ರಜನೀಕಾಂತ್ ಕರೆಗೆ ಓಗೊಟ್ಟಿದ್ದು ಬರೀ ಹತ್ತು ಜನ

Rajanikanth
ನಂಬಿದರೆ ನಂಬಿ, ಬಿಟ್ಟರೆ ಬಿಡಿ. ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಸೂಪರ್ ಸ್ಟಾರ್ ರಜನೀಕಾಂತ್ ಒಂದು ಕರೆ ನೀಡಿದರೆ ಸಾಕು ಅಲ್ಲಿ ಸಾವಿರಾರು ಮಂದಿ ಜಮಾಯಿಸುತ್ತಾರೆ. ಆದರೆ ಬುಧವಾರ (ಡಿ 28) ನಡೆದಿದ್ದೇ ಬೇರೆ.

ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಮುಂಬೈನಲ್ಲಿ ಧರಣಿ ಕೂತಿರುವ ಅಣ್ಣಾ ಹಜಾರೆಗೆ ಬೆಂಬಲ ನೀಡಿ, ಚೆನ್ನೈನಲ್ಲಿ ನಡೆಸಲಾಗಿದ್ದ ಮೂರು ದಿನದ ಉಪವಾಸ ಸತ್ಯಾಗ್ರಹದಲ್ಲಿ ಸಾವಿರ ಸಾವಿರ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಚೆನ್ನೈ ನಲ್ಲಿರುವ ತನ್ನ ಪೋಯಸ್ ಗಾರ್ಡನ್ ಮನೆಯಿಂದ ರಜನೀಕಾಂತ್ ಕರೆ ನೀಡಿದ್ದರು.

ಅಷ್ಟೇ ಅಲ್ಲದೆ ಅಣ್ಣಾ ಹೋರಾಟಕ್ಕೆ ಬೆಂಬಲಿಸಿ, ಅದಕ್ಕಾಗಿ ತನ್ನ ಒಡೆತನದ ಚೆನ್ನೈ ಹೃದಯ ಭಾಗದಲ್ಲಿರುವ ಐಷಾರಾಮಿ ರಾಘವೇಂದ್ರಸ್ವಾಮಿ ಕಲ್ಯಾಣ ಮಂಟಪವನ್ನು ಒಂದು ದಿನದ ಮಟ್ಟಿಗೆ ಉಚಿತವಾಗಿ ನೀಡಿದ್ದರು. ರಜನೀಕಾಂತ್ ಕರೆ ನೀಡಿದ್ದಾರೆಂದು ಅರಿತ ಪೊಲೀಸರು ಅಲ್ಲಿ ಭಾರೀ ಬಂದೋಬಸ್ತ್ ನಡೆಸಿದ್ದೇ ನಡೆಸಿದ್ದು. ಆದರೆ ದಿನದ ಅಂತ್ಯಕ್ಕೆ ಅಲ್ಲಿ ಸೇರಿದ್ದು ಬರೀ ಹತ್ತೇ ಹತ್ತು ಜನ.

ಈ ಹಿಂದಿನಿಂದಲೂ ಅಣ್ಣಾ ಹಜಾರೆ ಹೋರಾಟಕ್ಕೆ ತಮಿಳುನಾಡಿನಲ್ಲಿ ಬೆಂಬಲ ವ್ಯಕ್ತವಾಗಿದ್ದು ಕಮ್ಮಿ. ಒಂದು ವೇಳೆ ರಜನೀಕಾಂತ್ ಮುಲ್ಲೈಪೆರಿಯಾರ್ ಆಣೆಕಟ್ಟು ವಿಚಾರದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ಕರೆ ನೀಡಿದ್ದರೆ ಅದರ ಕಥೆಯೇ ಬೇರೆ ಎನ್ನುವುದು ರಜನೀಕಾಂತ್ ಅಭಿಮಾನಿಗಳ ಅಂಬೋಣ.

ರಜನೀಕಾಂತ್ ಆ ಕಲ್ಯಾಣ ಮಂಟಪ ಕಟ್ಟಿಸಿದ್ದು ಕಪ್ಪುಹಣದಿಂದ ಈಗ ಕಪ್ಪುಹಣದ ವಿರುದ್ದ ಹೋರಾಟಕ್ಕೆ ಕರೆನೀಡಿರುವುದು ಹಾಸ್ಯಾಸ್ಪದ ಎಂದು ಮಾಜಿ ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಇಳಂಗೋವನ್ ವ್ಯಂಗ್ಯವಾಡಿದ್ದಾರೆ.

More from Filmibeat

English summary
It was expected huge number of Rajinikanth fans will turn up for three-day-fast supporting Anna Hazare by Super Star Rajanikanth. But at the end only Ten people turned up.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X