Bharaate Review: ಮಾಸ್ ಪ್ರೇಕ್ಷಕರಿಗೆ ಕಿಕ್ ಹೆಚ್ಚಿಸುವ ಭರಾಟೆ

By ಫಿಲ್ಮಿಬೀಟ್ ಡೆಸ್ಕ್

ಕೆಲದಿನಗಳ ಹಿಂದೆ 'ಭರಾಟೆ' ಸಿನಿಮಾದ ಆಕ್ಷನ್ ಟೀಸರ್ ವೊಂದು ಬಿಡುಗಡೆ ಆಗಿತ್ತು. ಆ ಟೀಸರ್ ತುಂಬ ಫೈಟ್ಸ್ ಗಳು ಇತ್ತು. ಅದೇ ರೀತಿ ಸಿನಿಮಾದ ತುಂಬ ಆಕ್ಷನ್ ತುಂಬಿಕೊಂಡಿದೆ.ಮಾಸ್ ಪ್ರೇಕ್ಷಕರಿಗೆ ಫುಲ್ ಕಿಕ್ ಕೊಡುವಂತೆ ಭರಾಟೆ ಮೂಡಿಬಂದಿದೆ.

Rating:
4.0/5

ರಾಜಸ್ತಾನ್ ಗೈಡ್ ಕರ್ನಾಟಕಕ್ಕೆ ಬಂದ

ರಾಜಸ್ತಾನ್ ಗೈಡ್ ಕರ್ನಾಟಕಕ್ಕೆ ಬಂದ

ಸಿನಿಮಾದಲ್ಲೊಬ್ಬ ರಾಜಸ್ತಾನ್ ಗೈಡ್, ಆತನೇ ನಾಯಕ. ಅವನ ಹೆಸರು ಜಗನ್ ಲೋಹನ್ ರತ್ನಾಕರ (ಶ್ರೀ ಮುರಳಿ). ಆತನಿಗೆ ಹೊಡೆದು ಗಾಯ ಮಾಡುವುದು ಗೊತ್ತು, ಅದಕ್ಕೆ ಆಯುರ್ವೇದ ಚಿಕಿತ್ಸೆ ನೀಡುವುದು ಗೊತ್ತು. ಪ್ರವಾಸಿಗರಿಗೆ ರಾಜಸ್ತಾನ ಸುತ್ತಿಸುವ ಈತನಿಗೆ ಪ್ರವಾಸಕ್ಕೆ ಬಂದ ಹುಡುಗಿ ರಾಧ (ಶ್ರೀ ಲೀಲಾ) ಮೇಲೆ ಲವ್ ಆಗುತ್ತದೆ. ಇದೇ ವೇಳೆಗೆ ರಾಜಸ್ತಾನದ ಹುಡುಗ ಉತ್ತರ ಕರ್ನಾಟಕಕ್ಕೆ ಹೋಗಬೇಕಾದ ಸಂದರ್ಭ ಬರುತ್ತದೆ. ಇಲ್ಲಿಂದ ಸಿನಿಮಾದ ನಿಜವಾದ ಕಥೆ ತೆರೆದುಕೊಳ್ಳುತ್ತದೆ.

ಬಲ್ಲಾಳ.. ಪಲ್ಲವ.. ನಾಯಕರ.. ಆಳ್ವಿಕೆ

ಬಲ್ಲಾಳ.. ಪಲ್ಲವ.. ನಾಯಕರ.. ಆಳ್ವಿಕೆ

ಬಲ್ಲಾಳ.. ಪಲ್ಲವ.. ನಾಯಕ.. ಈ ಮೂರು ಕುಟುಂಬಗಳ ಆಳ್ವಿಕೆ ಜೋರಾಗಿ ಇರುತ್ತದೆ. ಉತ್ತರ ಕರ್ನಾಟಕಕ್ಕೆ ಬರುವ ನಾಯಕ ಈ ಮೂರು ಮನೆತನಗಳ ವಿರುದ್ಧ 'ಯುದ್ಧ' ಮಾಡಬೇಕಾಗುತ್ತದೆ. ಅದು ಯಾಕೆ...?, ಹಾಗಾದರೆ ನಾಯಕನ ಹಿನ್ನಲೆ ಏನು..?, ಈ ಯುದ್ಧದಲ್ಲಿ ಗೆಲ್ಲುವವರು ಯಾರು..? ಎನ್ನುವುದು ಸಿನಿಮಾದ ಕುತೂಹಲಕಾರಿ ಅಂಶಗಳು.

ಸಮರ ಸಾರುವ ಶ್ರೀಮುರಳಿ.. ಸೌಂದರ್ಯವತಿ ಶ್ರೀಲೀಲಾ

ಸಮರ ಸಾರುವ ಶ್ರೀಮುರಳಿ.. ಸೌಂದರ್ಯವತಿ ಶ್ರೀಲೀಲಾ

ನಟ ಶ್ರೀಮುರಳಿ ಮೊದಲ ಬಾರಿಗೆ ದ್ವಿಪಾತ್ರದಲ್ಲಿ ನಟಿಸಿದ್ದಾರೆ. ಎರಡು ಪಾತ್ರಗಳನ್ನು ಅವರು ಚೆನ್ನಾಗಿ ನಿರ್ವಹಿಸಿದ್ದಾರೆ. ನಟನೆ, ಸಾಹಸ, ನೃತ್ಯ ಎಲ್ಲ ಕಡೆ ಶ್ರೀಮುರಳಿಯನ್ನು ತಡೆಯೊರು ಯಾರು ಇಲ್ಲ. ನಾಯಕಿ ಶ್ರೀಲೀಲಾ ತೆರೆ ಮೇಲೆ ತುಂಬ ಚೆನ್ನಾಗಿ ಕಾಣುತ್ತಾರೆ. ಅವರು ಕ್ಯೂಟ್ ನಟನೆ ಇಲ್ಲಿಯೂ ಮುಂದುವರೆದಿದೆ.

ತುಂಬ ದೊಡ್ಡ ಕಲಾವಿದ ಬಳಗ

ತುಂಬ ದೊಡ್ಡ ಕಲಾವಿದ ಬಳಗ

ಸಿನಿಮಾದಲ್ಲಿ ಹಾಸ್ಯ ನಟ ಕುರಿ ಪ್ರತಾಪ್ ರಿಂದ ಹಿಡಿದು, ಹಿರಿಯ ನಟಿ ತಾರ ವರೆಗೆ ಎಷ್ಟೊಂದು ಕಲಾವಿದರು ನಟಿಸಿದ್ದಾರೆ. ಅಷ್ಟೊಂದು ಕಲಾವಿದರಿಗೆ ಅವಕಾಶ ನೀಡಿದ್ದು ಮೆಚ್ಚುವ ವಿಷಯ. ಅದರಲ್ಲಿಯೂ ಬಲ್ಲಾಳ ಸಾಯಿ ಕುಮಾರ್, ಪಲ್ಲವ ರವಿಶಂಕರ್, ತಾರ, ಸುಮನ್, ರಂಗಾಯಣ ರಘು ನಟನೆ ಸಿನಿಮಾಗೆ ಪ್ಲಾಸ್ ಆಗಿದೆ.

ಸಿನಿಮಾಗೆ 'ಜೀವ' ನೀಡಿದ ಆಯುರ್ವೇದ

ಸಿನಿಮಾಗೆ 'ಜೀವ' ನೀಡಿದ ಆಯುರ್ವೇದ

ಸಾಹಸ ದೃಶ್ಯಗಳಿಂದ ಪೆಟ್ಟು ತಿನ್ನುತ್ತಿದ್ದ ಸಿನಿಮಾವನ್ನು ಕಾಪಾಡಿದ್ದು ಆಯುರ್ವೇದ. ಸಿನಿಮಾದ ಕಥೆಯಲ್ಲಿ ಆಯುರ್ವೇದ ಎಂಬ ವಿಷಯ ಇರುವ ಕಾರಣ ಅದು ನಿಜಕ್ಕೂ ಚಿತ್ರಕ್ಕೆ ಜೀವ ನೀಡಿದೆ. ಅದರಲ್ಲಿಯೂ ಕೊನೆಯಲ್ಲಿ ಇರುವ ರತ್ನಾಕರ ಪಾತ್ರ ಸಿನಿಮಾಗೆ ಘನತೆ ನೀಡಿದೆ. ಆಯುರ್ವೇದ ಹಿನ್ನಲೆ, ಆ ಪಾತ್ರ, ಪಾತ್ರದ ಹಾಡು ಇರದಿದ್ದರೆ ಸಿನಿಮಾ ನೋಡುವುದು ಬಹಳ ಕಷ್ಟವಾಗುತ್ತಿತ್ತು.

ಹಾಡು, ಉಳಿದವರ ಪಾಡು

ಹಾಡು, ಉಳಿದವರ ಪಾಡು

ಸಿನಿಮಾದ ಹಾಡುಗಳು ಇಷ್ಟ ಆಗುತ್ತದೆ. ಒಂದು ಹಾಡಿನಲ್ಲಿ ರಚಿತಾ ರಾಮ್ ಬಂದು ಹೊಗುತ್ತಾರೆ. ಹಾಡು ಮತ್ತು ಹೊಡೆದಾಟದ ನಡುವೆ ಪೈಪೋಟಿ ನಡೆದಿದೆ. ಹಾಸ್ಯ ದೃಶ್ಯಗಳು ನಗಿಸುತ್ತವೆ. ಕ್ಯಾಮರಾ ವರ್ಕ್ ಇಷ್ಟ ಆಗುತ್ತದೆ. ಮೇಕಿಂಗ್ ಅದ್ದೂರಿಯಾಗಿದೆ.

ಶ್ರಮ ಕಾಣಿಸುತ್ತದೆ

ಶ್ರಮ ಕಾಣಿಸುತ್ತದೆ

'ಭರಾಟೆ' ದೊಡ್ಡ ಸಿನಿಮಾ. ಆ ಸಿನಿಮಾದಲ್ಲಿ ನಿರ್ದೇಶಕರ ಶ್ರಮ ಕಾಣಿಸುತ್ತದೆ. ಒಂದು ಒಳ್ಳೆಯ ವಿಷಯ ಹೇಳಿರುವುದು ತಿಳಿಯುತ್ತದೆ. ಲವ್, ಕಾಮಿಡಿ, ಸೆಂಟಿಮೆಂಟ್, ಅತಿ ಹೆಚ್ಚು ಆಕ್ಷನ್ ಇರುವ ಈ ಸಿನಿಮಾ ಮಾಸ್ ಅಭಿಮಾನಿಗಳಿಗೆ ರಂಜಿಸಬಹುದು.

More from Filmibeat

English summary
Bharaate kannada movie review.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X