮತ್ತೆ ರಕ್ತ ತರ್ಪಣಕ್ಕೆ ಸಜ್ಜಾಗುತ್ತಾನೆ. ಈ ಮಧ್ಯೆ ಒಂದಷ್ಟು ಲವ್ವು, ವಿಕ್ಸ್ ಆಕ್ಷನ್ನು, ಅನಾಸಿನ್ನು,ಹೊಡೆತ ತಿನ್ನು... ನಿರ್ದೇಶಕ ನಾಗೇಂದ್ರ ಅರಸ್ ಮೂರನೇ ಇನ್ನಿಂಗ್ಸ್ನಲ್ಲಿ ಶೂನ್ಯ ಸಂಪಾದನೆ ಮೂಲಕ ಬೌಂಡ್ರಿ ಲೈನ್ನಿಂದ ಹೊರಗುಳಿದಿದ್ದಾರೆ. ಮೊದಲ ಯತ್ನ 'ಹಾರ್ಟ್ ಬೀಟ್ಸ್", ದ್ವಿತೀಯ ಚುಂಬನ 'ರಾಕಿ" ಒಂದು ಹಂತಕ್ಕೆ ಚೆನ್ನಾಗಿಯೇ ಇತ್ತು. ಒಂದಷ್ಟು ವಿಷಯ, ಲವಲವಿಕೆ ಇತ್ತು.
ಆದರೆ 'ಯಾರೇ ನೀ ದೇವತೆ"=ಯಾರೋ... ಯಾರೋ...ಗೀಚಿ... ಹೋದಾ...! ನಾಯಕ ಕುಮಾರ್ ನಟನಾ'ದೇವತೆ"ಯನ್ನು ಒಲಿಸಿಕೊಳ್ಳಲು ಬೆವರು ಹರಿಸಿದ್ದಾರೆ. ಹಾವಭಾವದಲ್ಲಿ ಸೆಳೆತವಿಲ್ಲ. ನಕ್ಕರೆ ಅತ್ತಂತೆ, ಸುಮ್ಮನಿದ್ದರೆ ನಕ್ಕಂತೆ, ಅತ್ತರೆ ಸುಮ್ಮನಿದ್ದಂತೆ ಕಾಣುತ್ತಾರೆ. ಹೊಸ ಪರಿಚಯ ಎಂಬ ಕಾರಣಕ್ಕೆ ಸಹಿಸಿಕೊಳ್ಳಬೇಕು. ನಾಯಕಿ ಸಂಗೀತಾ ಕುಣಿಯಲು ನಿಂತರೆ- ಸ..ನೀ. 'ದಪ್ಪ"..ಮ..ಗ..ರಿ..ಸ... ಅಭಿನಯಕ್ಕೆ ಅಲ್ಲಿ 3ಅಡಿ 6ಅಡಿಯಷ್ಟೂ ಜಾಗವಿಲ್ಲ. ಗಿರಿ ದಿನೇಶ್, ಮೋಹನ್ ಜುನೇಜಾ, ಧರ್ಮ, ಮಳವಳ್ಳಿ ಸಾಯಿಕೃಷ್ಣ ಮೊದಲಾದವರಿಂದ ಕೆಲಸ ತೆಗೆಸಬಹುದಿತ್ತು. ನಿರ್ದೇಶಕರು ಹಾಗೆ ಮಾಡಿಲ್ಲ ಎನ್ನುವುದು ಕಾಮೆಂಟು, ಉಳಿದದ್ದು ಸೆಂಟಿಮೆಂ-ಟು ಒನ್ ಜಾ ಟು, ಟು ಟು ಜಾ ಟೂ ಟೂ ಟೂ...
ನಾಗೇಂದ್ರ ಅರಸ್ ಅವರೇ ತಾವು, ನಿರ್ದೇಶನಕ್ಕಿಂತ ಸಂಕಲನವನ್ನು ಚೆನ್ನಾಗಿ ಮಾಡುತ್ತೀರಿ. ನೀವು ಹೆಣೆದಿರುವ ಕತೆಯ ಎಳೆ ಚೆನ್ನಾಗಿದೆ. ಚಿತ್ರಕತೆ, ಸಂಭಾಷಣೆ, ನಿರೂಪಣೆ ಎಲ್ಲವೂ ಮುಖ್ಯವಾಗುತ್ತದೆ ಎನ್ನುವುದು ನಿಮ್ಮ ತುರ್ತು ಗಮನಕ್ಕೆ. ವೆಂಕಟ್ ನಾರಾಯಣ್ ಸಂಗೀತದಲ್ಲಿ ಎರಡು ಹಾಡುಗಳು ಚೆನ್ನಾಗಿವೆ. ಚಂದ್ರು ಕ್ಯಾಮೆರಾ ಕೆಲಸದ ಬಗ್ಗೆ ಕಾಮೆಂಟ್ ಮಾಡಿದರೆ ತಪ್ಪಾಗುತ್ತದೆ. ಇವೆಲ್ಲ ಚೆನ್ನಾಗಿದ್ದು ನಿಮ್ಮ ಕೆಲಸದಲ್ಲಿ ಹಲವು ಕಡೆ ಅಪಸ್ವರ ಕಾಣುತ್ತದೆ. ನೋಡಿ... ಇನ್ನೊಮ್ಮೆ ಹೀಗಾಗದಂತೆ ನೋಡಿಕೊಳ್ಳಿ... ಮುಂದಿನ ಚಿತ್ರಕ್ಕೆ ಆಲ್ ದಿ ಬೆಸ್ಟ್...! (ಸ್ನೇಹಸೇತು: ವಿಜಯ ಕರ್ನಾಟಕ)