Don't Miss!
- Sports IPL 2024: ಗುಜರಾತ್ ತಂಡಕ್ಕೆ ಕಾಡಲಿದೆಯಾ ಹಾರ್ದಿಕ್ ಅನುಪಸ್ಥಿತಿ; ಹೇಗಿರಲಿದೆ ಪ್ಲೇಯಿಂಗ್ ಇಲೆವೆನ್
- News ಬಿಜೆಪಿ ಮೈತ್ರಿ ಧರ್ಮ ಅನುಸರಿಸದಿದ್ರೆ ದಾವಣಗೆರೆಯಲ್ಲಿ ಗೆಲುವು ಕಷ್ಟ: ಜೆಡಿಎಸ್ ಮುಖಂಡರೇ ಹೀಗೆ ಹೇಳಿದ್ಯಾಕೆ?
- Lifestyle 2024 ಮಾರ್ಚ್ 20ಕ್ಕೆ ಅಮಲಕಿ ಏಕಾದಶಿ: ಈ ದಿನ ನೆಲ್ಲಿಕಾಯಿ ಗಿಡ ಪೂಜಿಸುವುದೇಕೆ? ಈ ಏಕಾದಶಿಯ ಮಹತ್ವವೇನು?
- Automobiles ಅದ್ಭುತ ಫೀಚರ್ಸ್ ಪಡೆದುಕೊಂಡ ಟಾಟಾ ಟಿಯಾಗೋ ಇವಿ: ಪ್ರತಿ ಕಿ.ಮೀ ಚಲಿಸಲು ಕೇವಲ 60 ಪೈಸೆ ವೆಚ್ಚ
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಡೀ ಜಗತ್ತಿನ ಮುಂದೆ ಖಷ್ಬೂ ಅದೇನು ಹೇಳ್ಬಿಡ್ತಾರೋ!
ವಿವಾಹ ಪೂರ್ವ ಲೈಂಗಿಕ ಸಂಬಂಧ ತಪ್ಪಲ್ಲ ಎಂಬ ಹೇಳಿಕೆ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದ ನಟಿ ಖುಷ್ಬೂ, ವಿಶ್ವಸಂಸ್ಥೆಯ ಕರೆಯ ಮೇರೆಗೆ ವಿಶ್ವಯುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. 2013 ರಲ್ಲಿ ಕೀನ್ಯಾದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ಮಾತನಾಡುವಂತೆ ನಟಿ ಖುಷ್ಬೂಗೆ ವಿಶ್ವಸಂಸ್ಥೆ ಕರೆನೀಡಿದೆ. ಇದು ಖುಷ್ಬೂಗೆ ಸಖತ್ ಖುಷಿ ನೀಡಿದೆ.
ಕಾರಣ, ಇಂಥದೊಂದು ಬೃಹತ್ ಸಮಾವೇಶದಲ್ಲಿ ಭಾಗವಹಿಸುತ್ತಿರುವ ತಮಿಳಿನ ಪ್ರಪ್ರಥಮ ನಟಿ ಖುಷ್ಬೂ. ಸಂತೋಷವಾಗದಿರುತ್ತದೆಯೇ? ಆದರೆ ಖುಷ್ಬೂ ಸತ್ಯವನ್ನು ಮುಖಕ್ಕೆ ಹೊಡೆದಂತೆ ಹೇಳುವ ಜಾಯಮಾನದವರು. ಅಲ್ಲಿ ಇದ್ದದ್ದನ್ನು ಇದ್ದಂತೆ ಹೇಳಿ ಮತ್ತೆ ವಿವಾದವನ್ನು ಮೈಮೇಲೆ ಎಳೆದುಕೊಳ್ಳದಿದ್ದರೆ ಸಾಕು ಎಂದು ಅವರ ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರಂತೆ.
ಈ ಮೊದಲು 'ವಿವಾಹ ಪೂರ್ವ ಲೈಂಗಿಕ ಸಂಬಂಧ ತಪ್ಪಲ್ಲ' ಎಂಬ ಅವರ ಹೇಳಿಕೆಗೆ ಜನರ ತೀವ್ರ ವಿರೋಧ ಹಾಗೂ ಕೋರ್ಟ್, ಕಾನೂನು ಸಮರದಲ್ಲಿ ಸಿಕ್ಕಿ ಒದ್ದಾಡಿದ್ದರು ಖುಷ್ಬೂ. ಆದರೆ ಕೋರ್ಟ್ ನಲ್ಲಿ ಅವರೇ ವಿಜಯಶಾಲಿಯಾಗಿ ಅವರ ವಿರುದ್ಧ ಹೋಗಿದ್ದ ಜನರಿಗೆ ಮುಖ ಮಂಗಳಾರತಿ ಮಾಡಿಸಿದ್ದಾರೆ ಈಕೆ. ಇದೀಗ ವಿಶ್ವಸಂಸ್ಥೆ ಕರೆದಿದೆ, ಅಲ್ಲಿ ಅದೇನು ಹೇಳುತ್ತಾರೋ ಕಾದು ನೋಡೋಣ. (ಒನ್ ಇಂಡಿಯಾ ಕನ್ನಡ)