Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನೀಕಾಂತ್ ಕರೆಗೆ ಓಗೊಟ್ಟಿದ್ದು ಬರೀ ಹತ್ತು ಜನ
ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಮುಂಬೈನಲ್ಲಿ ಧರಣಿ ಕೂತಿರುವ ಅಣ್ಣಾ ಹಜಾರೆಗೆ ಬೆಂಬಲ ನೀಡಿ, ಚೆನ್ನೈನಲ್ಲಿ ನಡೆಸಲಾಗಿದ್ದ ಮೂರು ದಿನದ ಉಪವಾಸ ಸತ್ಯಾಗ್ರಹದಲ್ಲಿ ಸಾವಿರ ಸಾವಿರ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಚೆನ್ನೈ ನಲ್ಲಿರುವ ತನ್ನ ಪೋಯಸ್ ಗಾರ್ಡನ್ ಮನೆಯಿಂದ ರಜನೀಕಾಂತ್ ಕರೆ ನೀಡಿದ್ದರು.
ಅಷ್ಟೇ ಅಲ್ಲದೆ ಅಣ್ಣಾ ಹೋರಾಟಕ್ಕೆ ಬೆಂಬಲಿಸಿ, ಅದಕ್ಕಾಗಿ ತನ್ನ ಒಡೆತನದ ಚೆನ್ನೈ ಹೃದಯ ಭಾಗದಲ್ಲಿರುವ ಐಷಾರಾಮಿ ರಾಘವೇಂದ್ರಸ್ವಾಮಿ ಕಲ್ಯಾಣ ಮಂಟಪವನ್ನು ಒಂದು ದಿನದ ಮಟ್ಟಿಗೆ ಉಚಿತವಾಗಿ ನೀಡಿದ್ದರು. ರಜನೀಕಾಂತ್ ಕರೆ ನೀಡಿದ್ದಾರೆಂದು ಅರಿತ ಪೊಲೀಸರು ಅಲ್ಲಿ ಭಾರೀ ಬಂದೋಬಸ್ತ್ ನಡೆಸಿದ್ದೇ ನಡೆಸಿದ್ದು. ಆದರೆ ದಿನದ ಅಂತ್ಯಕ್ಕೆ ಅಲ್ಲಿ ಸೇರಿದ್ದು ಬರೀ ಹತ್ತೇ ಹತ್ತು ಜನ.
ಈ ಹಿಂದಿನಿಂದಲೂ ಅಣ್ಣಾ ಹಜಾರೆ ಹೋರಾಟಕ್ಕೆ ತಮಿಳುನಾಡಿನಲ್ಲಿ ಬೆಂಬಲ ವ್ಯಕ್ತವಾಗಿದ್ದು ಕಮ್ಮಿ. ಒಂದು ವೇಳೆ ರಜನೀಕಾಂತ್ ಮುಲ್ಲೈಪೆರಿಯಾರ್ ಆಣೆಕಟ್ಟು ವಿಚಾರದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ಕರೆ ನೀಡಿದ್ದರೆ ಅದರ ಕಥೆಯೇ ಬೇರೆ ಎನ್ನುವುದು ರಜನೀಕಾಂತ್ ಅಭಿಮಾನಿಗಳ ಅಂಬೋಣ.
ರಜನೀಕಾಂತ್ ಆ ಕಲ್ಯಾಣ ಮಂಟಪ ಕಟ್ಟಿಸಿದ್ದು ಕಪ್ಪುಹಣದಿಂದ ಈಗ ಕಪ್ಪುಹಣದ ವಿರುದ್ದ ಹೋರಾಟಕ್ಕೆ ಕರೆನೀಡಿರುವುದು ಹಾಸ್ಯಾಸ್ಪದ ಎಂದು ಮಾಜಿ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಇಳಂಗೋವನ್ ವ್ಯಂಗ್ಯವಾಡಿದ್ದಾರೆ.