Don't Miss!
- News ಮಳೆ.. ಮಳೆ.. ಅಲ್ಲಲ್ಲ ಮುಂದಿನ 1 ವಾರ ಬೆಂಗಳೂರಲ್ಲಿ ಭಾರಿ ಬಿಸಿಲು!
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Lifestyle ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾರ್ತಿ ಹೇಳಿದ ಮಾತಿಗೆ ಭಾವುಕರಾದ ರಶ್ಮಿಕಾ: ಅಳಿಸಬೇಡಿ ಎಂದು ಮನವಿ
ಕನ್ನಡತಿ, ನಟಿ ರಶ್ಮಿಕಾ ಮಂದಣ್ಣ ಕಡಿಮೆ ಸಮಯದಲ್ಲಿಯೇ ತಮ್ಮ ಪ್ರತಿಭೆಯಿಂದ ಕನ್ನಡ, ತೆಲುಗು, ತಮಿಳು ಈಗ ಹಿಂದಿ ಸಿನಿಮಾರಂಗದಲ್ಲಿಯೂ ಅವಕಾಶಗಳನ್ನು ಬಾಚಿಕೊಂಡಿದ್ದಾರೆ. ಬೆಳೆಯುತ್ತಲೇ ಸಾಗುತ್ತಿದ್ದಾರೆ.
Recommended Video
ಪರಭಾಷೆ ಸ್ಟಾರ್ ನಟರಾದ ಮಹೇಶ್ ಬಾಬು, ಅಲ್ಲು ಅರ್ಜುನ್, ವಿಜಯ್ ದೇವರಕೊಂಡ, ನಾನಿ, ನಾಗಾರ್ಜುನ, ನಿತಿನ್, ತಮಿಳಿನ ಕಾರ್ತಿ ಹೀಗೆ ಹಲವರೊಂದಿಗೆ ತೆರೆ ಹಂಚಿಕೊಂಡು, ನಾಯಕ ನಟರ ಅಭಿನಯಕ್ಕೆ ಸೆಡ್ಡು ಕೊಡುವ ರೀತಿಯಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ ರಶ್ಮಿಕಾ.
ರಶ್ಮಿಕಾ ಹಾಗೂ ನಟ ಕಾರ್ತಿ ನಟಿಸಿರುವ 'ಸುಲ್ತಾನ್' ತಮಿಳು ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾಕ್ಕೆ ಒಳ್ಳೆಯ ಓಪನಿಂಗ್ ಸಿಕ್ಕಿದ್ದಕ್ಕೆ ಹಾಗೂ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿರುವ ಕಾರಣ ಆ ಸಂತಸ ಹಂಚಿಕೊಳ್ಳಲು ಸಿನಿಮಾ ತಂಡವು ಕಾರ್ಯಕ್ರಮವೊಂದನ್ನು ಇಂದು (ಏಪ್ರಿಲ್ 07) ಹಮ್ಮಿಕೊಂಡಿತ್ತು.
ರಶ್ಮಿಕಾ ಅವರನ್ನು ನೆನಪಿಸಿಕೊಳ್ಳುವುದು ಮರೆಯಲಿಲ್ಲ
ಬಾಲಿವುಡ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ 'ಸುಲ್ತಾನ್' ಸಿನಿಮಾದ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ. ಆದರೆ ರಶ್ಮಿಕಾರನ್ನು ನೆನಪಿಸಿಕೊಳ್ಳುವುದನ್ನು ಅವರಿಗೆ ಧನ್ಯವಾದ ಅರ್ಪಿಸುವುದನ್ನು ಚಿತ್ರತಂಡ ಮರೆಯಲಿಲ್ಲ.
ರಶ್ಮಿಕಾರ ಅಭಿಮಾನಿ ವರ್ಗದಿಂದ ದೊಡ್ಡ ಓಪನಿಂಗ್: ಕಾರ್ತಿ
ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಕಾರ್ತಿ, 'ರಶ್ಮಿಕಾ ಮಂದಣ್ಣ ಅವರಿಗೆ ಇರುವ ದೊಡ್ಡ ಅಭಿಮಾನಿ ವರ್ಗ, 'ಸುಲ್ತಾನ್' ಸಿನಿಮಾಕ್ಕೆ ಒಳ್ಳೆಯ ಓಪನಿಂಗ್ ಸಿಗಲು ಮುಖ್ಯ ಕಾರಣಗಳಲ್ಲಿ ಒಂದು' ಎಂದು ಹೇಳಿದರು. ಅಲ್ಲದೆ ರಶ್ಮಿಕಾ ಅವರ ಶ್ರಮ, ನಟನೆಯನ್ನು ಹೊಗಳಿದರು ಕಾರ್ತಿ.
ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ನಟಿ ರಶ್ಮಿಕಾ
ಕಾರ್ತಿ, ರಶ್ಮಿಕಾರ ಬಗ್ಗೆ ಆಡಿದ ಮಾತುಗಳನ್ನು ಸಿನಿಮಾ ಪತ್ರಕರ್ತ ರಮೇಶ್ ಬಾಲಾ ಟ್ವೀಟ್ ಮಾಡಿದ್ದಾರೆ. ಆ ಟ್ವೀಟ್ಗೆ ಪ್ರತಿಕ್ರಿಯಿಸಿರುವ ರಶ್ಮಿಕಾ ಮಂದಣ್ಣ, 'ಇಷ್ಟೋಂದು ಪ್ರೀತಿಯಿಂದ ಮಾತನಾಡಬೇಡಿ ಕಾರ್ತಿ ಸರ್, ನನಗೆ ಅಳು ಬಂದು ಬಿಡುತ್ತದೆ. ಸಿನಿಮಾ ಗೆಲ್ಲುತ್ತಿರುವುದು ಎಲ್ಲರಿಂದ, ನಾವೆಲ್ಲರೂ ಒಟ್ಟಿಗೆ ಹಾಕಿದ ಶ್ರಮದಿಂದ' ಎಂದಿದ್ದಾರೆ ರಶ್ಮಿಕಾ ಮಂದಣ್ಣ.
ಬಾಲಿವುಡ್ ಸಿನಿಮಾಗಳತ್ತ ರಶ್ಮಿಕಾ ಚಿತ್ತ
ಸುಲ್ತಾನ್ ಸಿನಿಮಾವು ರಶ್ಮಿಕಾ ಮಂದಣ್ಣ ನಟಿಸಿರುವ ಮೊದಲ ತಮಿಳು ಸಿನಿಮಾ. ಪ್ರಸ್ತುತ ಹಿಂದಿ ಸಿನಿಮಾಗಳತ್ತ ಗಮನ ಹರಿಸಿರುವ ರಶ್ಮಿಕಾ, ಸಿದ್ಧಾರ್ಥ್ ಮಲ್ಹೋತ್ರಾ ಜೊತೆಗೆ 'ಮಿಷನ್ ಮಜ್ನು' ಹಾಗೂ ಅಮಿತಾಬ್ ಬಚ್ಚನ್ ಜೊತೆಗೆ 'ಗುಡ್ ಬೈ' ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತೆಲುಗಿನಲ್ಲಿ ಅಲ್ಲು ಅರ್ಜುನ್ ಜೊತೆಗೆ 'ಪುಷ್ಪ' ಸಿನಿಮಾದಲ್ಲಿಯೂ ರಶ್ಮಿಕಾ ನಟಿಸಿದ್ದಾರೆ.