Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಂಧದ ಗುಡಿ ಟ್ರೈಲರ್ ಹೇಗಿದೆ? ಬಿಡುಗಡೆಗೆ 3 ದಿನ ಮುನ್ನವೇ ಟ್ರೈಲರ್ ನೋಡಿದವರು ಹೇಳಿದ್ದಿಷ್ಟು
ಕನ್ನಡದ ರಾಜರತ್ನ ಪುನೀತ್ ರಾಜ್ ಕುಮಾರ್ ನಿಧನ ಹೊಂದಿ ಇದೇ ತಿಂಗಳ 29ಕ್ಕೆ ವರ್ಷ ಕಳೆಯಲಿದೆ. ಈ ದಿನದ ಹಿಂದಿನ ದಿನ ಅಂದರೆ ಅಕ್ಟೋಬರ್ 28ರಂದು ಅಪ್ಪು ಅಭಿನಯದ ಕೊನೆಯ ಚಿತ್ರ ಗಂಧದಗುಡಿ ತೆರೆಗೆ ಅಪ್ಪಳಿಸಲಿದೆ.
ಈ ಗಂಧದ ಗುಡಿ ಸಿನಿಮಾ ಕಮರ್ಷಿಯಲ್ ಚಿತ್ರವಾಗಿರದೇ ಒಂದು ಡಾಕ್ಯುಮೆಂಟರಿ ಚಿತ್ರವಾಗಿದ್ದು, ಯಾರೂ ಕಂಡಿರದ ಕರ್ನಾಟಕದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳನ್ನು ತೆರೆ ಮೇಲೆ ತೋರಿಸಲಾಗುತ್ತದೆ. ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಸ್ವತಃ ತಾವಾಗಿಯೇ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಅಪ್ಪು ಅಭಿನಯಿಸದೇ ತಾವಾಗಿಯೇ ಜೀವಿಸಿರುವ ಗಂಧದ ಗುಡಿ ಚಿತ್ರದ ಮೇಲೆ ಅಪ್ಪು ಫ್ಯಾನ್ಸ್ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಇನ್ನು ಗಂಧದ ಗುಡಿ ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಗೊಂಡಿದ್ದು 4 ಮಿಲಿಯನ್ ಯೂಟ್ಯೂಬ್ ವೀಕ್ಷಣೆ ಪಡೆದುಕೊಂಡು ಸದ್ದು ಮಾಡಿತ್ತು. ಸದ್ಯ ಚಿತ್ರ ಬಿಡುಗಡೆ ದಿನಾಂಕ ಸಮೀಪಿಸುತ್ತಿರುವ ಕಾರಣ ಚಿತ್ರತಂಡ ಚಿತ್ರದ ಟ್ರೈಲರ್ ಅನ್ನು ಅಕ್ಟೋಬರ್ 9ರಂದು ಬಿಡುಗಡೆ ಮಾಡಲು ತೀರ್ಮಾನಿಸಿದೆ. ಹೌದು, ಇದೇ ಭಾನುವಾರ ಬೆಳಗ್ಗೆ 10.19ಕ್ಕೆ ಪಿಆರ್ ಕೆ ಯೂಟ್ಯೂಬ್ ಚಾನೆಲ್ನಲ್ಲಿ ಗಂಧದ ಗುಡಿ ಟ್ರೈಲರ್ ಬಿಡುಗಡೆಗೊಳ್ಳಲಿದೆ. ಇನ್ನು ಟ್ರೈಲರ್ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, 3 ದಿನ ಮುನ್ನವೇ ಟ್ರೈಲರ್ ವೀಕ್ಷಿಸಿದ ಅಪ್ಪು ಅಭಿಮಾನಿಯೋರ್ವರು ಟ್ರೇಲರ್ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
ಟ್ರೈಲರ್ ವೀಕ್ಷಿಸಿದೆ, ಅದು ನಿಮ್ಮನ್ನು ಖಂಡಿತ ಕಾಡುತ್ತದೆ
ಗಂಧದ ಗುಡಿ ಚಿತ್ರದ ಟ್ರೈಲರ್ ಅನ್ನು 3 ದಿನ ಮುಂಚಿತವಾಗಿಯೇ ವೀಕ್ಷಿಸಿರುವುದು ಪುನೀತ್ ರಾಜ್ ಕುಮಾರ್ ಅವರಿಗೆ ಇಂಡಸ್ಟ್ರಿ ಹಿಟ್ ರಾಜಕುಮಾರ ಚಿತ್ರ ನಿರ್ದೇಶಿಸಿದ ನಿರ್ದೇಶಕ ಹಾಗೂ ಅಪ್ಪು ಅಭಿಮಾನಿಯೂ ಆಗಿರುವ ಸಂತೋಷ್ ಆನಂದ್ ರಾಮ್. ಸಾಮಾಜಿಕ ಜಾಲತಾಣದಲ್ಲಿ ಗಂಧದ ಗುಡಿ ಚಿತ್ರದ ಟ್ರೈಲರ್ ಬಿಡುಗಡೆ ಸಮಯ ಘೋಷಣೆಯ ಪೋಸ್ಟ್ ಹಂಚಿಕೊಂಡಿರುವ ಸಂತೋಷ್ ಆನಂದ್ ರಾಮ್ 'ಕನ್ನಡ ಸಿನಿಮಾ ಇತಿಹಾಸದಲ್ಲಿ ಇದೊಂದು ಮೈಲಿಗಲ್ಲಾಗಲಿದೆ, ನಾನು ಈಗಾಗಲೇ ಚಿತ್ರದ ಟ್ರೈಲರ್ ವೀಕ್ಷಿಸಿದ್ದೇನೆ, ಟ್ರೈಲರ್ ನಿಮ್ಮನ್ನು ಕಾಡಲಿದೆ' ಎಂದು ಬರೆದುಕೊಂಡಿದ್ದಾರೆ. ಹಾಗೂ ದೊಡ್ಡ ವ್ಯಕ್ತಿತ್ವದ ಮನುಷ್ಯನನ್ನು ದೊಡ್ಡ ಪರದೆ ಮೇಲೆ ನೋಡುವುದೇ ದೊಡ್ಡ ಸಂಭ್ರಮ ಎಂದೂ ಸಹ ಸಂತೋಷ್ ಆನಂದ್ ರಾಮ್ ಬರೆದುಕೊಂಡಿದ್ದಾರೆ.
ಯುವ ರಾಜ್ಕುಮಾರ್ ಚಿತ್ರಕ್ಕೆ ಸಂತೋಷ್ ನಿರ್ದೇಶನ
ಇನ್ನು ಪುನೀತ್ ರಾಜ್ ಕುಮಾರ್ ಅವರಿಗೆ ರಾಜಕುಮಾರ ಹಾಗೂ ಯುವರತ್ನ ರೀತಿಯ 2 ಅತ್ಯದ್ಭುತ ಚಿತ್ರಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ಸಂತೋಷ್ ಆನಂದ್ ರಾಮ್ ರಾಘವೇಂದ್ರ ರಾಜ್ ಕುಮಾರ್ ಅವರ ಕಿರಿಯ ಪುತ್ರ ಯುವ ರಾಜ್ ಕುಮಾರ್ ಚೊಚ್ಚಲ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಈ ಚಿತ್ರಕ್ಕೂ ವಿಜಯ್ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಲಿದೆ.
ಗಂಧದ ಗುಡಿ ಟ್ರೈಲರ್ ಬಿಡುಗಡೆಗೆ ಶುಭಾಶಯಗಳ ಮಹಾಪೂರ
ಇನ್ನು ಗಂಧದ ಗುಡಿ ಟ್ರೈಲರ್ ದಿನಾಂಕ ಹಾಗೂ ಸಮಯ ಘೋಷಣೆ ಆಗುತ್ತಿದ್ದಂತೆ ಈ ವಿಷಯವನ್ನು ಚಿತ್ರರಂಗದ ಹಲವಾರು ಖ್ಯಾತ ನಿರ್ದೇಶಕ, ಸಂಗೀತ ನಿರ್ದೇಶಕರು ಹಾಗೂ ಕಲಾವಿದರು ಹಂಚಿಕೊಂಡಿದ್ದಾರೆ. ಅದ್ಬುತ ಪಯಣಕ್ಕೆ ಕ್ಷಣಗಣನೆ ಎಂದು ಬರೆದುಕೊಂಡಿರುವ ಕಲಾವಿದರು ಅಪ್ಪು ಅಭಿನಯದ ಅಂತಿಮ ಚಿತ್ರದ ಟ್ರೈಲರ್ ವೀಕ್ಷಿಸಲು ಕಾತರರಾಗಿದ್ದಾರೆ.