Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾರ್ತಿ ಹೇಳಿದ ಮಾತಿಗೆ ಭಾವುಕರಾದ ರಶ್ಮಿಕಾ: ಅಳಿಸಬೇಡಿ ಎಂದು ಮನವಿ
ಕನ್ನಡತಿ, ನಟಿ ರಶ್ಮಿಕಾ ಮಂದಣ್ಣ ಕಡಿಮೆ ಸಮಯದಲ್ಲಿಯೇ ತಮ್ಮ ಪ್ರತಿಭೆಯಿಂದ ಕನ್ನಡ, ತೆಲುಗು, ತಮಿಳು ಈಗ ಹಿಂದಿ ಸಿನಿಮಾರಂಗದಲ್ಲಿಯೂ ಅವಕಾಶಗಳನ್ನು ಬಾಚಿಕೊಂಡಿದ್ದಾರೆ. ಬೆಳೆಯುತ್ತಲೇ ಸಾಗುತ್ತಿದ್ದಾರೆ.
Recommended Video
ಪರಭಾಷೆ ಸ್ಟಾರ್ ನಟರಾದ ಮಹೇಶ್ ಬಾಬು, ಅಲ್ಲು ಅರ್ಜುನ್, ವಿಜಯ್ ದೇವರಕೊಂಡ, ನಾನಿ, ನಾಗಾರ್ಜುನ, ನಿತಿನ್, ತಮಿಳಿನ ಕಾರ್ತಿ ಹೀಗೆ ಹಲವರೊಂದಿಗೆ ತೆರೆ ಹಂಚಿಕೊಂಡು, ನಾಯಕ ನಟರ ಅಭಿನಯಕ್ಕೆ ಸೆಡ್ಡು ಕೊಡುವ ರೀತಿಯಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ ರಶ್ಮಿಕಾ.
ರಶ್ಮಿಕಾ ಹಾಗೂ ನಟ ಕಾರ್ತಿ ನಟಿಸಿರುವ 'ಸುಲ್ತಾನ್' ತಮಿಳು ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾಕ್ಕೆ ಒಳ್ಳೆಯ ಓಪನಿಂಗ್ ಸಿಕ್ಕಿದ್ದಕ್ಕೆ ಹಾಗೂ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿರುವ ಕಾರಣ ಆ ಸಂತಸ ಹಂಚಿಕೊಳ್ಳಲು ಸಿನಿಮಾ ತಂಡವು ಕಾರ್ಯಕ್ರಮವೊಂದನ್ನು ಇಂದು (ಏಪ್ರಿಲ್ 07) ಹಮ್ಮಿಕೊಂಡಿತ್ತು.
ರಶ್ಮಿಕಾ ಅವರನ್ನು ನೆನಪಿಸಿಕೊಳ್ಳುವುದು ಮರೆಯಲಿಲ್ಲ
ಬಾಲಿವುಡ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ 'ಸುಲ್ತಾನ್' ಸಿನಿಮಾದ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ. ಆದರೆ ರಶ್ಮಿಕಾರನ್ನು ನೆನಪಿಸಿಕೊಳ್ಳುವುದನ್ನು ಅವರಿಗೆ ಧನ್ಯವಾದ ಅರ್ಪಿಸುವುದನ್ನು ಚಿತ್ರತಂಡ ಮರೆಯಲಿಲ್ಲ.
ರಶ್ಮಿಕಾರ ಅಭಿಮಾನಿ ವರ್ಗದಿಂದ ದೊಡ್ಡ ಓಪನಿಂಗ್: ಕಾರ್ತಿ
ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಕಾರ್ತಿ, 'ರಶ್ಮಿಕಾ ಮಂದಣ್ಣ ಅವರಿಗೆ ಇರುವ ದೊಡ್ಡ ಅಭಿಮಾನಿ ವರ್ಗ, 'ಸುಲ್ತಾನ್' ಸಿನಿಮಾಕ್ಕೆ ಒಳ್ಳೆಯ ಓಪನಿಂಗ್ ಸಿಗಲು ಮುಖ್ಯ ಕಾರಣಗಳಲ್ಲಿ ಒಂದು' ಎಂದು ಹೇಳಿದರು. ಅಲ್ಲದೆ ರಶ್ಮಿಕಾ ಅವರ ಶ್ರಮ, ನಟನೆಯನ್ನು ಹೊಗಳಿದರು ಕಾರ್ತಿ.
ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ನಟಿ ರಶ್ಮಿಕಾ
ಕಾರ್ತಿ, ರಶ್ಮಿಕಾರ ಬಗ್ಗೆ ಆಡಿದ ಮಾತುಗಳನ್ನು ಸಿನಿಮಾ ಪತ್ರಕರ್ತ ರಮೇಶ್ ಬಾಲಾ ಟ್ವೀಟ್ ಮಾಡಿದ್ದಾರೆ. ಆ ಟ್ವೀಟ್ಗೆ ಪ್ರತಿಕ್ರಿಯಿಸಿರುವ ರಶ್ಮಿಕಾ ಮಂದಣ್ಣ, 'ಇಷ್ಟೋಂದು ಪ್ರೀತಿಯಿಂದ ಮಾತನಾಡಬೇಡಿ ಕಾರ್ತಿ ಸರ್, ನನಗೆ ಅಳು ಬಂದು ಬಿಡುತ್ತದೆ. ಸಿನಿಮಾ ಗೆಲ್ಲುತ್ತಿರುವುದು ಎಲ್ಲರಿಂದ, ನಾವೆಲ್ಲರೂ ಒಟ್ಟಿಗೆ ಹಾಕಿದ ಶ್ರಮದಿಂದ' ಎಂದಿದ್ದಾರೆ ರಶ್ಮಿಕಾ ಮಂದಣ್ಣ.
ಬಾಲಿವುಡ್ ಸಿನಿಮಾಗಳತ್ತ ರಶ್ಮಿಕಾ ಚಿತ್ತ
ಸುಲ್ತಾನ್ ಸಿನಿಮಾವು ರಶ್ಮಿಕಾ ಮಂದಣ್ಣ ನಟಿಸಿರುವ ಮೊದಲ ತಮಿಳು ಸಿನಿಮಾ. ಪ್ರಸ್ತುತ ಹಿಂದಿ ಸಿನಿಮಾಗಳತ್ತ ಗಮನ ಹರಿಸಿರುವ ರಶ್ಮಿಕಾ, ಸಿದ್ಧಾರ್ಥ್ ಮಲ್ಹೋತ್ರಾ ಜೊತೆಗೆ 'ಮಿಷನ್ ಮಜ್ನು' ಹಾಗೂ ಅಮಿತಾಬ್ ಬಚ್ಚನ್ ಜೊತೆಗೆ 'ಗುಡ್ ಬೈ' ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತೆಲುಗಿನಲ್ಲಿ ಅಲ್ಲು ಅರ್ಜುನ್ ಜೊತೆಗೆ 'ಪುಷ್ಪ' ಸಿನಿಮಾದಲ್ಲಿಯೂ ರಶ್ಮಿಕಾ ನಟಿಸಿದ್ದಾರೆ.